Featured

ಕಟಪಾಡಿ: ಜಗತ್ತಿನ ಅತ್ಯಂತ ದುಬಾರಿ ಮಾವಿನಹಣ್ಣು ಬೆಳೆದ ಶಂಕರಪುರದ ಕೃಷಿಕ ಜೋಸೆಫ್ ಲೋಬೋ – vishwanews24

ಕಟಪಾಡಿ: ಜಗತ್ತಿನ ಅತ್ಯಂತ ದುಬಾರಿ ಮಾವಿನಹಣ್ಣು ಬೆಳೆದ ಶಂಕರಪುರದ ಕೃಷಿಕ

ಕಟಪಾಡಿ: ಜಗತ್ತಿನ ಅತ್ಯಂತ ಮೌಲ್ಯಯುತ ಮತ್ತು ದುಬಾರಿ ಮಾವಿನ ಹಣ್ಣು ಎಂದೇ ಪ್ರಸಿದ್ಧಿ ಪಡೆದಿರುವ ಜಪಾನ್ ಮೂಲದ ಮಿಯಾಝಕಿ ಮಾವಿನ ತಳಿ ಇದೀಗ ಕರಾವಳಿಯ ಕೃಷಿಕರೋರ್ವರ ಮನೆಯ ತಾರಸಿ ಯಲ್ಲಿ ಬೆಳೆದಿದೆ.

ತಾರಸಿ ಕೃಷಿ ಪ್ರಯೋಗದಲ್ಲಿ ಹೆಸರುವಾಸಿಯಾಗಿರುವ ಉಡುಪಿ ಶಂಕರಪುರದ ಜೋಸಫ್ ಲೋಬೋ ಅವರು ತಮ್ಮ ತಾರಸಿಯಲ್ಲಿ ಮಿಯಾಝಕಿ ಮಾವಿನ ಹಣ್ಣನ್ನು ಬೆಳೆದಿದ್ದಾರೆ. ಮೂರುವರೆ ವರ್ಷದ ಹಿಂದೆ ಕೇರಳದ ಕಣ್ಣೂರಿನಲ್ಲಿ ನಡೆದ ಕೃಷಿ ಮೇಳದಲ್ಲಿ 16,800 ರೂ. ಗೆ ಮಿಯಾಝಕಿ ತಳಿಯ ಮಾವಿನ ಗಿಡವನ್ನು ಜೋಸೆಫ್ ಅವರು ತಂದಿದ್ದರು. ಎರಡೂವರೆ ವರ್ಷದ ಹಿಂದೆ ಇದು ಹೂವು ಮಾತ್ರ ಬಿಡುತ್ತಿದ್ದ ಈ ಗಿಡದಲ್ಲಿ ಈಗ ಕೆಂಪು, ಸಾದಾ ಹಸುರು ಬಣ್ಣದ ಮಾವು ಬೆಳೆದಿದೆ. ಗಿಡದಲ್ಲಿ ಬಿಟ್ಟ ಒಂದೊಂದು ಹಣ್ಣು ಸುಮಾರು 600 ರಿಂದ 650 ಗ್ರಾಂ ಇದೆ.

ಮಿಯಾಝಕಿ ಮಾವು ಕಾಯಿಯ ಹಂತದಲ್ಲಿ ನೇರಳೆ ಬಣ್ಣದಲ್ಲಿರುತ್ತದೆ. ಮಾವು ಹಣ್ಣಾಗುವ ಹಂತ ತಲುಪಿದಾಗ ಬೆಂಕಿ ಜ್ವಾಲೆಯ ಬಣ್ಣಕ್ಕೆ ತಿರುಗುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಿಯಾಝಕಿ ಮಾವಿನ ಹಣ್ಣಿನ ಬೆಲೆ ಕೆ.ಜಿ.ಗೆ 2.3 ಲಕ್ಷ ರೂ.ನಿಂದ 2.7 ಲಕ್ಷ ರೂ. ವರೆಗೆ ಇದೆ. ರುಚಿಯಲ್ಲಿ ಮಲ್ಲಿಕಾ ತಳಿಯನ್ನು ಹೋಲುವ ಈ ಮಾವಿನಲ್ಲಿ ಸಾಕಷ್ಟು ಔಷಧೀಯ ಗುಣಗಳಿರುವುದರಿಂದ ಇದಕ್ಕೆ ಹೆಚ್ಚು ಬೇಡಿಕೆ ಇದೆ.

ಇನ್ನು ಕೃಷಿಕ ಜೋಸೆಫ್ ಲೋಬೋ ಅವರು ಕಡಿಮೆ ಜಾಗದಲ್ಲಿ ಈ ಪ್ರಯೋಗ ಮಾಡಿ ಯಶಸ್ವಿಯಾಗಿದ್ದಾರೆ. ಮನೆಯ ಅಕ್ಕ ಪಕ್ಕ ಜಾಗ ಇಲ್ಲದೇ ಹೋದರೂ ಮನೆಗೆ ತಾರಸಿಯಲ್ಲಿ ಗಿಡಗಳನ್ನು ನೆಡಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

24 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

24 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

1 day ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 day ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 day ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 day ago