Featured

ಕಟಪಾಡಿ: ಬಸ್ ಢಿಕ್ಕಿಯಾಗಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌‌ಗೆ ಗುದ್ದಿದ ಸ್ಕೂಟರ್  – Vishwanews24

ಕಟಪಾಡಿ : ಬಸ್ ಢಿಕ್ಕಿಯಾಗಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌‌ಗೆ ಗುದ್ದಿದ ಸ್ಕೂಟರ್

ಕಾಪು : ರಾಷ್ಟ್ರೀಯ ಹೆದ್ದಾರಿ 66 ಕಟಪಾಡಿ ಮೂಡಬೆಟ್ಟು ಬಳಿ ಸ್ಕೂಟರಿನಲ್ಲಿ ಚಲಾಯಿಸುತ್ತಿದ್ದ ಸಹಸವಾರೆಯ ಎಡ ಕಾಲಿಗೆ ಬಸ್ಸಿನ ಹಿಂಬದಿ ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದುಕೊಂಡ ಸ್ಕೂಟರ್‌ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಬಿದ್ದು ಹಿಂಬದಿಯಿದ್ದ ಯುವತಿ ಸಾವನ್ನಪ್ಪಿ, ಸವಾರ ಗಾಯಗೊಂಡ ಘಟನೆ ನಡೆದಿದೆ.

ಮೃತ ಯುವತಿಯನ್ನು ರೋಶನಿ ಡಿಸೋಜಾ ಎಂದು ಗುರುತಿಸಲಾಗಿದೆ.

ಉಡುಪಿ ಮಂಗಳೂರು ರಸ್ತೆಯಲ್ಲಿ ಮಂಗಳೂರು ಕಡೆಗೆ ರಸ್ತೆಯ ಬಲಬದಿಯಲ್ಲಿ ಡಿವೈಡರ್‌ ಪಕ್ಕದಲ್ಲಿ ಸ್ಕೂಟರ್ ಹೋಗುತ್ತಿದ್ದಾಗ ಉಡುಪಿ ಕಡೆಯಿಂದ ಬಂದ ಬಸ್ಸಿನ ಚಾಲಕನು ತನ್ನ ಬಸ್ಸನ್ನು ಅತೀ ವೇಗ ಹಾಗೂ ನಿಲ೯ಕ್ಷ್ಯತನದಿಂದ ಚಲಾಯಿಸಿಕೊಂಡು ರಸ್ತೆಯ ಎಡಬದಿಯಲ್ಲಿ ಹೋಗುತ್ತಿದ್ದು ಏಕಾಏಕಿಯಾಗಿ ಬಸ್ಸನ್ನು ರಸ್ತೆಯ ಬಲಬದಿಗೆ ಚಲಾಯಿಸಿಕೊಂಡು ಬಂದು ಸ್ಕೂಟರ್‌ ಹಿಂದೆ ಕುಳಿತಿದ್ದ ರೋಶನಿಯವರ ಎಡ ಕಾಲಿಗೆ ಬಸ್ಸಿನ ಹಿಂಬದಿ ಡಿಕ್ಕಿ ಹೊಡೆದು ಬಸ್ಸನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ.

ಇನ್ನು ಬಸ್ಸು ರೋಶನಿಯ ಕಾಲಿಗೆ ಡಿಕ್ಕಿ ಹೊಡೆದ ಕಾರಣ ನೋವಿನಿಂದ ಅತ್ತಿತ್ತ ವಾಲಾಡಿದ್ದು ಸ್ಕೂಟರ್‌ ನನ್ನ ನಿಯಂತ್ರಣ ತಪ್ಪಿ ಮುಂದೆ ರಾಷ್ಟ್ರೀಯ ಹೆದ್ದಾರಿ 66 ಕಾಮಗಾರಿ ನಡೆಯುತ್ತಿದ್ದ ಕಾರಣ ರಸ್ತೆಯ ಬಲಬದಿಗೆ ಅಡ್ಡವಿಟ್ಟಿದ್ದ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಸ್ವಲ್ಪ ಮುಂದಕ್ಕೆ ಹೋಗಿ ಸ್ಕೂಟರ್‌ ಸಮೇತ ರಸ್ತೆಗೆ ಬಿದ್ದ ಬಿದ್ದ ಪರಿಣಾಮ ರೋಶನಿ ತಲೆಗೆ ಪೆಟ್ಟಾಗಿದ್ದು ಬಾಯಲ್ಲಿ ರಕ್ತ ಬರುತ್ತಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ರೋಶನಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಸವಾರ ಪ್ರಥಮ ಚಿಕಿತ್ಸೆ ಪಡೆದು ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಕಾಪು ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 21/2023 ಕಲಂ: 279, 337, 304(ಎ) ಐಪಿಸಿ ಮತ್ತು 134 (ಎ) & (ಬಿ) ಐ.ಎಮ್.ವಿ. ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

1 hour ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

22 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

22 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

22 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

22 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

22 hours ago