ಉಡುಪಿ : ಕಟಪಾಡಿ ವಿಶ್ವನಾಥ ಕ್ಷೇತ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ದಾಮೋದರ ಮೋದಿ ಹೆಸರಿನಲ್ಲಿ ಬರುವ ಸೋಮವಾರ ಅನ್ನಸಂತರ್ಪಣೆ ಸೇವೆ ಬುಕ್ ಆಗಿದೆ! ಜೂನ್ 25ರಂದು ಮೋದೀಜಿಯವರ ಹೆಸರಿನಲ್ಲಿ ನಿತ್ಯ ಪೂಜೆ ಅನ್ನಸಂತರ್ಪಣೆ ನಡೆಯಲಿದೆ.
ವಾಸ್ತವದಲ್ಲಿ ಮೋದಿ ಸ್ವತಃ ಈ ಸೇವೆ ನೀಡುತ್ತಿಲ್ಲ. ಕಟಪಾಡಿಯ ಕೆಲವು ಮಂದಿ ಮೋದಿಯವರ ಅಭಿಮಾನಿಗಳು ಮತ್ತು ಸಂಘ ಪರಿವಾರಗಳ ಕಾರ್ಯಕರ್ತರು ಪ್ರಧಾನಿಯ ಹೆಸರಿನಲ್ಲಿ ಈ ಸೇವೆ ಬುಕ್ ಮಾಡಿದ್ದಾರೆ. ಜೂನ್ 25ರಂದು ಪ್ರಧಾನಿಯವರ ಜನ್ಮ ನಕ್ಷ ತ್ರ ಬರುವುದರಿಂದ ಅವರಿಗೆ ಯಶಸ್ಸು ಶ್ರೇಯೋಭಿವೃದ್ಧಿ ಕೋರಿ ಈ ಸೇವೆ ನೀಡಲಾಗುತ್ತಿದೆ. ಮೋದಿಯವರ ಜನ್ಮ ನಕ್ಷ ತ್ರವಾದ ಅನುರಾಧಾ ನಕ್ಷ ತ್ರ ಸೋಮವಾರದಂದು ಬರುತ್ತಿರುವುದರಿಂದ ಅಂದು ಇಲ್ಲಿನ ಶಿವಾಲಯದಲ್ಲಿ ಸೇವೆ ನೀಡಲು ಅಭಿಮಾನಿಗಳು ಮುಂದಾಗಿದ್ದಾರೆ.
ಏನಿದು ಅನ್ನಸಂತರ್ಪಣೆ ಸೇವೆ?: ಉಡುಪಿ ಜಿಲ್ಲೆಯ ಬಿಲ್ಲವ ಸಮಾಜ ಬಾಂಧವರ ಪ್ರಮುಖ ಶ್ರದ್ಧಾ ಕೇಂದ್ರವಾದ ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಮೂರು ವರ್ಷಗಳ ಹಿಂದೆ ಶ್ರೀ ನಾರಾಯಣ ಗುರುಗಳ ಜಯಂತ್ಯೋತ್ಸವದ ಸಂದರ್ಭ ಆಡಳಿತ ಮಂಡಳಿಯು ಚಲನಚಿತ್ರ ನಟ, ನಿರ್ದೇಶಕ, ರಾಜಕೀಯ ನೇತಾರ ರಾಜಶೇಖರ್ ಕೋಟ್ಯಾನ್ ಅವರ ಮುತುವರ್ಜಿಯಲ್ಲಿ ಪ್ರತಿ ಸೋಮವಾರ ಅನ್ನಸಂತರ್ಪಣೆಯನ್ನು ಆರಂಭಿಸಿತ್ತು. ಭಕ್ತಾದಿಗಳಿಗೂ ತಮ್ಮ ಹೆಸರಿನಲ್ಲಿ ಈ ಸೇವೆ ಸಲ್ಲಿಸುವ ಅವಕಾಶ ಕಲ್ಪಿಸಲಾಗಿತ್ತು. ಪ್ರತಿ ಸೇವೆಗೆ 5000 ರೂ. ನೀಡಿದರೆ ಆ ದಿನದ ಅನ್ನ ಸಂತರ್ಪಣೆ ಸೇವೆ ಹಾಗೂ ಪೂಜೆಯನ್ನು ಭಕ್ತಾದಿಗಳ ಹೆಸರಿನಲ್ಲಿ ನಡೆಸಿಕೊಂಡು ಬರಲಾಗುತ್ತಿದೆ. ಸೇವಾದಾರರು ಇಲ್ಲದ ದಿನದ ಸ್ವತಃ ರಾಜಶೇಖರ್ ಕೋಟ್ಯಾನ್ ಅವರೇ ಆ ವೆಚ್ಚ ಭರಿಸುತ್ತಾರೆ. ದಿನದಲ್ಲಿ ಒಂದಕ್ಕಿಂತ ಹೆಚ್ಚು ಮಂದಿ ಸೇವೆ ಸಲ್ಲಿಸಲು ಅವಕಾಶವಿದೆ.
5000 ರೂ.ನ ಸೇವೆಯಲ್ಲಿ 300 ಜನರಿಗೆ ಅನ್ನ, ಸಾಂಬಾರು,ಹುಳಿ, ಪಲ್ಯ, ಉಪ್ಪಿನಕಾಯಿ ಮತ್ತು ಪಾಯಸದ ಊಟ ಬಡಿಸಲಾಗುತ್ತದೆ. ಒಂದು ವೇಳೆ ಸೇವಾದಾರರು ಹೆಚ್ಚುವರಿ ಸಿಹಿ ನೀಡ ಬಯಸಿದರೆ ಅದಕ್ಕೂ ಅವಕಾಶವಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…