Featured

ಕಟಪಾಡಿ : ಜ.4 ಮತ್ತು ಜ.5ರಂದು ಶ್ರೀ ಕ್ಷೇತ್ರ ಪೇಟೆಬೆಟ್ಟು ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ – vishwanews24

ಕಟಪಾಡಿ : ಜ.4 ಮತ್ತು ಜ.5ರಂದು ಶ್ರೀ ಕ್ಷೇತ್ರ ಪೇಟೆಬೆಟ್ಟು ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ

ಕಟಪಾಡಿ: ಶ್ರೀ ಕ್ಷೇತ್ರ ಪೇಟೆಬೆಟ್ಟು ಕಟಪಾಡಿಯ ಭಗವಾನ್‌ ಶ್ರೀ ಬಬ್ಬುಸ್ವಾಮಿ ದೈವಸ್ಥಾನ, ಶ್ರೀ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಬಬ್ಬು ಸ್ವಾಮಿ ಹಾಗೂ ಪರಿವಾರ ದೈವಗಳ ನೇಮೋ ತ್ಸವವು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಗಳೊಂದಿಗೆ ಜ.4 ಮತ್ತು ಜ.5ರಂದು ಜರಗಲಿದೆ.

ಜ.3ರಂದು ಬೆಳಗ್ಗೆ 8 ಗಂಟೆಗೆ ಸತ್ಯ ಕಂಬೆರ್ಲು ದೇವರ ದರ್ಶನ ಸೇವೆಯೊಂದಿಗೆ ಮುಹೂರ್ತ ಗೊಳ್ಳಲಿದೆ. ಜ.4ರಂದು ಬೆಳಗ್ಗೆ 7.30ಕ್ಕೆ ಧ್ವಜಸ್ತಂಭ (ಗಜಕಂಬ) ಮುಹೂರ್ತ, ಮಧ್ಯಾಹ್ನ 12ಕ್ಕೆ ಚಪ್ಪರ ಆರೋಹಣ, 12.45ಕ್ಕೆ ಮಹಾ ಅನ್ನ ಸಂತರ್ಪಣೆ, ಸಂಜೆ 4ಕ್ಕೆ ಶ್ರೀ ಕ್ಷೇತ್ರ ಶುದ್ಧಿ ಪೂಜೆ ನಡೆಯಲಿದೆ. ಸಂಜೆ 6ಕ್ಕೆ ಭಂಡಾರ ಹೊರಟು ಕಟಪಾಡಿ ಪೇಟೆಯ ಮೂಲಕ ವಿಜೃಂಭಣೆಯ ಭವ್ಯ ಮೆರವಣಿಗೆ ಯಲ್ಲಿ ಸಾಗಿ ಬರಲಿದೆ. ರಾತ್ರಿ 10ಕ್ಕೆ ಬಬ್ಬುಸ್ವಾಮಿ ನೇಮ ಹಾಗೂ ರಾತ್ರಿ 1 ಗಂಟೆಗೆ ಆದಿಶಕ್ತಿ ಶ್ರೀ ತನ್ನಿಮಾನಿಗ ದೇವಿಯ ನೇಮ ಜರಗಲಿದೆ.

ಜ.5ರ ಬೆಳಗ್ಗೆ 9ಕ್ಕೆ ಶ್ರೀ ಧೂಮಾವತಿ ಹಾಗೂ ಬಂಟ ದೈವಗಳ ನೇಮ, ಅಪರಾಹ್ನ 3 ಗಂಟೆಗೆ ಕೊರಗಜ್ಜ ದೈವದ ನೇಮ ಜರಗಲಿದೆ.
ಜ.4ರಂದು ಬೆಳಗ್ಗೆ 9ರಿಂದ ಸಂಜೆಯ ತನಕವೂ ಸಾಂಸ್ಕೃತಿಕ ಕಾರ್ಯ ಕ್ರಮವು ಜರಗಲಿವೆ ಎಂದು ಪಾಂ ಗಾಳ ನಾಯಕ್‌ ಮನೆತನ ಕಟಪಾಡಿ ಹೊಸ ಮನೆಯ ವೈ. ಭರತ್‌ ಹೆಗ್ಡೆ ಕಟಪಾಡಿ , ಗರಡಿಮನೆ ಅಶೋಕ್‌ ಎನ್‌. ಪೂಜಾರಿ ಕಟಪಾಡಿ, ಕೆ. ಪ್ರೇಮ್‌ ಕುಮಾರ್‌ ಕಟಪಾಡಿ, ಶ್ರೀ ಕ್ಷೇತ್ರದ ಗುರಿಕಾರ ಹರಿಶ್ಚಂದ್ರ ಪಿಲಾರ್‌ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago