Featured

ಕಟಪಾಡಿ : ಜ.4 ಮತ್ತು ಜ.5ರಂದು ಶ್ರೀ ಕ್ಷೇತ್ರ ಪೇಟೆಬೆಟ್ಟು ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ – vishwanews24

ಕಟಪಾಡಿ : ಜ.4 ಮತ್ತು ಜ.5ರಂದು ಶ್ರೀ ಕ್ಷೇತ್ರ ಪೇಟೆಬೆಟ್ಟು ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ

ಕಟಪಾಡಿ: ಶ್ರೀ ಕ್ಷೇತ್ರ ಪೇಟೆಬೆಟ್ಟು ಕಟಪಾಡಿಯ ಭಗವಾನ್‌ ಶ್ರೀ ಬಬ್ಬುಸ್ವಾಮಿ ದೈವಸ್ಥಾನ, ಶ್ರೀ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಬಬ್ಬು ಸ್ವಾಮಿ ಹಾಗೂ ಪರಿವಾರ ದೈವಗಳ ನೇಮೋ ತ್ಸವವು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಗಳೊಂದಿಗೆ ಜ.4 ಮತ್ತು ಜ.5ರಂದು ಜರಗಲಿದೆ.

ಜ.3ರಂದು ಬೆಳಗ್ಗೆ 8 ಗಂಟೆಗೆ ಸತ್ಯ ಕಂಬೆರ್ಲು ದೇವರ ದರ್ಶನ ಸೇವೆಯೊಂದಿಗೆ ಮುಹೂರ್ತ ಗೊಳ್ಳಲಿದೆ. ಜ.4ರಂದು ಬೆಳಗ್ಗೆ 7.30ಕ್ಕೆ ಧ್ವಜಸ್ತಂಭ (ಗಜಕಂಬ) ಮುಹೂರ್ತ, ಮಧ್ಯಾಹ್ನ 12ಕ್ಕೆ ಚಪ್ಪರ ಆರೋಹಣ, 12.45ಕ್ಕೆ ಮಹಾ ಅನ್ನ ಸಂತರ್ಪಣೆ, ಸಂಜೆ 4ಕ್ಕೆ ಶ್ರೀ ಕ್ಷೇತ್ರ ಶುದ್ಧಿ ಪೂಜೆ ನಡೆಯಲಿದೆ. ಸಂಜೆ 6ಕ್ಕೆ ಭಂಡಾರ ಹೊರಟು ಕಟಪಾಡಿ ಪೇಟೆಯ ಮೂಲಕ ವಿಜೃಂಭಣೆಯ ಭವ್ಯ ಮೆರವಣಿಗೆ ಯಲ್ಲಿ ಸಾಗಿ ಬರಲಿದೆ. ರಾತ್ರಿ 10ಕ್ಕೆ ಬಬ್ಬುಸ್ವಾಮಿ ನೇಮ ಹಾಗೂ ರಾತ್ರಿ 1 ಗಂಟೆಗೆ ಆದಿಶಕ್ತಿ ಶ್ರೀ ತನ್ನಿಮಾನಿಗ ದೇವಿಯ ನೇಮ ಜರಗಲಿದೆ.

ಜ.5ರ ಬೆಳಗ್ಗೆ 9ಕ್ಕೆ ಶ್ರೀ ಧೂಮಾವತಿ ಹಾಗೂ ಬಂಟ ದೈವಗಳ ನೇಮ, ಅಪರಾಹ್ನ 3 ಗಂಟೆಗೆ ಕೊರಗಜ್ಜ ದೈವದ ನೇಮ ಜರಗಲಿದೆ.
ಜ.4ರಂದು ಬೆಳಗ್ಗೆ 9ರಿಂದ ಸಂಜೆಯ ತನಕವೂ ಸಾಂಸ್ಕೃತಿಕ ಕಾರ್ಯ ಕ್ರಮವು ಜರಗಲಿವೆ ಎಂದು ಪಾಂ ಗಾಳ ನಾಯಕ್‌ ಮನೆತನ ಕಟಪಾಡಿ ಹೊಸ ಮನೆಯ ವೈ. ಭರತ್‌ ಹೆಗ್ಡೆ ಕಟಪಾಡಿ , ಗರಡಿಮನೆ ಅಶೋಕ್‌ ಎನ್‌. ಪೂಜಾರಿ ಕಟಪಾಡಿ, ಕೆ. ಪ್ರೇಮ್‌ ಕುಮಾರ್‌ ಕಟಪಾಡಿ, ಶ್ರೀ ಕ್ಷೇತ್ರದ ಗುರಿಕಾರ ಹರಿಶ್ಚಂದ್ರ ಪಿಲಾರ್‌ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

13 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

16 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

16 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

16 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

16 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

17 hours ago