Featured

ಕಟಪಾಡಿ ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿ : ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ – vishwanews24

ಕಟಪಾಡಿ ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿ : ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ

ಉಡುಪಿ :  ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿಯನ್ನು ಸುಸೂತ್ರವಾಗಿ ನಡೆಸುವ ಸಲುವಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221 (ಎ)(2) & (5) ರನ್ವಯ ರಾ.ಹೆ. 66 ರ ಕಟಪಾಡಿ ಜಂಕ್ಷನ್‌ನಲ್ಲಿ ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿಯು ಪೂರ್ಣಗೊಳ್ಳುವವರೆಗೆ ಸದ್ರಿ ರಾಷ್ಟ್ರೀಯ ಹೆದ್ದಾರಿಯ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಈ ಕೆಳಕಂಡoತೆ ಪರ್ಯಾಯ ಮಾರ್ಗದ ರಸ್ತೆಯ ಮೂಲಕ ವಾಹನ ಸಂಚರಿಸಲು ವ್ಯವಸ್ಥೆ ಮಾಡಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.

ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಾಗುವ ಘನ ಹಾಗೂ ಇತರೆ ಸರಕು ಸಾಗಾಟ ವಾಹನಗಳು ಕಾಮಗಾರಿ ನಡೆಯುತ್ತಿರುವ ಪ್ರದೇಶದಲ್ಲಿ ನಿಗಧಿಪಡಿಸಿದ ಟ್ರಾö್ಯಕ್‌ನಲ್ಲಿ ಸಾಗಬೇಕು. ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಸಾಗುವ ಘನ ಹಾಗೂ ಇತರ ಸರಕು ಸಾಗಾಟ ವಾಹನಗಳು ಕಾಮಗಾರಿ ನಡೆಯುತ್ತಿರುವ ಪ್ರದೇಶದಲ್ಲಿ ನಿಗಧಿಪಡಿಸಿದ ಟ್ರಾö್ಯಕ್‌ನಲ್ಲಿ ಸಾಗಬೇಕು.

ಮಂಗಳೂರಿನಿoದ ಉಡುಪಿ ಕಡೆಗೆ ಸಾಗುವ ಎಕ್ಸ್ಪ್ರೆಸ್ ಹಾಗೂ ಶಟಲ್ ಬಸ್‌ಗಳು, ಇತರ ಖಾಸಗಿ ವಾಹನಗಳು ಮತ್ತು ಸಾರ್ವಜನಿಕ ವಾಹನಗಳು ಕಲ್ಲಾಪು ಮೂಲಕ ಕಟಪಾಡಿ ಪೇಟೆಗೆ ಬಂದು ಜನರನ್ನು ಇಳಿಸಿ/ ಹತ್ತಿಸಿಕೊಂಡು ಫಾರೆಸ್ಟ್ ಗೇಟ್ ಮೂಲಕ ರಾಷ್ಟ್ರೀಯ ಹೆದ್ದಾರಿ 66 ನ್ನು ಸೇರಬೇಕು.

ಶಿರ್ವದಿಂದ ಉಡುಪಿ ಕಡೆಗೆ ಸಂಚರಿಸುವ ಘನ ವಾಹನಗಳು/ ಟ್ರಕ್‌ಗಳು ಮೂಡುಬೆಳ್ಳೆ-ದೆಂದೂರುಕಟ್ಟೆ-ಅಲೆವೂರು ಮಾರ್ಗವಾಗಿ ಉಡುಪಿಯನ್ನು ಸೇರಿಕೊಳ್ಳಬೇಕು.

ಶಿರ್ವದಿಂದ ಉಡುಪಿ ಕಡೆಗೆ ಸಂಚರಿಸುವ ದ್ವಿಚಕ್ರ, ತ್ರಿಚಕ್ರ ಮತ್ತು ಲಘು ವಾಹನಗಳು ಉಡುಪಿ-ಮಂಗಳೂರು ಸರ್ವೀಸ್ ರಸ್ತೆಯಲ್ಲಿ ಸಾಗಿ ಮುಂದೆ ರಾಷ್ಟ್ರೀಯ ಹೆದ್ದಾರಿಯ ಮಂಗಳೂರು-ಉಡುಪಿ ರಸ್ತೆ ಸೇರಲು ತೆರೆಯುವ ಮೀಡಿಯನ್‌ನಲ್ಲಿ ಹೆದ್ದಾರಿ ಪ್ರವೇಶಿಸಿ, ಉಡುಪಿಗೆ ತೆರಳಬೇಕು.

ಮಟ್ಟು ಕಡೆಯಿಂದ ಉಡುಪಿ ಕಡೆಗೆ ಸಾಗುವ ಲಘು ವಾಹನಗಳು ಕಟಪಾಡಿ ಹಳೇ ರಸ್ತೆ ಮೂಲಕ ಫಾರೆಸ್ಟ್ ಗೇಟ್ ಬಳಿ ತಲುಪಿ ಮಂಗಳೂರು-ಉಡುಪಿ ಹೆದ್ದಾರಿಯನ್ನು ಸೇರಿ ಉಡುಪಿ ಕಡೆಗೆ ತೆರಳಬೇಕು.

ಮಟ್ಟು ಕಡೆಯಿಂದ ಮಂಗಳೂರು ಕಡೆಗೆ ಸಾಗುವ ಲಘು ವಾಹನಗಳು ಕಟಪಾಡಿ ಹಳೇ ರಸ್ತೆ ಮೂಲಕವಾಗಿ ಫಾರೆಸ್ಟ್ ಗೇಟ್ ಬಳಿ ತಲುಪಿ ಇಲ್ಲಿ ತೆರೆದಿರುವ ಮೀಡಿಯನ್ ಮೂಲಕ ಉಡುಪಿ-ಮಂಗಳೂರು ಹೆದ್ದಾರಿ ಸರ್ವೀಸ್ ರಸ್ತೆಯನ್ನು ಸೇರಿ ಮಂಗಳೂರು ಕಡೆಗೆ ತೆರಳಬೇಕು.

ಮಂಗಳೂರು ವಿಮಾನ ನಿಲ್ದಾಣಕ್ಕೆ ತುರ್ತು ಹೋಗುವ ವಾಹನಗಳು ಕಟಪಾಡಿ ಮಾರ್ಗವನ್ನು ಹೊರತುಪಡಿಸಿ ಬೇರೆ ರಸ್ತೆ/ ಮಾರ್ಗದಲ್ಲಿ ಸಾಗುವುದಕ್ಕೆ ಪ್ರಾಶಸ್ತö್ಯ ನೀಡುವುದು. ಕಾಮಗಾರಿ ನಡೆಯುವ ಸ್ಥಳದಿಂದ ಮಂಗಳೂರು ರಸ್ತೆ, ಉಡುಪಿ ರಸ್ತೆ, ಮಟ್ಟು ರಸ್ತೆ ಹಾಗೂ ಶಿರ್ವಾ ರಸ್ತೆಯಲ್ಲಿ 100 ಮೀ. ದೂರದವರೆಗೆ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

 

 

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

11 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

11 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

11 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

11 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

11 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

12 hours ago