ಕಾಪು : ರಾಷ್ಟ್ರೀಯ ಹೆದ್ದಾರಿ 66 ಕಟಪಾಡಿ ಮೂಡಬೆಟ್ಟು ಬಳಿ ಸ್ಕೂಟರಿನಲ್ಲಿ ಚಲಾಯಿಸುತ್ತಿದ್ದ ಸಹಸವಾರೆಯ ಎಡ ಕಾಲಿಗೆ ಬಸ್ಸಿನ ಹಿಂಬದಿ ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದುಕೊಂಡ ಸ್ಕೂಟರ್ ಬ್ಯಾರಿಕೇಡ್ಗೆ ಡಿಕ್ಕಿ ಹೊಡೆದು ಬಿದ್ದು ಹಿಂಬದಿಯಿದ್ದ ಯುವತಿ ಸಾವನ್ನಪ್ಪಿ, ಸವಾರ ಗಾಯಗೊಂಡ ಘಟನೆ ನಡೆದಿದೆ.
ಮೃತ ಯುವತಿಯನ್ನು ರೋಶನಿ ಡಿಸೋಜಾ ಎಂದು ಗುರುತಿಸಲಾಗಿದೆ.
ಉಡುಪಿ ಮಂಗಳೂರು ರಸ್ತೆಯಲ್ಲಿ ಮಂಗಳೂರು ಕಡೆಗೆ ರಸ್ತೆಯ ಬಲಬದಿಯಲ್ಲಿ ಡಿವೈಡರ್ ಪಕ್ಕದಲ್ಲಿ ಸ್ಕೂಟರ್ ಹೋಗುತ್ತಿದ್ದಾಗ ಉಡುಪಿ ಕಡೆಯಿಂದ ಬಂದ ಬಸ್ಸಿನ ಚಾಲಕನು ತನ್ನ ಬಸ್ಸನ್ನು ಅತೀ ವೇಗ ಹಾಗೂ ನಿಲ೯ಕ್ಷ್ಯತನದಿಂದ ಚಲಾಯಿಸಿಕೊಂಡು ರಸ್ತೆಯ ಎಡಬದಿಯಲ್ಲಿ ಹೋಗುತ್ತಿದ್ದು ಏಕಾಏಕಿಯಾಗಿ ಬಸ್ಸನ್ನು ರಸ್ತೆಯ ಬಲಬದಿಗೆ ಚಲಾಯಿಸಿಕೊಂಡು ಬಂದು ಸ್ಕೂಟರ್ ಹಿಂದೆ ಕುಳಿತಿದ್ದ ರೋಶನಿಯವರ ಎಡ ಕಾಲಿಗೆ ಬಸ್ಸಿನ ಹಿಂಬದಿ ಡಿಕ್ಕಿ ಹೊಡೆದು ಬಸ್ಸನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ.
ಇನ್ನು ಬಸ್ಸು ರೋಶನಿಯ ಕಾಲಿಗೆ ಡಿಕ್ಕಿ ಹೊಡೆದ ಕಾರಣ ನೋವಿನಿಂದ ಅತ್ತಿತ್ತ ವಾಲಾಡಿದ್ದು ಸ್ಕೂಟರ್ ನನ್ನ ನಿಯಂತ್ರಣ ತಪ್ಪಿ ಮುಂದೆ ರಾಷ್ಟ್ರೀಯ ಹೆದ್ದಾರಿ 66 ಕಾಮಗಾರಿ ನಡೆಯುತ್ತಿದ್ದ ಕಾರಣ ರಸ್ತೆಯ ಬಲಬದಿಗೆ ಅಡ್ಡವಿಟ್ಟಿದ್ದ ಬ್ಯಾರಿಕೇಡ್ಗೆ ಡಿಕ್ಕಿ ಹೊಡೆದು ಸ್ವಲ್ಪ ಮುಂದಕ್ಕೆ ಹೋಗಿ ಸ್ಕೂಟರ್ ಸಮೇತ ರಸ್ತೆಗೆ ಬಿದ್ದ ಬಿದ್ದ ಪರಿಣಾಮ ರೋಶನಿ ತಲೆಗೆ ಪೆಟ್ಟಾಗಿದ್ದು ಬಾಯಲ್ಲಿ ರಕ್ತ ಬರುತ್ತಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ರೋಶನಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಸವಾರ ಪ್ರಥಮ ಚಿಕಿತ್ಸೆ ಪಡೆದು ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಕಾಪು ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 21/2023 ಕಲಂ: 279, 337, 304(ಎ) ಐಪಿಸಿ ಮತ್ತು 134 (ಎ) & (ಬಿ) ಐ.ಎಮ್.ವಿ. ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…