ಕಟಪಾಡಿ: ಶ್ರೀ ಕ್ಷೇತ್ರ ಪೇಟೆಬೆಟ್ಟು ಕಟಪಾಡಿಯ ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನ, ಶ್ರೀ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಬಬ್ಬು ಸ್ವಾಮಿ ಹಾಗೂ ಪರಿವಾರ ದೈವಗಳ ನೇಮೋ ತ್ಸವವು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಗಳೊಂದಿಗೆ ಜ.4 ಮತ್ತು ಜ.5ರಂದು ಜರಗಲಿದೆ.
ಜ.3ರಂದು ಬೆಳಗ್ಗೆ 8 ಗಂಟೆಗೆ ಸತ್ಯ ಕಂಬೆರ್ಲು ದೇವರ ದರ್ಶನ ಸೇವೆಯೊಂದಿಗೆ ಮುಹೂರ್ತ ಗೊಳ್ಳಲಿದೆ. ಜ.4ರಂದು ಬೆಳಗ್ಗೆ 7.30ಕ್ಕೆ ಧ್ವಜಸ್ತಂಭ (ಗಜಕಂಬ) ಮುಹೂರ್ತ, ಮಧ್ಯಾಹ್ನ 12ಕ್ಕೆ ಚಪ್ಪರ ಆರೋಹಣ, 12.45ಕ್ಕೆ ಮಹಾ ಅನ್ನ ಸಂತರ್ಪಣೆ, ಸಂಜೆ 4ಕ್ಕೆ ಶ್ರೀ ಕ್ಷೇತ್ರ ಶುದ್ಧಿ ಪೂಜೆ ನಡೆಯಲಿದೆ. ಸಂಜೆ 6ಕ್ಕೆ ಭಂಡಾರ ಹೊರಟು ಕಟಪಾಡಿ ಪೇಟೆಯ ಮೂಲಕ ವಿಜೃಂಭಣೆಯ ಭವ್ಯ ಮೆರವಣಿಗೆ ಯಲ್ಲಿ ಸಾಗಿ ಬರಲಿದೆ. ರಾತ್ರಿ 10ಕ್ಕೆ ಬಬ್ಬುಸ್ವಾಮಿ ನೇಮ ಹಾಗೂ ರಾತ್ರಿ 1 ಗಂಟೆಗೆ ಆದಿಶಕ್ತಿ ಶ್ರೀ ತನ್ನಿಮಾನಿಗ ದೇವಿಯ ನೇಮ ಜರಗಲಿದೆ.
ಜ.5ರ ಬೆಳಗ್ಗೆ 9ಕ್ಕೆ ಶ್ರೀ ಧೂಮಾವತಿ ಹಾಗೂ ಬಂಟ ದೈವಗಳ ನೇಮ, ಅಪರಾಹ್ನ 3 ಗಂಟೆಗೆ ಕೊರಗಜ್ಜ ದೈವದ ನೇಮ ಜರಗಲಿದೆ.
ಜ.4ರಂದು ಬೆಳಗ್ಗೆ 9ರಿಂದ ಸಂಜೆಯ ತನಕವೂ ಸಾಂಸ್ಕೃತಿಕ ಕಾರ್ಯ ಕ್ರಮವು ಜರಗಲಿವೆ ಎಂದು ಪಾಂ ಗಾಳ ನಾಯಕ್ ಮನೆತನ ಕಟಪಾಡಿ ಹೊಸ ಮನೆಯ ವೈ. ಭರತ್ ಹೆಗ್ಡೆ ಕಟಪಾಡಿ , ಗರಡಿಮನೆ ಅಶೋಕ್ ಎನ್. ಪೂಜಾರಿ ಕಟಪಾಡಿ, ಕೆ. ಪ್ರೇಮ್ ಕುಮಾರ್ ಕಟಪಾಡಿ, ಶ್ರೀ ಕ್ಷೇತ್ರದ ಗುರಿಕಾರ ಹರಿಶ್ಚಂದ್ರ ಪಿಲಾರ್ ತಿಳಿಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…