Featured

ಕಟಪಾಡಿ ಪಳ್ಳಿಗುಡ್ಡೆ ಮೈದಾನ ತೆರವಿಗೆ ಕ್ರಮ ಕೈಗೊಳ್ಳಲು ಆಗ್ರಹ – vishwanews24

ಕಟಪಾಡಿ ಪಳ್ಳಿಗುಡ್ಡೆ ಮೈದಾನ ತೆರವಿಗೆ ಕ್ರಮ ಕೈಗೊಳ್ಳಲು ಆಗ್ರಹ

ಉಡುಪಿ : ಕಾಪು ತಾಲೂಕು ಕೋಟೆ ಗ್ರಾಪಂ ವ್ಯಾಪ್ತಿಯಲ್ಲಿರುವ ಒಟ್ಟು ಸುಮಾರು 6.96ಎಕರೆ ಸರಕಾರಿ ಭೂಮಿಯನ್ನು ಖಾಸಗೀ ಶಿಕ್ಷಣ ಸಂಸ್ಥೆಯಾದ ಕಟಪಾಡಿ ಎಸ್‌ವಿಎಸ್ ಹೈಸ್ಕೂಲ್ ಹೆಸರಿನಲ್ಲಿ ಪಹಣಿ ಕಲಂ 11ರಲ್ಲಿ ಎಲಿನೇಶನ್ ಮಾಡಿದ್ದು, ಅದನ್ನು ಆ ಸಂಸ್ಥೆ ದುರುಪಯೋಗ ಪಡಿಸಿ ಕೊಳ್ಳುತ್ತಿದೆ. ಆದ್ದರಿಂದ ಅದನ್ನು ಸಾರ್ವಜನಿಕರ ಬಳಕೆಗೆ ತೆರವುಗೊಳಿಸಬೇಕು ಎಂದು ಗ್ರಾಮಸ್ಥ ಪ್ರಭಾಕರ ಕೋಟ್ಯಾನ್ ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎಸ್‌ವಿಎಸ್ ಹೈಸ್ಕೂಲ್ ಕಟಪಾಡಿ ಎಂಬ ಖಾಸಗಿ ವಿದ್ಯಾಸಂಸ್ಥೆ ಸರಕಾರಿ ಜಾಗದಲ್ಲಿ ಆಟದ ಮೈದಾನವನ್ನು ಎಲಿನೇಶನ್ ಮೂಲಕ ಹೊಂದಿದ್ದು, ಇದೀಗ ಆಟದ ಮೈದಾನಕ್ಕೆ ಗೇಟು ಅಳವಡಿಸಿ, ಬೀಗ ಹಾಕಿದ್ದಾರೆ. ಅಲ್ಲದೇ ಇದಕ್ಕೆ ಎಸ್‌ವಿಎಸ್ ಕ್ರೀಡಾಂಗಣ ಎಂಬ ನಾಮಫಲಕವನ್ನೂ ಅಳವಡಿಸಿದ್ದಾರೆ ಎಂದು ದೂರಿದರು.

ಇದನ್ನೂ ಓದಿ :

ಹಲವು ದಶಕಗಳಿಂದ ಪಳ್ಳಿಗುಡ್ಡೆ ಮೈದಾನವೆಂದು ನಿತ್ಯ ಬಳಕೆಯಲ್ಲಿ, ನೆಹರೂ ಮೈದಾನವೆಂದು ಸಾರ್ವಜನಿಕ ವಾಗಿ ಕರೆಯಲ್ಪಡುತಿದ್ದ ಈ ಮೈದಾನ ಸಾರ್ವಜನಿಕರ ಬಳಕೆ, ಮಕ್ಕಳ ದೈನಂದಿನ ಆಟಕ್ಕೆ ಬಳಕೆಯಾಗುತ್ತಿತ್ತು. ಆದರೇ ಈಗ ಸಂಸ್ಥೆಯವರು ಮೈದಾನಕ್ಕೆ ಗೇಟು ಅಳವಡಿಸಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಆಟವಾ ಡಲು ಪ್ರತಿದಿನಕ್ಕೆ 3,000ರೂ.ಗಳನ್ನು ಅಕ್ರಮವಾಗಿ ವಸೂಲಿ ಮಾಡುತಿದ್ದಾರೆ. ಈ ದಂಧೆ ಕಳೆದ ಹಲವು ವರ್ಷಗಳಿಂದ ನಡೆಯುತ್ತಿದೆ ಎಂದವರು ಆರೋಪಿಸಿದರು.

ಅಲ್ಲದೇ ಸರಕಾರಿ ಜಾಗದಲ್ಲಿ ಬೇರೆ ಬೇರೆ ಕಟ್ಟಡಗಳನ್ನು, ವೇದಿಕೆಯನ್ನು ನಿರ್ಮಿಸಲು ಮುಂದಾಗಿದ್ದು, ಗ್ರಾಮಪಂಚಾಯತ್ ಈಗಾಗಲೇ ಅದನ್ನು ತೆರವು ಗೊಳಿಸುವಂತೆ ನಿರ್ಣಯ ತೆಗೆದುಕೊಂಡು ನೋಟೀಸು ನೀಡಿದ್ದರೂ ಅದನ್ನು ನಿರ್ಲಕ್ಷಿಸಿದ್ದಾರೆ ಎಂದು ಪ್ರಭಾಕರ ಕೋಟ್ಯಾನ್ ತಿಳಿಸಿದರು.

ಈ ಮೈದಾನವನ್ನು ಕಾಪು ತಾಲೂಕಿನ ‘ತಾಲೂಕು ಕ್ರೀಡಾಂಗಣ’ವಾಗಿ ಘೋಷಿಸಿ, ಈ ಬಗ್ಗೆ ಕ್ರಮ ಕೈಗೊಳ್ಳಬೇಕು. 10 ದಿನದೊಳಗೆ ಮೈದಾನಕ್ಕೆ ಹಾಕಿರುವ ಬೀಗವನ್ನು ತೆರವುಗೊಳಿಸದಿದ್ದರೆ, ಕ್ರೀಡಾಪಟುಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೊಂದಿಗೆ ಸೇರಿ ಪ್ರತಿಭಟನೆ ಹಮ್ಮಿ ಕೊಳ್ಳಲಾಗುವುದು ಎಂದವರು ಎಚ್ಚರಿಸಿದ್ದಾರೆ. ಗ್ರಾಮಸ್ಥ ಶೈಲೇಶ್ ಉಪಸ್ಥಿತರಿದ್ದರು.

ಇದನ್ನೂ ಓದಿ :

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago