ಕಟಪಾಡಿ : ರಸ್ತೆಬದಿ ನಿಲ್ಲಿಸಿದ್ದ ದ್ವಿಚಕ್ರವಾಹನಕ್ಕೆ ಕಾರು ಡಿಕ್ಕಿ : ಪಾದಾಚಾರಿ ಗಂಭೀರ -Vishwanews24

Featured, ಉಡುಪಿ

ಕಟಪಾಡಿ : ಕಟಪಾಡಿ ರಸ್ತೆಬದಿ ನಿಲ್ಲಿಸಿದ್ದ ದ್ವಿಚಕ್ರವಾಹನ ಮತ್ತು ಪಾದಾಚಾರಿಗೆ ಕಾರೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದ ಘಟನೆ ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಡಿಕ್ಕಿ ಹೊಡೆದ ಪರಿಣಾಮ ಕಾರು ಹಾಗೂ ಹಲವು ದ್ವಿಚಕ್ರ ವಾಹನಗಳು ಜಖಂಗೊಂಡಿವೆ.ಕಾರು ಓರ್ವ ಪಾದಾಚಾರಿಗೂ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಪಾದಾಚಾರಿಯನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಕಟಪಾಡಿ ಉಪಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.