Featured

ಕಟಪಾಡಿ ಪಳ್ಳಿಗುಡ್ಡೆ ಮೈದಾನ ತೆರವಿಗೆ ಕ್ರಮ ಕೈಗೊಳ್ಳಲು ಆಗ್ರಹ – vishwanews24

ಕಟಪಾಡಿ ಪಳ್ಳಿಗುಡ್ಡೆ ಮೈದಾನ ತೆರವಿಗೆ ಕ್ರಮ ಕೈಗೊಳ್ಳಲು ಆಗ್ರಹ

ಉಡುಪಿ : ಕಾಪು ತಾಲೂಕು ಕೋಟೆ ಗ್ರಾಪಂ ವ್ಯಾಪ್ತಿಯಲ್ಲಿರುವ ಒಟ್ಟು ಸುಮಾರು 6.96ಎಕರೆ ಸರಕಾರಿ ಭೂಮಿಯನ್ನು ಖಾಸಗೀ ಶಿಕ್ಷಣ ಸಂಸ್ಥೆಯಾದ ಕಟಪಾಡಿ ಎಸ್‌ವಿಎಸ್ ಹೈಸ್ಕೂಲ್ ಹೆಸರಿನಲ್ಲಿ ಪಹಣಿ ಕಲಂ 11ರಲ್ಲಿ ಎಲಿನೇಶನ್ ಮಾಡಿದ್ದು, ಅದನ್ನು ಆ ಸಂಸ್ಥೆ ದುರುಪಯೋಗ ಪಡಿಸಿ ಕೊಳ್ಳುತ್ತಿದೆ. ಆದ್ದರಿಂದ ಅದನ್ನು ಸಾರ್ವಜನಿಕರ ಬಳಕೆಗೆ ತೆರವುಗೊಳಿಸಬೇಕು ಎಂದು ಗ್ರಾಮಸ್ಥ ಪ್ರಭಾಕರ ಕೋಟ್ಯಾನ್ ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎಸ್‌ವಿಎಸ್ ಹೈಸ್ಕೂಲ್ ಕಟಪಾಡಿ ಎಂಬ ಖಾಸಗಿ ವಿದ್ಯಾಸಂಸ್ಥೆ ಸರಕಾರಿ ಜಾಗದಲ್ಲಿ ಆಟದ ಮೈದಾನವನ್ನು ಎಲಿನೇಶನ್ ಮೂಲಕ ಹೊಂದಿದ್ದು, ಇದೀಗ ಆಟದ ಮೈದಾನಕ್ಕೆ ಗೇಟು ಅಳವಡಿಸಿ, ಬೀಗ ಹಾಕಿದ್ದಾರೆ. ಅಲ್ಲದೇ ಇದಕ್ಕೆ ಎಸ್‌ವಿಎಸ್ ಕ್ರೀಡಾಂಗಣ ಎಂಬ ನಾಮಫಲಕವನ್ನೂ ಅಳವಡಿಸಿದ್ದಾರೆ ಎಂದು ದೂರಿದರು.

ಇದನ್ನೂ ಓದಿ :

ಹಲವು ದಶಕಗಳಿಂದ ಪಳ್ಳಿಗುಡ್ಡೆ ಮೈದಾನವೆಂದು ನಿತ್ಯ ಬಳಕೆಯಲ್ಲಿ, ನೆಹರೂ ಮೈದಾನವೆಂದು ಸಾರ್ವಜನಿಕ ವಾಗಿ ಕರೆಯಲ್ಪಡುತಿದ್ದ ಈ ಮೈದಾನ ಸಾರ್ವಜನಿಕರ ಬಳಕೆ, ಮಕ್ಕಳ ದೈನಂದಿನ ಆಟಕ್ಕೆ ಬಳಕೆಯಾಗುತ್ತಿತ್ತು. ಆದರೇ ಈಗ ಸಂಸ್ಥೆಯವರು ಮೈದಾನಕ್ಕೆ ಗೇಟು ಅಳವಡಿಸಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಆಟವಾ ಡಲು ಪ್ರತಿದಿನಕ್ಕೆ 3,000ರೂ.ಗಳನ್ನು ಅಕ್ರಮವಾಗಿ ವಸೂಲಿ ಮಾಡುತಿದ್ದಾರೆ. ಈ ದಂಧೆ ಕಳೆದ ಹಲವು ವರ್ಷಗಳಿಂದ ನಡೆಯುತ್ತಿದೆ ಎಂದವರು ಆರೋಪಿಸಿದರು.

ಅಲ್ಲದೇ ಸರಕಾರಿ ಜಾಗದಲ್ಲಿ ಬೇರೆ ಬೇರೆ ಕಟ್ಟಡಗಳನ್ನು, ವೇದಿಕೆಯನ್ನು ನಿರ್ಮಿಸಲು ಮುಂದಾಗಿದ್ದು, ಗ್ರಾಮಪಂಚಾಯತ್ ಈಗಾಗಲೇ ಅದನ್ನು ತೆರವು ಗೊಳಿಸುವಂತೆ ನಿರ್ಣಯ ತೆಗೆದುಕೊಂಡು ನೋಟೀಸು ನೀಡಿದ್ದರೂ ಅದನ್ನು ನಿರ್ಲಕ್ಷಿಸಿದ್ದಾರೆ ಎಂದು ಪ್ರಭಾಕರ ಕೋಟ್ಯಾನ್ ತಿಳಿಸಿದರು.

ಈ ಮೈದಾನವನ್ನು ಕಾಪು ತಾಲೂಕಿನ ‘ತಾಲೂಕು ಕ್ರೀಡಾಂಗಣ’ವಾಗಿ ಘೋಷಿಸಿ, ಈ ಬಗ್ಗೆ ಕ್ರಮ ಕೈಗೊಳ್ಳಬೇಕು. 10 ದಿನದೊಳಗೆ ಮೈದಾನಕ್ಕೆ ಹಾಕಿರುವ ಬೀಗವನ್ನು ತೆರವುಗೊಳಿಸದಿದ್ದರೆ, ಕ್ರೀಡಾಪಟುಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೊಂದಿಗೆ ಸೇರಿ ಪ್ರತಿಭಟನೆ ಹಮ್ಮಿ ಕೊಳ್ಳಲಾಗುವುದು ಎಂದವರು ಎಚ್ಚರಿಸಿದ್ದಾರೆ. ಗ್ರಾಮಸ್ಥ ಶೈಲೇಶ್ ಉಪಸ್ಥಿತರಿದ್ದರು.

ಇದನ್ನೂ ಓದಿ :

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

13 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

13 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

14 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

14 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago