ಉಡುಪಿ

ಕಟಪಾಡಿ ವಿಶ್ವನಾಥ ಕ್ಷೇತ್ರದಲ್ಲಿ ಮೋದಿ ಅನ್ನ ಸಂತರ್ಪಣೆ, ಇದರ ಹಿಂದಿನ ಉದ್ದೇಶ ಏನ್ ಗೊತ್ತಾ…?

ಉಡುಪಿ : ಕಟಪಾಡಿ ವಿಶ್ವನಾಥ ಕ್ಷೇತ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ದಾಮೋದರ ಮೋದಿ ಹೆಸರಿನಲ್ಲಿ ಬರುವ ಸೋಮವಾರ  ಅನ್ನಸಂತರ್ಪಣೆ ಸೇವೆ ಬುಕ್‌ ಆಗಿದೆ! ಜೂನ್‌ 25ರಂದು ಮೋದೀಜಿಯವರ ಹೆಸರಿನಲ್ಲಿ ನಿತ್ಯ ಪೂಜೆ ಅನ್ನಸಂತರ್ಪಣೆ ನಡೆಯಲಿದೆ. 

ವಾಸ್ತವದಲ್ಲಿ ಮೋದಿ ಸ್ವತಃ ಈ ಸೇವೆ ನೀಡುತ್ತಿಲ್ಲ. ಕಟಪಾಡಿಯ ಕೆಲವು ಮಂದಿ ಮೋದಿಯವರ ಅಭಿಮಾನಿಗಳು ಮತ್ತು ಸಂಘ ಪರಿವಾರಗಳ ಕಾರ್ಯಕರ್ತರು ಪ್ರಧಾನಿಯ ಹೆಸರಿನಲ್ಲಿ ಈ ಸೇವೆ ಬುಕ್‌ ಮಾಡಿದ್ದಾರೆ. ಜೂನ್‌ 25ರಂದು ಪ್ರಧಾನಿಯವರ ಜನ್ಮ ನಕ್ಷ ತ್ರ ಬರುವುದರಿಂದ ಅವರಿಗೆ ಯಶಸ್ಸು ಶ್ರೇಯೋಭಿವೃದ್ಧಿ ಕೋರಿ ಈ ಸೇವೆ ನೀಡಲಾಗುತ್ತಿದೆ. ಮೋದಿಯವರ ಜನ್ಮ ನಕ್ಷ ತ್ರವಾದ ಅನುರಾಧಾ ನಕ್ಷ ತ್ರ ಸೋಮವಾರದಂದು ಬರುತ್ತಿರುವುದರಿಂದ ಅಂದು ಇಲ್ಲಿನ ಶಿವಾಲಯದಲ್ಲಿ ಸೇವೆ ನೀಡಲು ಅಭಿಮಾನಿಗಳು ಮುಂದಾಗಿದ್ದಾರೆ. 

ಏನಿದು ಅನ್ನಸಂತರ್ಪಣೆ ಸೇವೆ?: ಉಡುಪಿ ಜಿಲ್ಲೆಯ ಬಿಲ್ಲವ ಸಮಾಜ ಬಾಂಧವರ ಪ್ರಮುಖ ಶ್ರದ್ಧಾ ಕೇಂದ್ರವಾದ ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಮೂರು ವರ್ಷಗಳ ಹಿಂದೆ ಶ್ರೀ ನಾರಾಯಣ ಗುರುಗಳ ಜಯಂತ್ಯೋತ್ಸವದ ಸಂದರ್ಭ ಆಡಳಿತ ಮಂಡಳಿಯು ಚಲನಚಿತ್ರ ನಟ, ನಿರ್ದೇಶಕ, ರಾಜಕೀಯ ನೇತಾರ ರಾಜಶೇಖರ್‌ ಕೋಟ್ಯಾನ್‌ ಅವರ ಮುತುವರ್ಜಿಯಲ್ಲಿ ಪ್ರತಿ ಸೋಮವಾರ ಅನ್ನಸಂತರ್ಪಣೆಯನ್ನು ಆರಂಭಿಸಿತ್ತು. ಭಕ್ತಾದಿಗಳಿಗೂ ತಮ್ಮ ಹೆಸರಿನಲ್ಲಿ ಈ ಸೇವೆ ಸಲ್ಲಿಸುವ ಅವಕಾಶ ಕಲ್ಪಿಸಲಾಗಿತ್ತು. ಪ್ರತಿ ಸೇವೆಗೆ 5000 ರೂ. ನೀಡಿದರೆ ಆ ದಿನದ ಅನ್ನ ಸಂತರ್ಪಣೆ ಸೇವೆ ಹಾಗೂ ಪೂಜೆಯನ್ನು ಭಕ್ತಾದಿಗಳ ಹೆಸರಿನಲ್ಲಿ ನಡೆಸಿಕೊಂಡು ಬರಲಾಗುತ್ತಿದೆ. ಸೇವಾದಾರರು ಇಲ್ಲದ ದಿನದ ಸ್ವತಃ ರಾಜಶೇಖರ್‌ ಕೋಟ್ಯಾನ್‌ ಅವರೇ ಆ ವೆಚ್ಚ ಭರಿಸುತ್ತಾರೆ. ದಿನದಲ್ಲಿ ಒಂದಕ್ಕಿಂತ ಹೆಚ್ಚು ಮಂದಿ ಸೇವೆ ಸಲ್ಲಿಸಲು ಅವಕಾಶವಿದೆ. 

5000 ರೂ.ನ ಸೇವೆಯಲ್ಲಿ 300 ಜನರಿಗೆ ಅನ್ನ, ಸಾಂಬಾರು,ಹುಳಿ, ಪಲ್ಯ, ಉಪ್ಪಿನಕಾಯಿ ಮತ್ತು ಪಾಯಸದ ಊಟ ಬಡಿಸಲಾಗುತ್ತದೆ. ಒಂದು ವೇಳೆ ಸೇವಾದಾರರು ಹೆಚ್ಚುವರಿ ಸಿಹಿ ನೀಡ ಬಯಸಿದರೆ ಅದಕ್ಕೂ ಅವಕಾಶವಿದೆ. 

“ಇದು ಮೋದಿ ಅಭಿಮಾನಿಗಳ ಕಾರ್ಯಕ್ರಮ. ಬಿಜೆಪಿ ಪಕ್ಷ ಕ್ಕೂ ಇದಕ್ಕೂ ಸಂಬಂಧವಿಲ್ಲ. ಈ ಬಾರಿ ಪ್ರಧಾನಿಯವರ ಜನ್ಮನಕ್ಷ ತ್ರ ಸೋಮವಾರದಂದು ಬರುತ್ತಿರುವುದರಿಂದ ಆ ದಿನವೇ ಸೇವೆ ನೀಡಲು ನಿರ್ದರಿಸಿದ್ದೇವೆ. ಮುಂದಿನ ದಿನಗಳಲ್ಲಿ ಅನುರಾಧಾ ನಕ್ಷ ತ್ರ ಬರುವ ದಿನ ಬೇರೆ ಬೇರೆ ಕ್ಷೇತ್ರಗಳಲ್ಲಿ ಪ್ರಧಾನಿಯ ಹೆಸರಿನಲ್ಲಿ ಪೂಜೆ ನೆರವೇರಿಸಲು ನಿರ್ದರಿಸಲಾಗಿದೆ. ಈ ಯೋಜನೆ ಈ ಕ್ಷೇತ್ರದಿಂದಲೇ ಶುಭಾರಂಭಗೊಳ್ಳಲಿದೆ.”
ಮೋದಿ ಅಭಿಮಾನಿ
Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

5 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

11 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

11 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

13 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

13 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

13 hours ago