Featured

ಕಟಪಾಡಿ : ಕಟ್ಟಡ ಕಾರ್ಮಿಕನ ಕೊಲೆ ಪ್ರಕರಣ ; ಆರೋಪಿಯ ಬಂಧನ – Vishwanews24

ಕಟಪಾಡಿ ಕಟ್ಟಡ ಕಾರ್ಮಿಕನ ಕೊಲೆ ಪ್ರಕರಣ ; ಆರೋಪಿಯ ಬಂಧನ

ಉಡುಪಿ: ಕಟಪಾಡಿಯಲ್ಲಿ ನಡೆದ ಕಟ್ಟಡ ಕಾರ್ಮಿಕ ಗಣೇಶ್ ಕೊಲೆ ಪ್ರಕರಣದ ಆರೋಪಿಯನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಓಡಿಸ್ಸಾ ಮೂಲದ ಕಾರ್ಮಿಕರಾದ ಅಕನ್ ಎಂದು ಗುರುತಿಸಲಾಗಿದೆ.

ಜುಲೈ 17 ರಂದು ಕಾಪು ಠಾಣಾ ವ್ಯಾಪ್ತಿಯ ಕಟಪಾಡಿ ಹಳೇ ಸಂತೆ ಮಾರ್ಕೆಟ್ ಬಳಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಓಡಿಸ್ಸಾ ಮೂಲದ ಕಾರ್ಮಿಕರಾದ ಅಕನ್ ಮತ್ತು ಗಣೇಶ್ ಎಂಬವರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ ನಡೆದು, ಅಕನ್ ಗಣೇಶ್ ಸೇತಿಗೆ ಕಬ್ಬಿಣದ ರಾಡ್ ನಿಂದ ತಲೆಗೆ ಹೊಡೆದ ಪರಿಣಾಮ ತೀವ್ರ ಗಾಯಗಳೊಂದಿಗೆ ಆಸ್ಪತ್ರೆಗೆ ಸಾಗಿಸುವ ಸಮಯದಲ್ಲಿ ದಾರಿ ಮಧ್ಯೆ ಮೃತಪಟ್ಟಿದ್ದನು.

ಘಟನಾ ಸ್ಥಳಕ್ಕೆ ಜಿಲ್ಲಾ ಎಸ್ಪಿ, ಹೆಚ್ಚುವರಿ ಎಸ್ಪಿ ಕಾರ್ಕಳ ಡಿವೈಎಸ್ಪಿ ಭೇಟಿ ನೀಡಿ ಆರೋಪಿಯ ಪತ್ತೆಗೆ ಕಾಪು ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ತಂಡವನ್ನು ರಚಿಸಿ ಆರೋಪಿ ಅಕನನ್ನು ಉಡುಪಿ ಎಕ್ಸ್ ಪ್ರೆಸ್ ಬಸ್ ನಿಲ್ದಾಣದ ಬಳಿ ಬಂಧಿಸಿದ್ದಾರೆ.

ಪ್ರಕರಣದ ಆರೋಪಿಗಳ ಪತ್ತೆಗೆ ಜಿಲ್ಲಾ ಎಸ್ಪಿ ಅಕ್ಷಯ್ ಹಾಕೆ ಮಚ್ಚೀಂದ್ರ ಮತ್ತು ಹೆಚ್ಚುವರಿ ಎಸ್ಪಿ ಎಸ್ ಟಿ ಸಿದ್ದಲಿಂಗಪ್ಪ ಅವರ ಮಾರ್ಗದರ್ಶನದಲ್ಲಿ ಕಾರ್ಕಳ ಉಪ ವಿಭಾಗದ ಡಿವೈಎಸ್ಪಿ ಅರವಿಂದ ಕಲಗುಜ್ಜಿ, ಕಾಪು ವೃತ್ತ ನೀರಿಕ್ಷಕ ಕೆ ಸಿ ಪೂವಯ್ಯ ನೇತೃತ್ವದಲ್ಲಿ ಕಾಪು ಪಿಎಸ್ ಐ ಶ್ರೀಶೈಲ ಮುರಗೋಡ, ಸಿಬಂದಿಗಳಾದ ಸುಧಾಕರ ಮತ್ತು ನಾರಾಯಣ ಇತರ ಸಿಬಂದಿಗಳು ಪಾಲ್ಗೊಂಡಿರುತ್ತಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago