Featured

ಕಟಪಾಡಿ: ಜಗತ್ತಿನ ಅತ್ಯಂತ ದುಬಾರಿ ಮಾವಿನಹಣ್ಣು ಬೆಳೆದ ಶಂಕರಪುರದ ಕೃಷಿಕ ಜೋಸೆಫ್ ಲೋಬೋ – vishwanews24

ಕಟಪಾಡಿ: ಜಗತ್ತಿನ ಅತ್ಯಂತ ದುಬಾರಿ ಮಾವಿನಹಣ್ಣು ಬೆಳೆದ ಶಂಕರಪುರದ ಕೃಷಿಕ

ಕಟಪಾಡಿ: ಜಗತ್ತಿನ ಅತ್ಯಂತ ಮೌಲ್ಯಯುತ ಮತ್ತು ದುಬಾರಿ ಮಾವಿನ ಹಣ್ಣು ಎಂದೇ ಪ್ರಸಿದ್ಧಿ ಪಡೆದಿರುವ ಜಪಾನ್ ಮೂಲದ ಮಿಯಾಝಕಿ ಮಾವಿನ ತಳಿ ಇದೀಗ ಕರಾವಳಿಯ ಕೃಷಿಕರೋರ್ವರ ಮನೆಯ ತಾರಸಿ ಯಲ್ಲಿ ಬೆಳೆದಿದೆ.

ತಾರಸಿ ಕೃಷಿ ಪ್ರಯೋಗದಲ್ಲಿ ಹೆಸರುವಾಸಿಯಾಗಿರುವ ಉಡುಪಿ ಶಂಕರಪುರದ ಜೋಸಫ್ ಲೋಬೋ ಅವರು ತಮ್ಮ ತಾರಸಿಯಲ್ಲಿ ಮಿಯಾಝಕಿ ಮಾವಿನ ಹಣ್ಣನ್ನು ಬೆಳೆದಿದ್ದಾರೆ. ಮೂರುವರೆ ವರ್ಷದ ಹಿಂದೆ ಕೇರಳದ ಕಣ್ಣೂರಿನಲ್ಲಿ ನಡೆದ ಕೃಷಿ ಮೇಳದಲ್ಲಿ 16,800 ರೂ. ಗೆ ಮಿಯಾಝಕಿ ತಳಿಯ ಮಾವಿನ ಗಿಡವನ್ನು ಜೋಸೆಫ್ ಅವರು ತಂದಿದ್ದರು. ಎರಡೂವರೆ ವರ್ಷದ ಹಿಂದೆ ಇದು ಹೂವು ಮಾತ್ರ ಬಿಡುತ್ತಿದ್ದ ಈ ಗಿಡದಲ್ಲಿ ಈಗ ಕೆಂಪು, ಸಾದಾ ಹಸುರು ಬಣ್ಣದ ಮಾವು ಬೆಳೆದಿದೆ. ಗಿಡದಲ್ಲಿ ಬಿಟ್ಟ ಒಂದೊಂದು ಹಣ್ಣು ಸುಮಾರು 600 ರಿಂದ 650 ಗ್ರಾಂ ಇದೆ.

ಮಿಯಾಝಕಿ ಮಾವು ಕಾಯಿಯ ಹಂತದಲ್ಲಿ ನೇರಳೆ ಬಣ್ಣದಲ್ಲಿರುತ್ತದೆ. ಮಾವು ಹಣ್ಣಾಗುವ ಹಂತ ತಲುಪಿದಾಗ ಬೆಂಕಿ ಜ್ವಾಲೆಯ ಬಣ್ಣಕ್ಕೆ ತಿರುಗುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಿಯಾಝಕಿ ಮಾವಿನ ಹಣ್ಣಿನ ಬೆಲೆ ಕೆ.ಜಿ.ಗೆ 2.3 ಲಕ್ಷ ರೂ.ನಿಂದ 2.7 ಲಕ್ಷ ರೂ. ವರೆಗೆ ಇದೆ. ರುಚಿಯಲ್ಲಿ ಮಲ್ಲಿಕಾ ತಳಿಯನ್ನು ಹೋಲುವ ಈ ಮಾವಿನಲ್ಲಿ ಸಾಕಷ್ಟು ಔಷಧೀಯ ಗುಣಗಳಿರುವುದರಿಂದ ಇದಕ್ಕೆ ಹೆಚ್ಚು ಬೇಡಿಕೆ ಇದೆ.

ಇನ್ನು ಕೃಷಿಕ ಜೋಸೆಫ್ ಲೋಬೋ ಅವರು ಕಡಿಮೆ ಜಾಗದಲ್ಲಿ ಈ ಪ್ರಯೋಗ ಮಾಡಿ ಯಶಸ್ವಿಯಾಗಿದ್ದಾರೆ. ಮನೆಯ ಅಕ್ಕ ಪಕ್ಕ ಜಾಗ ಇಲ್ಲದೇ ಹೋದರೂ ಮನೆಗೆ ತಾರಸಿಯಲ್ಲಿ ಗಿಡಗಳನ್ನು ನೆಡಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago