Featured

ಕಟಪಾಡಿ : ಮಹಿಳೆಯ ಮೇಲೆ ಧೂಪ ಮಿಶ್ರಿತ ಹೊಗೆಯನ್ನು ಪ್ರಯೋಗಿಸಿ  ಚಿನ್ನಾಭರಣ ಎಗರಿಸಿ ಪರಾರಿಯಾದ ಮೂವರು ನಕಲಿ ಫಕೀರರು – Vishwanews24

ಕಟಪಾಡಿ : ಮಹಿಳೆಯ ಮೇಲೆ ಧೂಪ ಮಿಶ್ರಿತ ಹೊಗೆಯನ್ನು ಪ್ರಯೋಗಿಸಿ  ಚಿನ್ನಾಭರಣ ಎಗರಿಸಿ ಪರಾರಿಯಾದ ಮೂವರು ನಕಲಿ ಫಕೀರರು – Vishwanews24

ಕಟಪಾಡಿ : ಜಿಲ್ಲೆಯ ಕಾಪು ತಾಲೂಕಿನಲ್ಲಿ ಮೂವರು ನಕಲಿ ಫಕೀರರು ಬಂದು ಮಹಿಳೆ ಮೇಲೆ ಧೂಪ ಮಿಶ್ರಿತ ಹೊಗೆಯನ್ನು ಪ್ರಯೋಗಿಸಿ ಅವರಿಂದ ಚಿನ್ನಾಭರಣವನ್ನು ಎಗರಿಸಿ ಪರಾರಿಯಾಗಿರುವ ಘಟನೆ ನಡೆದಿದೆ.

ಫಕೀರರ ವೇಷ ಧರಿಸಿ ಬಂದ ಮೂವರು ಕಳ್ಳರು, ನಗದನ್ನು ಎಗರಿಸಿ ಪರಾರಿಯಾಗಿದ್ದಾರೆ. ಕಟಪಾಡಿ ಏಣಗುಡ್ಡೆ ಗ್ರಾಮದ ಮುಸ್ಲಿಂ ಸಮುದಾಯದ ಮನೆಯೊಂದಕ್ಕೆ ಆಗಮಿಸಿದ ಮೂವರು, ಸುತ್ತಮುತ್ತಲ ಮನೆಗಳಿಗೆ ಭೇಟಿ ನೀಡಿದರು. ಮನೆಯೊಂದಕ್ಕೆ ತೆರಳಿದ ಮೂರು ಮಂದಿ ನಕಲಿ ಫಕೀರ ವೇಷಧಾರಿಗಳು ಮನೆಯ ಸುತ್ತಲೂ ಓಡಾಡಿ ತಮ್ಮ ಹಾಡಿನ ಮೂಲಕ ಮನೆ ಮಂದಿ ಹೊರಬರುವಂತೆ ಮಾಡಿದ್ದಾರೆ.

ಹೊರ ಬಂದ ಮನೆಯ ಮಹಿಳೆಯ ಮೇಲೆ ಬೂದಿ ಮಿಶ್ರಿತ ಹೊಗೆಯನ್ನು ಪ್ರಯೋಗಿಸಿದ್ದಾರೆ. ಈ ಸಂದರ್ಭ ಮಹಿಳೆ ತನ್ನ ಮೈಮೇಲಿನ ಚಿನ್ನಾಭರಣ ಮತ್ತು ಮನೆಯೊಳಗಿನಿಂದ ನಗದನ್ನು ತಂದು ಕೊಟ್ಟು ಫಕೀರರ ಜೋಳಿಗೆಯನ್ನು ತುಂಬಿಸಿದ್ದಾರೆ. ಮಹಿಳೆಯಿಂದ ಚಿನ್ನಾಭರಣ ಮತ್ತು ನಗದು ಪಡೆದ ಬಳಿಕ ಫಕೀರರು ಸ್ಥಳದಿಂದ ಕಾಲ್ಕಿತ್ತಿದ್ದು, ಮಹಿಳೆ ಎಚ್ಚರಗೊಂಡಾಗ ತಾನು ಮೋಸ ಹೋಗಿರುವುದು ಬೆಳಕಿಗೆ ಬಂದಿದೆ.

ವೇಷಧಾರಿ ನಕಲಿ ಫಕೀರರ ಜೋಳಿಗೆಯನ್ನು ತಾನಾಗಿಯೇ ತುಂಬಿರುವುದಾಗಿ ಮಹಿಳೆ ಮಾಹಿತಿ ನೀಡಿದ್ದಾಳೆ. ಮನೆಗೆ ಬಂದ ಫಕೀರರು ಮನೆಯಂಗಳದಲ್ಲಿ ಓಡಾಡಿದ ಮತ್ತು ಪೇಟೆಯಲ್ಲಿ ನಡೆದಾಡಿದ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಕಟಪಾಡಿ ಭಾಗದಿಂದ ಉಡುಪಿ ಕಡೆಗೆ ಮೂವರು ತೆರಳಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ.

ಆ ವೀಡಿಯೋಗಳನ್ನು ವೈರಲ್ ಮಾಡಲಾಗಿದೆ. ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕರು ಆರೋಪಿಗಳನ್ನು ಕಂಡಲ್ಲಿ ಮಾಹಿತಿ ನೀಡುವಂತೆ ಪೊಲೀಸರು ವಿನಂತಿ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದ್ದು, ಅಪರಿಚಿತರ ಬಗ್ಗೆ ಜಾಗರೂಕತೆ ವಹಿಸುವಂತೆ ಜನಜಾಗೃತಿ ಮೂಡಿಸಲಾಗುತ್ತಿದೆ.

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

12 hours ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

13 hours ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

13 hours ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

14 hours ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

14 hours ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

14 hours ago