Featured

ಕಟಪಾಡಿ: ಜಗತ್ತಿನ ಅತ್ಯಂತ ದುಬಾರಿ ಮಾವಿನಹಣ್ಣು ಬೆಳೆದ ಶಂಕರಪುರದ ಕೃಷಿಕ ಜೋಸೆಫ್ ಲೋಬೋ – vishwanews24

ಕಟಪಾಡಿ: ಜಗತ್ತಿನ ಅತ್ಯಂತ ದುಬಾರಿ ಮಾವಿನಹಣ್ಣು ಬೆಳೆದ ಶಂಕರಪುರದ ಕೃಷಿಕ

ಕಟಪಾಡಿ: ಜಗತ್ತಿನ ಅತ್ಯಂತ ಮೌಲ್ಯಯುತ ಮತ್ತು ದುಬಾರಿ ಮಾವಿನ ಹಣ್ಣು ಎಂದೇ ಪ್ರಸಿದ್ಧಿ ಪಡೆದಿರುವ ಜಪಾನ್ ಮೂಲದ ಮಿಯಾಝಕಿ ಮಾವಿನ ತಳಿ ಇದೀಗ ಕರಾವಳಿಯ ಕೃಷಿಕರೋರ್ವರ ಮನೆಯ ತಾರಸಿ ಯಲ್ಲಿ ಬೆಳೆದಿದೆ.

ತಾರಸಿ ಕೃಷಿ ಪ್ರಯೋಗದಲ್ಲಿ ಹೆಸರುವಾಸಿಯಾಗಿರುವ ಉಡುಪಿ ಶಂಕರಪುರದ ಜೋಸಫ್ ಲೋಬೋ ಅವರು ತಮ್ಮ ತಾರಸಿಯಲ್ಲಿ ಮಿಯಾಝಕಿ ಮಾವಿನ ಹಣ್ಣನ್ನು ಬೆಳೆದಿದ್ದಾರೆ. ಮೂರುವರೆ ವರ್ಷದ ಹಿಂದೆ ಕೇರಳದ ಕಣ್ಣೂರಿನಲ್ಲಿ ನಡೆದ ಕೃಷಿ ಮೇಳದಲ್ಲಿ 16,800 ರೂ. ಗೆ ಮಿಯಾಝಕಿ ತಳಿಯ ಮಾವಿನ ಗಿಡವನ್ನು ಜೋಸೆಫ್ ಅವರು ತಂದಿದ್ದರು. ಎರಡೂವರೆ ವರ್ಷದ ಹಿಂದೆ ಇದು ಹೂವು ಮಾತ್ರ ಬಿಡುತ್ತಿದ್ದ ಈ ಗಿಡದಲ್ಲಿ ಈಗ ಕೆಂಪು, ಸಾದಾ ಹಸುರು ಬಣ್ಣದ ಮಾವು ಬೆಳೆದಿದೆ. ಗಿಡದಲ್ಲಿ ಬಿಟ್ಟ ಒಂದೊಂದು ಹಣ್ಣು ಸುಮಾರು 600 ರಿಂದ 650 ಗ್ರಾಂ ಇದೆ.

ಮಿಯಾಝಕಿ ಮಾವು ಕಾಯಿಯ ಹಂತದಲ್ಲಿ ನೇರಳೆ ಬಣ್ಣದಲ್ಲಿರುತ್ತದೆ. ಮಾವು ಹಣ್ಣಾಗುವ ಹಂತ ತಲುಪಿದಾಗ ಬೆಂಕಿ ಜ್ವಾಲೆಯ ಬಣ್ಣಕ್ಕೆ ತಿರುಗುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಿಯಾಝಕಿ ಮಾವಿನ ಹಣ್ಣಿನ ಬೆಲೆ ಕೆ.ಜಿ.ಗೆ 2.3 ಲಕ್ಷ ರೂ.ನಿಂದ 2.7 ಲಕ್ಷ ರೂ. ವರೆಗೆ ಇದೆ. ರುಚಿಯಲ್ಲಿ ಮಲ್ಲಿಕಾ ತಳಿಯನ್ನು ಹೋಲುವ ಈ ಮಾವಿನಲ್ಲಿ ಸಾಕಷ್ಟು ಔಷಧೀಯ ಗುಣಗಳಿರುವುದರಿಂದ ಇದಕ್ಕೆ ಹೆಚ್ಚು ಬೇಡಿಕೆ ಇದೆ.

ಇನ್ನು ಕೃಷಿಕ ಜೋಸೆಫ್ ಲೋಬೋ ಅವರು ಕಡಿಮೆ ಜಾಗದಲ್ಲಿ ಈ ಪ್ರಯೋಗ ಮಾಡಿ ಯಶಸ್ವಿಯಾಗಿದ್ದಾರೆ. ಮನೆಯ ಅಕ್ಕ ಪಕ್ಕ ಜಾಗ ಇಲ್ಲದೇ ಹೋದರೂ ಮನೆಗೆ ತಾರಸಿಯಲ್ಲಿ ಗಿಡಗಳನ್ನು ನೆಡಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago