ಕಟಪಾಡಿ : ಸಮಾಜ ಸೇವಕ ರವಿ ಕಟಪಾಡಿ ಅವರು ಅಷ್ಟಮಿ ವೇಷಧಾರಿಯಾಗಿ ಸಂಗ್ರಹಿಸಿದ ಸುಮಾರು 5 ಲಕ್ಷ ರೂ. ಮೊತ್ತವನ್ನು ಬಡ ಕುಟುಂಬದ ಅನಾರೋಗ್ಯ ಪೀಡಿತ ನಾಲ್ವರು ಮಕ್ಕಳ ವೈದ್ಯಕೀಯ ಚಿಕಿತ್ಸೆಗೆ ಹಸ್ತಾಂತರ ಮಾಡಿದರು. ಕಟಪಾಡಿ ಶ್ರೀ ಕ್ಷೇತ್ರ ಪೇಟೆಬೆಟ್ಟುವಿನ ಭಗವಾನ್ ಶ್ರೀ ಬಬ್ಬುಸ್ವಾಮಿ ಹಾಗೂ ಶ್ರೀ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಹಸ್ತಾಂತರ ಕಾರ್ಯಕ್ರಮ ನಡೆಯಿತು.
ಈ ಬಾರಿಯ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂದರ್ಭ ಅವತಾರ್ -2 ವೇಷಧಾರಿಯಾಗಿ ಸಂಗ್ರಹಿಸಿದ 5 ಲಕ್ಷವನ್ನು ಕಾರ್ಕಳದ ಅನ್ವಿತ್ ವೈ, ಉದ್ಯಾವರದ ಮೌನೇಶ್ ಸಹಿತ ಇತರ ನಾಲ್ವರು ಮಕ್ಕಳ ಪಾಲಕರಿಗೆ ಹಸ್ತಾಂತರಿಸಿದರು. ಶ್ರೀ ಕ್ಷೇತ್ರ ಪೇಟೆಬೆಟ್ಟು ಗುರಿಕಾರ ಹರೀಶ್ಚಂದ್ರ ಪಿಲಾರು, ಮುಖ್ಯಸ್ಥ ತುಕಾರಾಮ್ ಎಸ್. ಉರ್ವ, ಕಲಾವಿದ ದಿನೇಶ್ ಮಟ್ಟು ರವಿ ಕಟಪಾಡಿ ತಂಡದ ಸದಸ್ಯರ ಸಮಕ್ಷಮದಲ್ಲಿ ಕಾರ್ಯಕ್ರಮ ನಡೆಯಿತು.
ಸೆಂಟ್ರಿಂಗ್ ವೃತ್ತಿ ನಡೆಸುವ ರವಿ ಕಟಪಾಡಿ ಅವರು ಈವರೆಗೆ 10 ವರ್ಷಗಳಿಂದ ಅಷ್ಟಮಿಯ ವೇಷಧಾರಿಯಾಗಿ ಸಂಗ್ರಹಿಸಿದ 1 ಕೋಟಿ 33 ಲಕ್ಷ ರೂ.ನ್ನು ಒಟ್ಟು 136 ಮಕ್ಕಳ ವೈದ್ಯಕೀಯ ಚಿಕಿತ್ಸೆಗಾಗಿ ನೀಡಿದಂತಾಗಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…