ಕಟಪಾಡಿ: ದೇಶದ ಆಸ್ತಿಯನ್ನು ಮಾರಾಟ ಮಾಡುತ್ತಿರುವ ಬಿಜೆಪಿಯು ಟ್ರೇಡಿಂಗ್ ಸರಕಾರವಾಗಿದೆ. ಜನಸಾಮಾನ್ಯರ ಬಗ್ಗೆ ಅಸಡ್ಡೆ, ತಾತ್ಸಾರ ಮನೋಭಾವನೆಯಿಂದ ಆಡಳಿತ ನಡೆಸುತ್ತಿದ್ದು, ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸುತ್ತಿದೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಕೇಂದ್ರ ಮತ್ತು ರಾಜ್ಯ ಬಿಜೆಪಿ ಆಡಳಿತ ವೈಖರಿಯ ವಿರುದ್ಧ ಕಿಡಿಕಾರಿದರು. .
ಅವರು ಜೂ.15ರಂದು ಉದ್ಯಾವರದಲ್ಲಿ ಡಿಸೆಲ್ ಪೆಟ್ರೋಲ್ ಬೆಲ ಏರಿಕೆಯ ವಿರುದ್ಧ ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಕೊರೊನಾದಿಂದ ಬಡ ಜನತೆ ತತ್ತರಿಸುತ್ತಿರುವ ಈ ಸಂಕಷ್ಟದ ಸಂದರ್ಭದಲ್ಲಿ ಬೆಲೆ ಏರಿಕೆಯ ಮೂಲಕ ಬಡ ವರ್ಗದ ಜನರ ರಕ್ತ ಹೀರುವ ಕೆಲಸ ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರಕಾರವು ಮಾಡುತ್ತಿದೆ. ಕೇಂದ್ರ ಸರಕಾರದ ಬೇಜವಾಬ್ದಾರಿಯಿಂದಾಗಿ ಕೊರೊನಾದಿಂದ 10 ಲಕ್ಷಕ್ಕೂ ಮಿಕ್ಕಿ ಜನರ ಪ್ರಾಣ ಬಲಿಯಾಗಿದೆ. ಕೇಂದ್ರ ಸರಕಾರಕ್ಕೆ ಪೈಪೋಟಿಯಾಗಿ ರಾಜ್ಯ ಬಿಜೆಪಿ ಸರಕಾರವೂ ವಿದ್ಯುತ್ಬೆಲೆ ಏರಿಕೆ ನಡೆಸಿದೆ. ಪ್ರಭು ಶ್ರೀ ರಾಮನ ಹೆಸರಿನ ವಂತಿಗೆಯಲ್ಲಿ ರಿಯಲ್ ಎಸ್ಟೇಟ್ ಬ್ಯುಸಿನೆಸ್ ನಡೆಸಿ ದೇವರ ಹೆಸರಿನಲ್ಲಿಯೂ ದುಡ್ಡು ಅಪಹರಿಸುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…