Featured

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ – vishwanews24

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ

ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ. ಪಂ. ವ್ಯಾಪ್ತಿಯ ಮಟ್ಟು ಬೀಚ್‌ನಲ್ಲಿ ಕಡಲ್ಕೊರೆತ ಮುಂದುವರಿದಿದ್ದು, ಮತ್ತಷ್ಟು ಹಾನಿಯನ್ನು ತಪ್ಪಿಸಲು ತುರ್ತು ಸುರಕ್ಷ ಕಾಮಗಾರಿ ಆರಂಭವಾಗಿದೆ.

ಕಳೆದ ಎರಡು ದಿನಗಳಿಂದ ಬೃಹತ್ ಗಾತ್ರದ ಬಂಡೆ ಕಲ್ಲುಗಳನ್ನು ಟಿಪ್ಪರ್ ಮೂಲಕ ತಂದು ಜೆಸಿಬಿ ಸಹಾಯದಿಂದ ಕಡಲ ತೀರದಲ್ಲಿ ಹಾಕಲಾಗುತ್ತಿದೆ. ಪ್ರಕ್ಷುಬ್ಧಗೊಂಡಿರುವ ಕಡಲಿನ ಭಾರೀ ಗಾತ್ರದ ಅಲೆಗಳ ಅಬ್ಬರಕ್ಕೆ ಕೆಲವು ತೆಂಗಿನ ಮರಗಳು, ಸಿಮೆಂಟ್ ಬೆಂಚ್ ಹಾಗೂ ಎತ್ತರದ ಪ್ರದೇಶದ ಭಾಗ, ಬಂಡೆ ಕಲ್ಲುಗಳು ಕಡಲು ಪಾಲಾಗಿತ್ತು. ಅಪಾಯ ಸ್ಥಿತಿಯಲ್ಲಿದ್ದ ಹೈಮಾಸ್ಟ್ ಲೈಟ್ ಕಂಬ, ಮೂರು ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಲಾಗಿತ್ತು. ಕಾಪು-ಮಲ್ಪೆ ಭಾಗಕ್ಕೆ ಸಂಪರ್ಕ ಕಲ್ಪಿಸುವ ಮೀನುಗಾರಿಕ ರಸ್ತೆ ಅಪಾಯದ ಸ್ಥಿತಿಯಲ್ಲಿತ್ತು. ಮಟ್ಟು ಬೀಚ್ ಕಡಲ ತೀರದ ಸಂರಕ್ಷಣೆಯಲ್ಲಿ ತೋರುತ್ತಿರುವ ನಿರ್ಲಕ್ಷ್ಯದ ಬಗ್ಗೆ ಜನಪರ ವರದಿಯನ್ನು ಉದಯವಾಣಿ ನಿರಂತರವಾಗಿ ಪ್ರಕಟಿಸಿತ್ತು.

ಮಟ್ಟು ಬೀಚ್ ಭಾಗದಲ್ಲಿ ನಿರಂತರ ಕಡಲ್ಕೊರೆತದ ತೀವ್ರತೆಯನ್ನು ಮನಗಂಡು ಶಿಫಾರಸು ಗೊಳಿಸಿ ತುರ್ತು ಸುರಕ್ಷ ಕಾಮಗಾರಿ ಆರಂಭಿಸಲಾಗಿದೆ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ತಿಳಿಸಿದ್ದಾರೆ.

ಇದೀಗ ಮಟ್ಟು ಬೀಚ್ ಪ್ರದೇಶದಲ್ಲಿ ತುರ್ತಾಗಿ ತಾತ್ಕಾಲಿಕ ಸುರಕ್ಷ ಕಾಮಗಾರಿ ಆರಂಭಿಸಲಾಗಿದೆ ಎಂದು ಎಕ್ಸಿಕ್ಯೂಟಿವ್ ಎಂಜಿನಿಯರ್ ಪ್ರಸನ್ನ ಕುಮಾರ್ ಶೇಟ್ ತಿಳಿಸಿದ್ದಾರೆ.

Vishwa News 24

Recent Posts

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

16 minutes ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

23 minutes ago

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ – vishwanews24

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ ಶಿರ್ವ: ಶಿರ್ವ ಮತ್ತು ಕುತ್ಯಾರು ಗ್ರಾ.ಪಂ.…

43 minutes ago

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ – vishwanews24

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ: ನೆಟ್‌ವರ್ಕ್‌…

53 minutes ago

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ – vishwanews24

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…

1 hour ago

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ – vishwanews24

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ ಮೈಸೂರು: ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ.…

1 hour ago