Featured

ಕಟಪಾಡಿ : ಇಡಿ ತನಿಖೆ ಹೆಸರಿನಲ್ಲಿ ವ್ಯಕ್ತಿಗೆ 40 ಲಕ್ಷ ರೂ. ಆನ್‌ಲೈನ್ ವಂಚನೆ: ಪ್ರಕರಣ ದಾಖಲು – vishwanews24

ಕಟಪಾಡಿ : ಇಡಿ ತನಿಖೆ ಹೆಸರಿನಲ್ಲಿ ವ್ಯಕ್ತಿಗೆ 40 ಲಕ್ಷ ರೂ. ಆನ್‌ಲೈನ್ ವಂಚನೆ: ಪ್ರಕರಣ ದಾಖಲು

ಉಡುಪಿ : ಇಡಿ ತನಿಖೆ ಹೆಸರಿನಲ್ಲಿ ಕಟಪಾಡಿಯ ವ್ಯಕ್ತಿಯೊಬ್ಬರಿಗೆ 40ಲಕ್ಷ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಟಪಾಡಿ ಕಲ್ತಟ್ಟ ನಿವಾಸಿ ಕೆ.ರಾಘವೇಂದ್ರ ರಾವ್(45) ಎಂಬವರ ಮೊಬೈಲ್‌ಗೆ ಜ.11ರಂದು ಭಾರತೀಯ ದೂರವಾಣಿ ನಿಯಂತ್ರಣ ಪ್ರಾಧಿಕಾರದಿಂದ ಮಾತನಾಡುವುದಾಗಿ ಹೇಳಿ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದನು. ‘ನಿಮ್ಮ ಹೆಸರಿನಲ್ಲಿರುವ ಮೊಬೈಲ್ ಸಂಖ್ಯೆಯಿಂದ ಕಾನೂನುಬಾಹಿರ ಚಟುವಟಿಕೆ ಗಳು ಹಾಗೂ ಬೆದರಿಕೆ ಕರೆಗಳನ್ನು ಮಾಡುತ್ತಿರುವುದಾಗಿ ಮುಂಬೈ ಕೊಲಾಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ನೀವು ಕೂಡಲೇ ಠಾಣೆಯನ್ನು ಸಂಪರ್ಕಿಸಿ ಎನ್‌ಓಸಿ ಪಡೆದು ಕಳುಹಿಸಿ, ಇಲ್ಲವಾದಲ್ಲಿ ನಿಮ್ಮ ಮೊಬೈಲ್ ಸಂಖ್ಯೆಯನ್ನು 2 ಗಂಟೆಯ ಒಳಗೆ ನಿಷ್ಕ್ರೀಯ ಗೊಳಿಸಲಾಗುವುದು’ ಎಂದು ಆತ ತಿಳಿಸಿದ್ದನು.

ಅಲ್ಲದೇ ಕರೆಯನ್ನು ಕೊಲಾಬಾ ಪೊಲೀಸ್ ಠಾಣೆಗೆ ವರ್ಗಾಯಿಸುವುದಾಗಿ ತಿಳಿಸಿ ಕರೆಯನ್ನು ಇನ್ನೊಂದು ನಂಬರ್‌ಗೆ ವರ್ಗಾಯಿಸಿದನು.ಅದರಲ್ಲಿ ಕೊಲಾಬಾ ಪೊಲೀಸ್ ಠಾಣೆಯ ಪೊಲೀಸ್ ಎಂದು ಹೇಳಿಕೊಂಡು ಮಾತನಾಡಿದ ವ್ಯಕ್ತಿ, ನಿಮ್ಮ ಮೊಬೈಲ್ ಸಂಖ್ಯೆಯನ್ನು ಉಪಯೋಗಿಸಿ ಮುಂಬೈಯಲ್ಲಿ ಬ್ಯಾಂಕ್ ಖಾತೆ ತೆರೆದು 4.90 ಕೋಟಿ ಅಕ್ರಮ ಹಣ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದನು.

ಈ ಸಂಬಂಧ ಹೈಕೋರ್ಟ್ ವಿಶೇಷ ತನಿಖಾ ತಂಡ ರಚಿಸಿ ತನಿಖೆಗೆ ಆದೇಶಿಸಿದೆ ಎಂದು ತಿಳಿಸಿ ಆಡಿಯೋ ಕರೆಯನ್ನು ವೀಡಿಯೋ ಕರೆಗೆ ವರ್ಗಾಯಿಸಿದನು. ಆಗ ವಿಕ್ರಮ್ ರಾಥೋಡ್ ಎಂಬ ಹೆಸರಿನ ವ್ಯಕ್ತಿಯು ಪೊಲೀಸ್ ಸಮವಸ್ತ್ರದಲ್ಲಿದ್ದು, ತಾನು ತನಿಖಾಧಿಕಾರಿಯೆಂದು ತನ್ನ ಗುರುತು ಸಂಖ್ಯೆ ಹಾಗೂ ಹೆಸರನ್ನು ಹೇಳಿಕೊಂಡು ತನಿಖೆಗೆ ಸಹಕರಿಸದಿದ್ದಲ್ಲಿ ಕೂಡಲೇ ಬಂಧಿಸಬೇಕಾಗುತ್ತದೆ ಎಂದು ಹೇಳಿದನು. ನಂತರ ಅದೇ ರೀತಿ ಪ್ರತಿದಿನ ಕರೆ ಮಾಡಿ ವಿಚಾರಣೆ ಎಂದು ವಿವಿಧ ದಾಖಲೆಗಳನ್ನು ಪಡೆದು ಕೊಳ್ಳುತ್ತಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಬಳಿಕ ಪ್ರಕರಣವನ್ನು ಇಡಿಗೆ ವರ್ಗಾಯಿಸಲಾಗಿದ್ದು, ಇಡಿ ನಿರ್ದೇಶಕ ಹೇಳಿ ಕರೆ ಮಾಡಿ, ಹಣ ವರ್ಗಾಯಿಸುವಂತೆ ತಿಳಿಸಿದನು. ಇದನ್ನು ನಂಬಿದ ರಾಘವೇಂದ್ರ ರಾವ್ ಜ.16 ಮತ್ತು 19ರಂದು ತನ್ನ ಪತ್ನಿಯ ಖಾತೆಯಿಂದ ಒಟ್ಟು 25,00,000ರೂ. ಹಾಗೂ ಜ.23ರಂದು ತನ್ನ ಖಾತೆಯಿಂದ 15,00,000ರೂ. ಹಣವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿ, ಒಟ್ಟು 40,00,000ರೂ. ಮೋಸ ಹೋಗಿದ್ದರು ಎಂದು ದೂರಲಾಗಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

9 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

9 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

10 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

13 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

13 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

13 hours ago