ಉಡುಪಿ: ಜಿಲ್ಲೆಯ ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶೌಚಾಲಯ ಎರಡು ವರ್ಷದಿಂದ ಕಾರ್ಯಚರಿಸದೆ ಅಲ್ಲಿಯ ಜನ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಉಡುಪಿ ಜಿಲ್ಲೆಯ ಕಟಪಾಡಿ ಪೇಟೆಯ ಹೃದಯ ಭಾಗದಲ್ಲಿರುವ ಸಾರ್ವಜನಿಕ ಶೌಚಾಲಯ ಸುಮಾರು ಎರಡು ವರ್ಷದಿಂದ ಬಂದ್ ಆಗಿದ್ದು, ಇಂದಿಗೂ ಗ್ರಾಮಸ್ಥರು ಪ್ರಯಾಣಿಕರು ರಿಕ್ಷಾ ಚಾಲಕರು ಮೂತ್ರ ವಿಸರ್ಜನೆಗೆ ಪರದಾಡುವ ಪರಿಸ್ಥಿತಿ ಎದುರಾಗಿದೆ.
ಕಟಪಾಡಿ ಜಂಕ್ಷನ್ ಗೆ ನಾಲ್ಕು ಊರಿಂದ ಪ್ರಯಾಣಿಕರು ಬರುತ್ತಾರೆ. ಶಿರ್ವ, ಕಾಪು, ಪಡುಕೆರೆ ಉದ್ಯಾವರ ಭಾಗದ ಜನರು ದಿನನಿತ್ಯ ಸಾವಿರಾರು ಸಂಖ್ಯೆಯಲ್ಲಿ ಕಟಪಾಡಿ ಪೇಟೆಯಲ್ಲಿರುವ ರಿಕ್ಷಾ ಚಾಲಕರು, ಟೆಂಪೋ ಚಾಲಕರು, ಅಂಗಡಿ ಕೆಲಸದವರು,ಹೊರ ರಾಜ್ಯದ ಕೂಲಿ ಕಾರ್ಮಿಕರು ದಿನನಿತ್ಯ ಬಹಿರ್ದೆಸೆಗೆ ಪರದಾಡುವ ಪರಿಸ್ಥಿತಿ ಎದುರಾಗಿದೆ. ಸ್ಥಳೀಯ ಮೀನು ಮಾರುಕಟ್ಟೆಯ ಶೌಚಾಲಯ, ಹೋಟೆಲ್ ಶೌಚಾಲಯ, ಕೆಲವೊಂದು ಮನೆಯ ಶೌಚಾಲಯಗಳನ್ನು ಸ್ಥಳೀಯರು ಉಪಯೋಗಿಸುವಂಥಾಗಿದೆ.
ಮಧುಮೇಹ ಇರುವವರು ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ನಿಯಂತ್ರಿಸಲು ಸಾಧ್ಯವಾಗದೆ ಜನ ಖಾಲಿ ಬಾಟಲಿಗಳಲ್ಲಿ ಮೂತ್ರ ವಿಸರ್ಜಿಸಿ ಅದನ್ನು ಅಲ್ಲೆ ಇಡುತ್ತಿದ್ದಾರೆ. ಇದರಿಂದ ಸೊಳ್ಳೆ ಕಾಟವೂ ಹೆಚ್ಚುವ ಸಂದರ್ಭವಿದ್ದು ಸಾಂಕ್ರಾಮಿಕ ರೋಗ ಹರಡಲು ಕೂಡಾ ಪರೋಕ್ಷವಾಗಿ ಕಾರಣವಾಗುತ್ತಿದೆ.
ಜನರ ಮೂಲಭೂತ ಅವಶ್ಯಕತೆ ಆದ ಶೌಚಾಲಯದ ಬಗ್ಗೆಯೂ ಪಂಚಾಯತ್, ಸ್ಥಳೀಯ ಶಾಸಕರು ಗಮನವಹಿಸದೆ ಇರುವುದು ವಿಪರ್ಯಾಸ.
ಕಟಪಾಡಿ ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು ಇತ್ತ ಗಮನ ಹರಿಸಿ ಕೂಡಲೇ ಸಾರ್ವಜನಿಕ ಶೌಚಾಲಯವನ್ನು ಜನರ ಉಪಯೋಗಕ್ಕೆ ಸಜ್ಜು ಮಾಡಿಕೊಡಬೇಕಾಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…