Featured

ಕಟಪಾಡಿ ಪಳ್ಳಿಗುಡ್ಡೆ ಮೈದಾನ ತೆರವಿಗೆ ಕ್ರಮ ಕೈಗೊಳ್ಳಲು ಆಗ್ರಹ – vishwanews24

ಕಟಪಾಡಿ ಪಳ್ಳಿಗುಡ್ಡೆ ಮೈದಾನ ತೆರವಿಗೆ ಕ್ರಮ ಕೈಗೊಳ್ಳಲು ಆಗ್ರಹ

ಉಡುಪಿ : ಕಾಪು ತಾಲೂಕು ಕೋಟೆ ಗ್ರಾಪಂ ವ್ಯಾಪ್ತಿಯಲ್ಲಿರುವ ಒಟ್ಟು ಸುಮಾರು 6.96ಎಕರೆ ಸರಕಾರಿ ಭೂಮಿಯನ್ನು ಖಾಸಗೀ ಶಿಕ್ಷಣ ಸಂಸ್ಥೆಯಾದ ಕಟಪಾಡಿ ಎಸ್‌ವಿಎಸ್ ಹೈಸ್ಕೂಲ್ ಹೆಸರಿನಲ್ಲಿ ಪಹಣಿ ಕಲಂ 11ರಲ್ಲಿ ಎಲಿನೇಶನ್ ಮಾಡಿದ್ದು, ಅದನ್ನು ಆ ಸಂಸ್ಥೆ ದುರುಪಯೋಗ ಪಡಿಸಿ ಕೊಳ್ಳುತ್ತಿದೆ. ಆದ್ದರಿಂದ ಅದನ್ನು ಸಾರ್ವಜನಿಕರ ಬಳಕೆಗೆ ತೆರವುಗೊಳಿಸಬೇಕು ಎಂದು ಗ್ರಾಮಸ್ಥ ಪ್ರಭಾಕರ ಕೋಟ್ಯಾನ್ ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎಸ್‌ವಿಎಸ್ ಹೈಸ್ಕೂಲ್ ಕಟಪಾಡಿ ಎಂಬ ಖಾಸಗಿ ವಿದ್ಯಾಸಂಸ್ಥೆ ಸರಕಾರಿ ಜಾಗದಲ್ಲಿ ಆಟದ ಮೈದಾನವನ್ನು ಎಲಿನೇಶನ್ ಮೂಲಕ ಹೊಂದಿದ್ದು, ಇದೀಗ ಆಟದ ಮೈದಾನಕ್ಕೆ ಗೇಟು ಅಳವಡಿಸಿ, ಬೀಗ ಹಾಕಿದ್ದಾರೆ. ಅಲ್ಲದೇ ಇದಕ್ಕೆ ಎಸ್‌ವಿಎಸ್ ಕ್ರೀಡಾಂಗಣ ಎಂಬ ನಾಮಫಲಕವನ್ನೂ ಅಳವಡಿಸಿದ್ದಾರೆ ಎಂದು ದೂರಿದರು.

ಇದನ್ನೂ ಓದಿ :

ಹಲವು ದಶಕಗಳಿಂದ ಪಳ್ಳಿಗುಡ್ಡೆ ಮೈದಾನವೆಂದು ನಿತ್ಯ ಬಳಕೆಯಲ್ಲಿ, ನೆಹರೂ ಮೈದಾನವೆಂದು ಸಾರ್ವಜನಿಕ ವಾಗಿ ಕರೆಯಲ್ಪಡುತಿದ್ದ ಈ ಮೈದಾನ ಸಾರ್ವಜನಿಕರ ಬಳಕೆ, ಮಕ್ಕಳ ದೈನಂದಿನ ಆಟಕ್ಕೆ ಬಳಕೆಯಾಗುತ್ತಿತ್ತು. ಆದರೇ ಈಗ ಸಂಸ್ಥೆಯವರು ಮೈದಾನಕ್ಕೆ ಗೇಟು ಅಳವಡಿಸಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಆಟವಾ ಡಲು ಪ್ರತಿದಿನಕ್ಕೆ 3,000ರೂ.ಗಳನ್ನು ಅಕ್ರಮವಾಗಿ ವಸೂಲಿ ಮಾಡುತಿದ್ದಾರೆ. ಈ ದಂಧೆ ಕಳೆದ ಹಲವು ವರ್ಷಗಳಿಂದ ನಡೆಯುತ್ತಿದೆ ಎಂದವರು ಆರೋಪಿಸಿದರು.

ಅಲ್ಲದೇ ಸರಕಾರಿ ಜಾಗದಲ್ಲಿ ಬೇರೆ ಬೇರೆ ಕಟ್ಟಡಗಳನ್ನು, ವೇದಿಕೆಯನ್ನು ನಿರ್ಮಿಸಲು ಮುಂದಾಗಿದ್ದು, ಗ್ರಾಮಪಂಚಾಯತ್ ಈಗಾಗಲೇ ಅದನ್ನು ತೆರವು ಗೊಳಿಸುವಂತೆ ನಿರ್ಣಯ ತೆಗೆದುಕೊಂಡು ನೋಟೀಸು ನೀಡಿದ್ದರೂ ಅದನ್ನು ನಿರ್ಲಕ್ಷಿಸಿದ್ದಾರೆ ಎಂದು ಪ್ರಭಾಕರ ಕೋಟ್ಯಾನ್ ತಿಳಿಸಿದರು.

ಈ ಮೈದಾನವನ್ನು ಕಾಪು ತಾಲೂಕಿನ ‘ತಾಲೂಕು ಕ್ರೀಡಾಂಗಣ’ವಾಗಿ ಘೋಷಿಸಿ, ಈ ಬಗ್ಗೆ ಕ್ರಮ ಕೈಗೊಳ್ಳಬೇಕು. 10 ದಿನದೊಳಗೆ ಮೈದಾನಕ್ಕೆ ಹಾಕಿರುವ ಬೀಗವನ್ನು ತೆರವುಗೊಳಿಸದಿದ್ದರೆ, ಕ್ರೀಡಾಪಟುಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೊಂದಿಗೆ ಸೇರಿ ಪ್ರತಿಭಟನೆ ಹಮ್ಮಿ ಕೊಳ್ಳಲಾಗುವುದು ಎಂದವರು ಎಚ್ಚರಿಸಿದ್ದಾರೆ. ಗ್ರಾಮಸ್ಥ ಶೈಲೇಶ್ ಉಪಸ್ಥಿತರಿದ್ದರು.

ಇದನ್ನೂ ಓದಿ :

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

17 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

17 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

18 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

21 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

21 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

22 hours ago