ಕಟಪಾಡಿ : ಜಿಲ್ಲೆಯ ಕಾಪು ತಾಲೂಕಿನಲ್ಲಿ ಮೂವರು ನಕಲಿ ಫಕೀರರು ಬಂದು ಮಹಿಳೆ ಮೇಲೆ ಧೂಪ ಮಿಶ್ರಿತ ಹೊಗೆಯನ್ನು ಪ್ರಯೋಗಿಸಿ ಅವರಿಂದ ಚಿನ್ನಾಭರಣವನ್ನು ಎಗರಿಸಿ ಪರಾರಿಯಾಗಿರುವ ಘಟನೆ ನಡೆದಿದೆ.
ಫಕೀರರ ವೇಷ ಧರಿಸಿ ಬಂದ ಮೂವರು ಕಳ್ಳರು, ನಗದನ್ನು ಎಗರಿಸಿ ಪರಾರಿಯಾಗಿದ್ದಾರೆ. ಕಟಪಾಡಿ ಏಣಗುಡ್ಡೆ ಗ್ರಾಮದ ಮುಸ್ಲಿಂ ಸಮುದಾಯದ ಮನೆಯೊಂದಕ್ಕೆ ಆಗಮಿಸಿದ ಮೂವರು, ಸುತ್ತಮುತ್ತಲ ಮನೆಗಳಿಗೆ ಭೇಟಿ ನೀಡಿದರು. ಮನೆಯೊಂದಕ್ಕೆ ತೆರಳಿದ ಮೂರು ಮಂದಿ ನಕಲಿ ಫಕೀರ ವೇಷಧಾರಿಗಳು ಮನೆಯ ಸುತ್ತಲೂ ಓಡಾಡಿ ತಮ್ಮ ಹಾಡಿನ ಮೂಲಕ ಮನೆ ಮಂದಿ ಹೊರಬರುವಂತೆ ಮಾಡಿದ್ದಾರೆ.
ಹೊರ ಬಂದ ಮನೆಯ ಮಹಿಳೆಯ ಮೇಲೆ ಬೂದಿ ಮಿಶ್ರಿತ ಹೊಗೆಯನ್ನು ಪ್ರಯೋಗಿಸಿದ್ದಾರೆ. ಈ ಸಂದರ್ಭ ಮಹಿಳೆ ತನ್ನ ಮೈಮೇಲಿನ ಚಿನ್ನಾಭರಣ ಮತ್ತು ಮನೆಯೊಳಗಿನಿಂದ ನಗದನ್ನು ತಂದು ಕೊಟ್ಟು ಫಕೀರರ ಜೋಳಿಗೆಯನ್ನು ತುಂಬಿಸಿದ್ದಾರೆ. ಮಹಿಳೆಯಿಂದ ಚಿನ್ನಾಭರಣ ಮತ್ತು ನಗದು ಪಡೆದ ಬಳಿಕ ಫಕೀರರು ಸ್ಥಳದಿಂದ ಕಾಲ್ಕಿತ್ತಿದ್ದು, ಮಹಿಳೆ ಎಚ್ಚರಗೊಂಡಾಗ ತಾನು ಮೋಸ ಹೋಗಿರುವುದು ಬೆಳಕಿಗೆ ಬಂದಿದೆ.
ವೇಷಧಾರಿ ನಕಲಿ ಫಕೀರರ ಜೋಳಿಗೆಯನ್ನು ತಾನಾಗಿಯೇ ತುಂಬಿರುವುದಾಗಿ ಮಹಿಳೆ ಮಾಹಿತಿ ನೀಡಿದ್ದಾಳೆ. ಮನೆಗೆ ಬಂದ ಫಕೀರರು ಮನೆಯಂಗಳದಲ್ಲಿ ಓಡಾಡಿದ ಮತ್ತು ಪೇಟೆಯಲ್ಲಿ ನಡೆದಾಡಿದ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಕಟಪಾಡಿ ಭಾಗದಿಂದ ಉಡುಪಿ ಕಡೆಗೆ ಮೂವರು ತೆರಳಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ.
ಆ ವೀಡಿಯೋಗಳನ್ನು ವೈರಲ್ ಮಾಡಲಾಗಿದೆ. ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕರು ಆರೋಪಿಗಳನ್ನು ಕಂಡಲ್ಲಿ ಮಾಹಿತಿ ನೀಡುವಂತೆ ಪೊಲೀಸರು ವಿನಂತಿ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದ್ದು, ಅಪರಿಚಿತರ ಬಗ್ಗೆ ಜಾಗರೂಕತೆ ವಹಿಸುವಂತೆ ಜನಜಾಗೃತಿ ಮೂಡಿಸಲಾಗುತ್ತಿದೆ.
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…