Featured

ಕಟಪಾಡಿ ಅಂಡರ್‌ಪಾಸ್ : ವಾರದೊಳಗೆ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ ಅಂಡರ್‌ಪಾಸ್  ವಾರದೊಳಗೆ ವಾಹನ ಸಂಚಾರಕ್ಕೆ ಮುಕ್ತ

ಕಟಪಾಡಿ: ರಾ. ಹೆ. 66ರ ಕಟಪಾಡಿ ಜಂಕ್ಷನ್‌ನಲ್ಲಿ ಅಂಡರ್‌ಪಾಸ್ ಮತ್ತು ವೆಹಿಕಲ್ ಓವರ್‌ಪಾಸ್ ನಿರ್ಮಾಣದಲ್ಲಿ ಪಶ್ಚಿಮಪಾರ್ಶ್ವ ಕಾಮಗಾರಿಯ ಶೇ. 80 ಭಾಗ ಪೂರ್ಣಗೊಂಡಿದ್ದು, ಅಂಡರ್‌ಪಾಸ್ ರಸ್ತೆ ವಾರದೊಳಗಾಗಿ ಮಂಗಳೂರಿನಿಂದ ಉಡುಪಿಗೆ ಆಗಮಿಸುವ ವಾಹನಗಳ ಸಂಚಾರಕ್ಕೆ ತೆರೆದುಕೊಳ್ಳಲಿದೆ.
ಅಂಡರ್‌ಪಾಸ್‌ ಕಾಮಗಾರಿ ನಡೆಯುತ್ತಿರುವ ಪಶ್ಚಿಮ ಪಾರ್ಶ್ವದಲ್ಲಿ ರಿಟೈನಿಂಗ್ ವಾಲ್, ಡ್ರೈನೇಜ್, ಫೌಂಡೇಶನ್ ರಾವ್, ಕ್ಯಾಶ್ ಗಾರ್ಡ್ ಬ್ಯಾರಿಯರ್ ಕೆಲಸ ಬಹುತೇಕ ಪೂರ್ಣಗೊಂಡಿದೆ. ಹೆದ್ದಾರಿ ನಿರ್ಮಾಣದ ಪ್ರದೇಶದಲ್ಲಿ ವೆಟ್‌ಮಿಕ್ಸ್ ಅಳವಡಿಕೆ ಪ್ರಗತಿಯಲ್ಲಿದೆ. ಡಾಮರು ಕಾಮಗಾರಿ ಬಳಿಕ 11 ಮೀ. ಅಗಲದ ಪಶ್ಚಿಮ ಪಾರ್ಶ್ವ ವಾಹನಗಳ ಸಂಚಾರಕ್ಕೆ ಮುಕ್ತವಾಗಲಿದೆ.

ಬಳಿಕ ಪೂರ್ವ ಪಾರ್ಶ್ವದ ಅಂಡರ್‌ಾಸ್ ಕಾಮಗಾರಿ ಕೈಗೆತ್ತಿಕೊಳ್ಳಲಿದ್ದು, ವೆಹಿಕಲ್ ಓವರ್‌ಪಾಸ್ ಕೂಡಾ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಲಿದೆ ಎಂಬ ವಿಶ್ವಾಸ ಎಂಜಿನಿ ಯರ್ ವಲಯದಲ್ಲಿ ವ್ಯಕ್ತವಾಗಿದೆ. ಮಂಗಳೂರಿನತ್ತ ತೆರಳುವ ವಾಹನ ಸಂಚಾರ ವ್ಯವಸ್ಥೆ ಈಗಿರುವ ಮಾದರಿಯಲ್ಲಿಯೇ ಮುಂದುವರಿಯಲಿದೆ.

ಇದನ್ನೂ ಓದಿ:

 

17 ಕೋಟಿ ರೂ. ವೆಚ್ಚದಲ್ಲಿ ರಾ. ಹೆ. ಅಂಡರ್‌ಪಾಸ್ ಮತ್ತು ವೆಹಿಕಲ್ ಓವರ್‌ಪಾಸ್ ನಿರ್ಮಾಣ ಕಾಮಗಾರಿ ಕಿನ್ನಿಮೂಲ್ಕಿ ಮಾದರಿಯಲ್ಲಿ ನಡೆಯುತ್ತಿದೆ. ಕಟಪಾಡಿ ಜಂಕ್ಷನ್‌ನಿಂದ ಮಂಗಳೂರು-ಉಡುಪಿ ಭಾಗದತ್ತ ಒಟ್ಟು 535 ಮೀ. ಉದ್ದದವರೆಗಿನ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, 5.5 ಮೀ. ಎತ್ತರ ಹೊಂದಿರುತ್ತದೆ. ನ್ಯಾಶನಲ್ ಇನ್‌ಫ್ರಾ ಪ್ರಾಜೆಕ್ಟ್ ಕಂಪೆನಿ ಕಾಮಗಾರಿ ನಿರ್ವಹಿಸುತ್ತಿದೆ. 2025ರ ನವೆಂಬರ್‌ನಲ್ಲಿ ಕಾಮಗಾರಿ ಆರಂಭಗೊಂಡಿತ್ತು.

ರಾ. ಹೆ. 66ರ ಶಿರ್ವ ರಸ್ತೆಯ ಭಾಗದಿಂದ ಕಟಪಾಡಿ ಪೇಟೆಯೊಳಕ್ಕೆ (ಪೂರ್ವ, ಪಶ್ಚಿಮ ಭಾಗಕ್ಕೆ) ಬಂದು ಹೋಗುವ ಪಾದಚಾರಿಗಳ ಸುರಕ್ಷೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕಿದೆ. ಸಾಕಷ್ಟು ಮಾರ್ಗಸೂಚಿ ಫಲಕಗಳು, ವಾಹನಗಳ ವೇಗ ನಿಯಂತ್ರಣ ಸಹಿತ ಹೈಮಾಸ್ಟ್ ಲೈಟ್‌ಗಳನ್ನು ಅಳವಡಿಸಿ ಸುರಕ್ಷ ಕ್ರಮ ಅನುಸರಿಸುವಂತೆ ನಾಗರಿಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ:

ಶೇ. 80 ಭಾಗ ಕಾಮಗಾರಿ ಪೂರ್ಣಗೊಂಡಿದೆ. ವೆಟ್‌ಮಿಕ್ಸ್ ಅಳವಡಿಸುವ ಕಾಮಗಾರಿ ಪ್ರಗತಿ ಯಲ್ಲಿದೆ. ಬಳಿಕ ಡಾಮರು ಕಾಮಗಾರಿ ನಡೆಸಲಾಗುತ್ತದೆ. ವಾರದೊಳಗಾಗಿ ಉಡುಪಿ ಭಾಗದತ್ತ ವಾಹನಗಳನ್ನು ಇದೇ ರಸ್ತೆಯಲ್ಲಿ ಸಂಚಾರಕ್ಕೆ ಬಿಡಲಾಗುತ್ತದೆ. ಮಂಗಳೂರು ಭಾಗದತ್ತ ತೆರಳುವ ವಾಹನಗಳ ಸಂಚಾರ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ.
– ಮೊಹಿದ್ದೀನ್, ಸೈಟ್ ಎಂಜಿನಿಯರ್

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago