Featured

ಕಟಪಾಡಿ : ಎರಡು ವರ್ಷದಿಂದ ಸಾರ್ವಜನಿಕ ಶೌಚಾಲಯ ಬಂದ್ , ಖಾಲಿ ಬಾಟಲಿಗಳಲ್ಲಿ ಮೂತ್ರ ವಿಸರ್ಜನೆ – Vishwanews24

ಕಟಪಾಡಿ : ಎರಡು ವರ್ಷದಿಂದ ಸಾರ್ವಜನಿಕ ಶೌಚಾಲಯ ಬಂದ್ ..

ಖಾಲಿ ಬಾಟಲಿಗಳಲ್ಲಿ ಮೂತ್ರ ವಿಸರ್ಜನೆ ..

ಗ್ರಾಮಸ್ಥರು ಪ್ರಯಾಣಿಕರು ಮೂತ್ರ ವಿಸರ್ಜನೆಗೆ ಪರದಾಡುವ ಪರಿಸ್ಥಿತಿ ನಿರ್ಮಾಣ..

ಶೌಚಾಲಯದ ಬಗ್ಗೆ ಪಂಚಾಯತ್, ಸ್ಥಳೀಯ ಶಾಸಕರು ಗಮನವಹಿಸದೆ ಇರುವುದು ವಿಪರ್ಯಾಸ..

ಉಡುಪಿ: ಜಿಲ್ಲೆಯ ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶೌಚಾಲಯ ಎರಡು ವರ್ಷದಿಂದ ಕಾರ್ಯಚರಿಸದೆ ಅಲ್ಲಿಯ ಜನ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಉಡುಪಿ ಜಿಲ್ಲೆಯ ಕಟಪಾಡಿ ಪೇಟೆಯ ಹೃದಯ ಭಾಗದಲ್ಲಿರುವ ಸಾರ್ವಜನಿಕ ಶೌಚಾಲಯ ಸುಮಾರು ಎರಡು ವರ್ಷದಿಂದ ಬಂದ್ ಆಗಿದ್ದು, ಇಂದಿಗೂ ಗ್ರಾಮಸ್ಥರು ಪ್ರಯಾಣಿಕರು ರಿಕ್ಷಾ ಚಾಲಕರು ಮೂತ್ರ ವಿಸರ್ಜನೆಗೆ ಪರದಾಡುವ ಪರಿಸ್ಥಿತಿ ಎದುರಾಗಿದೆ.

ಕಟಪಾಡಿ ಜಂಕ್ಷನ್ ಗೆ ನಾಲ್ಕು ಊರಿಂದ ಪ್ರಯಾಣಿಕರು ಬರುತ್ತಾರೆ. ಶಿರ್ವ, ಕಾಪು, ಪಡುಕೆರೆ ಉದ್ಯಾವರ ಭಾಗದ ಜನರು ದಿನನಿತ್ಯ ಸಾವಿರಾರು ಸಂಖ್ಯೆಯಲ್ಲಿ ಕಟಪಾಡಿ ಪೇಟೆಯಲ್ಲಿರುವ ರಿಕ್ಷಾ ಚಾಲಕರು, ಟೆಂಪೋ ಚಾಲಕರು, ಅಂಗಡಿ ಕೆಲಸದವರು,ಹೊರ ರಾಜ್ಯದ ಕೂಲಿ ಕಾರ್ಮಿಕರು ದಿನನಿತ್ಯ ಬಹಿರ್ದೆಸೆಗೆ ಪರದಾಡುವ ಪರಿಸ್ಥಿತಿ ಎದುರಾಗಿದೆ. ಸ್ಥಳೀಯ ಮೀನು ಮಾರುಕಟ್ಟೆಯ ಶೌಚಾಲಯ, ಹೋಟೆಲ್ ಶೌಚಾಲಯ, ಕೆಲವೊಂದು ಮನೆಯ ಶೌಚಾಲಯಗಳನ್ನು ಸ್ಥಳೀಯರು ಉಪಯೋಗಿಸುವಂಥಾಗಿದೆ.

ಮಧುಮೇಹ ಇರುವವರು ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ನಿಯಂತ್ರಿಸಲು ಸಾಧ್ಯವಾಗದೆ ಜನ ಖಾಲಿ ಬಾಟಲಿಗಳಲ್ಲಿ ಮೂತ್ರ ವಿಸರ್ಜಿಸಿ ಅದನ್ನು ಅಲ್ಲೆ ಇಡುತ್ತಿದ್ದಾರೆ. ಇದರಿಂದ ಸೊಳ್ಳೆ ಕಾಟವೂ ಹೆಚ್ಚುವ ಸಂದರ್ಭವಿದ್ದು ಸಾಂಕ್ರಾಮಿಕ ರೋಗ ಹರಡಲು ಕೂಡಾ ಪರೋಕ್ಷವಾಗಿ ಕಾರಣವಾಗುತ್ತಿದೆ.

ಜನರ ಮೂಲಭೂತ ಅವಶ್ಯಕತೆ ಆದ ಶೌಚಾಲಯದ ಬಗ್ಗೆಯೂ ಪಂಚಾಯತ್, ಸ್ಥಳೀಯ ಶಾಸಕರು ಗಮನವಹಿಸದೆ ಇರುವುದು ವಿಪರ್ಯಾಸ.

ಕಟಪಾಡಿ ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು ಇತ್ತ ಗಮನ ಹರಿಸಿ ಕೂಡಲೇ ಸಾರ್ವಜನಿಕ ಶೌಚಾಲಯವನ್ನು ಜನರ ಉಪಯೋಗಕ್ಕೆ ಸಜ್ಜು ಮಾಡಿಕೊಡಬೇಕಾಗಿದೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

10 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

10 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

10 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

10 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago