Featured

ಕಟಪಾಡಿ : ಜ.4 ಮತ್ತು ಜ.5ರಂದು ಶ್ರೀ ಕ್ಷೇತ್ರ ಪೇಟೆಬೆಟ್ಟು ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ – vishwanews24

ಕಟಪಾಡಿ : ಜ.4 ಮತ್ತು ಜ.5ರಂದು ಶ್ರೀ ಕ್ಷೇತ್ರ ಪೇಟೆಬೆಟ್ಟು ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ

ಕಟಪಾಡಿ: ಶ್ರೀ ಕ್ಷೇತ್ರ ಪೇಟೆಬೆಟ್ಟು ಕಟಪಾಡಿಯ ಭಗವಾನ್‌ ಶ್ರೀ ಬಬ್ಬುಸ್ವಾಮಿ ದೈವಸ್ಥಾನ, ಶ್ರೀ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಬಬ್ಬು ಸ್ವಾಮಿ ಹಾಗೂ ಪರಿವಾರ ದೈವಗಳ ನೇಮೋ ತ್ಸವವು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಗಳೊಂದಿಗೆ ಜ.4 ಮತ್ತು ಜ.5ರಂದು ಜರಗಲಿದೆ.

ಜ.3ರಂದು ಬೆಳಗ್ಗೆ 8 ಗಂಟೆಗೆ ಸತ್ಯ ಕಂಬೆರ್ಲು ದೇವರ ದರ್ಶನ ಸೇವೆಯೊಂದಿಗೆ ಮುಹೂರ್ತ ಗೊಳ್ಳಲಿದೆ. ಜ.4ರಂದು ಬೆಳಗ್ಗೆ 7.30ಕ್ಕೆ ಧ್ವಜಸ್ತಂಭ (ಗಜಕಂಬ) ಮುಹೂರ್ತ, ಮಧ್ಯಾಹ್ನ 12ಕ್ಕೆ ಚಪ್ಪರ ಆರೋಹಣ, 12.45ಕ್ಕೆ ಮಹಾ ಅನ್ನ ಸಂತರ್ಪಣೆ, ಸಂಜೆ 4ಕ್ಕೆ ಶ್ರೀ ಕ್ಷೇತ್ರ ಶುದ್ಧಿ ಪೂಜೆ ನಡೆಯಲಿದೆ. ಸಂಜೆ 6ಕ್ಕೆ ಭಂಡಾರ ಹೊರಟು ಕಟಪಾಡಿ ಪೇಟೆಯ ಮೂಲಕ ವಿಜೃಂಭಣೆಯ ಭವ್ಯ ಮೆರವಣಿಗೆ ಯಲ್ಲಿ ಸಾಗಿ ಬರಲಿದೆ. ರಾತ್ರಿ 10ಕ್ಕೆ ಬಬ್ಬುಸ್ವಾಮಿ ನೇಮ ಹಾಗೂ ರಾತ್ರಿ 1 ಗಂಟೆಗೆ ಆದಿಶಕ್ತಿ ಶ್ರೀ ತನ್ನಿಮಾನಿಗ ದೇವಿಯ ನೇಮ ಜರಗಲಿದೆ.

ಜ.5ರ ಬೆಳಗ್ಗೆ 9ಕ್ಕೆ ಶ್ರೀ ಧೂಮಾವತಿ ಹಾಗೂ ಬಂಟ ದೈವಗಳ ನೇಮ, ಅಪರಾಹ್ನ 3 ಗಂಟೆಗೆ ಕೊರಗಜ್ಜ ದೈವದ ನೇಮ ಜರಗಲಿದೆ.
ಜ.4ರಂದು ಬೆಳಗ್ಗೆ 9ರಿಂದ ಸಂಜೆಯ ತನಕವೂ ಸಾಂಸ್ಕೃತಿಕ ಕಾರ್ಯ ಕ್ರಮವು ಜರಗಲಿವೆ ಎಂದು ಪಾಂ ಗಾಳ ನಾಯಕ್‌ ಮನೆತನ ಕಟಪಾಡಿ ಹೊಸ ಮನೆಯ ವೈ. ಭರತ್‌ ಹೆಗ್ಡೆ ಕಟಪಾಡಿ , ಗರಡಿಮನೆ ಅಶೋಕ್‌ ಎನ್‌. ಪೂಜಾರಿ ಕಟಪಾಡಿ, ಕೆ. ಪ್ರೇಮ್‌ ಕುಮಾರ್‌ ಕಟಪಾಡಿ, ಶ್ರೀ ಕ್ಷೇತ್ರದ ಗುರಿಕಾರ ಹರಿಶ್ಚಂದ್ರ ಪಿಲಾರ್‌ ತಿಳಿಸಿದ್ದಾರೆ.

Vishwa News 24

Recent Posts

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

11 minutes ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

18 minutes ago

ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ – vishwanews24

ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ ಉಡುಪಿ: ಭಾರತೀಯ ಜನತಾ ಪಾರ್ಟಿಯ ಎಸ್.ಟಿ ಮೋರ್ಚಾ ಜಿಲ್ಲಾ…

26 minutes ago

ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ ಅಧಿಕೃತವಾಗಿ ಸೇರ್ಪಡೆ – vishwanews24

ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…

3 hours ago

ಮಂಗಳೂರು: ಜೂ.29ರಂದು ವಿಶೇಷ ಸಹಕಾರ ಸಪ್ತಾಹ ಉದ್ಘಾಟನೆ – vishwanews24

ಮಂಗಳೂರು:  ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…

4 hours ago

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ – vishwanews24

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…

4 hours ago