ಕಟಪಾಡಿ : ಸಮಾಜ ಸೇವಕ ರವಿ ಕಟಪಾಡಿ ಅವರು ಅಷ್ಟಮಿ ವೇಷಧಾರಿಯಾಗಿ ಸಂಗ್ರಹಿಸಿದ ಸುಮಾರು 5 ಲಕ್ಷ ರೂ. ಮೊತ್ತವನ್ನು ಬಡ ಕುಟುಂಬದ ಅನಾರೋಗ್ಯ ಪೀಡಿತ ನಾಲ್ವರು ಮಕ್ಕಳ ವೈದ್ಯಕೀಯ ಚಿಕಿತ್ಸೆಗೆ ಹಸ್ತಾಂತರ ಮಾಡಿದರು. ಕಟಪಾಡಿ ಶ್ರೀ ಕ್ಷೇತ್ರ ಪೇಟೆಬೆಟ್ಟುವಿನ ಭಗವಾನ್ ಶ್ರೀ ಬಬ್ಬುಸ್ವಾಮಿ ಹಾಗೂ ಶ್ರೀ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಹಸ್ತಾಂತರ ಕಾರ್ಯಕ್ರಮ ನಡೆಯಿತು.
ಈ ಬಾರಿಯ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂದರ್ಭ ಅವತಾರ್ -2 ವೇಷಧಾರಿಯಾಗಿ ಸಂಗ್ರಹಿಸಿದ 5 ಲಕ್ಷವನ್ನು ಕಾರ್ಕಳದ ಅನ್ವಿತ್ ವೈ, ಉದ್ಯಾವರದ ಮೌನೇಶ್ ಸಹಿತ ಇತರ ನಾಲ್ವರು ಮಕ್ಕಳ ಪಾಲಕರಿಗೆ ಹಸ್ತಾಂತರಿಸಿದರು. ಶ್ರೀ ಕ್ಷೇತ್ರ ಪೇಟೆಬೆಟ್ಟು ಗುರಿಕಾರ ಹರೀಶ್ಚಂದ್ರ ಪಿಲಾರು, ಮುಖ್ಯಸ್ಥ ತುಕಾರಾಮ್ ಎಸ್. ಉರ್ವ, ಕಲಾವಿದ ದಿನೇಶ್ ಮಟ್ಟು ರವಿ ಕಟಪಾಡಿ ತಂಡದ ಸದಸ್ಯರ ಸಮಕ್ಷಮದಲ್ಲಿ ಕಾರ್ಯಕ್ರಮ ನಡೆಯಿತು.
ಸೆಂಟ್ರಿಂಗ್ ವೃತ್ತಿ ನಡೆಸುವ ರವಿ ಕಟಪಾಡಿ ಅವರು ಈವರೆಗೆ 10 ವರ್ಷಗಳಿಂದ ಅಷ್ಟಮಿಯ ವೇಷಧಾರಿಯಾಗಿ ಸಂಗ್ರಹಿಸಿದ 1 ಕೋಟಿ 33 ಲಕ್ಷ ರೂ.ನ್ನು ಒಟ್ಟು 136 ಮಕ್ಕಳ ವೈದ್ಯಕೀಯ ಚಿಕಿತ್ಸೆಗಾಗಿ ನೀಡಿದಂತಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…