Featured

ಕಟಪಾಡಿ: ಜಗತ್ತಿನ ಅತ್ಯಂತ ದುಬಾರಿ ಮಾವಿನಹಣ್ಣು ಬೆಳೆದ ಶಂಕರಪುರದ ಕೃಷಿಕ ಜೋಸೆಫ್ ಲೋಬೋ – vishwanews24

ಕಟಪಾಡಿ: ಜಗತ್ತಿನ ಅತ್ಯಂತ ದುಬಾರಿ ಮಾವಿನಹಣ್ಣು ಬೆಳೆದ ಶಂಕರಪುರದ ಕೃಷಿಕ

ಕಟಪಾಡಿ: ಜಗತ್ತಿನ ಅತ್ಯಂತ ಮೌಲ್ಯಯುತ ಮತ್ತು ದುಬಾರಿ ಮಾವಿನ ಹಣ್ಣು ಎಂದೇ ಪ್ರಸಿದ್ಧಿ ಪಡೆದಿರುವ ಜಪಾನ್ ಮೂಲದ ಮಿಯಾಝಕಿ ಮಾವಿನ ತಳಿ ಇದೀಗ ಕರಾವಳಿಯ ಕೃಷಿಕರೋರ್ವರ ಮನೆಯ ತಾರಸಿ ಯಲ್ಲಿ ಬೆಳೆದಿದೆ.

ತಾರಸಿ ಕೃಷಿ ಪ್ರಯೋಗದಲ್ಲಿ ಹೆಸರುವಾಸಿಯಾಗಿರುವ ಉಡುಪಿ ಶಂಕರಪುರದ ಜೋಸಫ್ ಲೋಬೋ ಅವರು ತಮ್ಮ ತಾರಸಿಯಲ್ಲಿ ಮಿಯಾಝಕಿ ಮಾವಿನ ಹಣ್ಣನ್ನು ಬೆಳೆದಿದ್ದಾರೆ. ಮೂರುವರೆ ವರ್ಷದ ಹಿಂದೆ ಕೇರಳದ ಕಣ್ಣೂರಿನಲ್ಲಿ ನಡೆದ ಕೃಷಿ ಮೇಳದಲ್ಲಿ 16,800 ರೂ. ಗೆ ಮಿಯಾಝಕಿ ತಳಿಯ ಮಾವಿನ ಗಿಡವನ್ನು ಜೋಸೆಫ್ ಅವರು ತಂದಿದ್ದರು. ಎರಡೂವರೆ ವರ್ಷದ ಹಿಂದೆ ಇದು ಹೂವು ಮಾತ್ರ ಬಿಡುತ್ತಿದ್ದ ಈ ಗಿಡದಲ್ಲಿ ಈಗ ಕೆಂಪು, ಸಾದಾ ಹಸುರು ಬಣ್ಣದ ಮಾವು ಬೆಳೆದಿದೆ. ಗಿಡದಲ್ಲಿ ಬಿಟ್ಟ ಒಂದೊಂದು ಹಣ್ಣು ಸುಮಾರು 600 ರಿಂದ 650 ಗ್ರಾಂ ಇದೆ.

ಮಿಯಾಝಕಿ ಮಾವು ಕಾಯಿಯ ಹಂತದಲ್ಲಿ ನೇರಳೆ ಬಣ್ಣದಲ್ಲಿರುತ್ತದೆ. ಮಾವು ಹಣ್ಣಾಗುವ ಹಂತ ತಲುಪಿದಾಗ ಬೆಂಕಿ ಜ್ವಾಲೆಯ ಬಣ್ಣಕ್ಕೆ ತಿರುಗುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಿಯಾಝಕಿ ಮಾವಿನ ಹಣ್ಣಿನ ಬೆಲೆ ಕೆ.ಜಿ.ಗೆ 2.3 ಲಕ್ಷ ರೂ.ನಿಂದ 2.7 ಲಕ್ಷ ರೂ. ವರೆಗೆ ಇದೆ. ರುಚಿಯಲ್ಲಿ ಮಲ್ಲಿಕಾ ತಳಿಯನ್ನು ಹೋಲುವ ಈ ಮಾವಿನಲ್ಲಿ ಸಾಕಷ್ಟು ಔಷಧೀಯ ಗುಣಗಳಿರುವುದರಿಂದ ಇದಕ್ಕೆ ಹೆಚ್ಚು ಬೇಡಿಕೆ ಇದೆ.

ಇನ್ನು ಕೃಷಿಕ ಜೋಸೆಫ್ ಲೋಬೋ ಅವರು ಕಡಿಮೆ ಜಾಗದಲ್ಲಿ ಈ ಪ್ರಯೋಗ ಮಾಡಿ ಯಶಸ್ವಿಯಾಗಿದ್ದಾರೆ. ಮನೆಯ ಅಕ್ಕ ಪಕ್ಕ ಜಾಗ ಇಲ್ಲದೇ ಹೋದರೂ ಮನೆಗೆ ತಾರಸಿಯಲ್ಲಿ ಗಿಡಗಳನ್ನು ನೆಡಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

13 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

14 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

14 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

14 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

14 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

16 hours ago