ಉಡುಪಿ : ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿಯನ್ನು ಸುಸೂತ್ರವಾಗಿ ನಡೆಸುವ ಸಲುವಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221 (ಎ)(2) & (5) ರನ್ವಯ ರಾ.ಹೆ. 66 ರ ಕಟಪಾಡಿ ಜಂಕ್ಷನ್ನಲ್ಲಿ ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿಯು ಪೂರ್ಣಗೊಳ್ಳುವವರೆಗೆ ಸದ್ರಿ ರಾಷ್ಟ್ರೀಯ ಹೆದ್ದಾರಿಯ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಈ ಕೆಳಕಂಡoತೆ ಪರ್ಯಾಯ ಮಾರ್ಗದ ರಸ್ತೆಯ ಮೂಲಕ ವಾಹನ ಸಂಚರಿಸಲು ವ್ಯವಸ್ಥೆ ಮಾಡಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.
ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಾಗುವ ಘನ ಹಾಗೂ ಇತರೆ ಸರಕು ಸಾಗಾಟ ವಾಹನಗಳು ಕಾಮಗಾರಿ ನಡೆಯುತ್ತಿರುವ ಪ್ರದೇಶದಲ್ಲಿ ನಿಗಧಿಪಡಿಸಿದ ಟ್ರಾö್ಯಕ್ನಲ್ಲಿ ಸಾಗಬೇಕು. ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಸಾಗುವ ಘನ ಹಾಗೂ ಇತರ ಸರಕು ಸಾಗಾಟ ವಾಹನಗಳು ಕಾಮಗಾರಿ ನಡೆಯುತ್ತಿರುವ ಪ್ರದೇಶದಲ್ಲಿ ನಿಗಧಿಪಡಿಸಿದ ಟ್ರಾö್ಯಕ್ನಲ್ಲಿ ಸಾಗಬೇಕು.
ಮಂಗಳೂರಿನಿoದ ಉಡುಪಿ ಕಡೆಗೆ ಸಾಗುವ ಎಕ್ಸ್ಪ್ರೆಸ್ ಹಾಗೂ ಶಟಲ್ ಬಸ್ಗಳು, ಇತರ ಖಾಸಗಿ ವಾಹನಗಳು ಮತ್ತು ಸಾರ್ವಜನಿಕ ವಾಹನಗಳು ಕಲ್ಲಾಪು ಮೂಲಕ ಕಟಪಾಡಿ ಪೇಟೆಗೆ ಬಂದು ಜನರನ್ನು ಇಳಿಸಿ/ ಹತ್ತಿಸಿಕೊಂಡು ಫಾರೆಸ್ಟ್ ಗೇಟ್ ಮೂಲಕ ರಾಷ್ಟ್ರೀಯ ಹೆದ್ದಾರಿ 66 ನ್ನು ಸೇರಬೇಕು.
ಶಿರ್ವದಿಂದ ಉಡುಪಿ ಕಡೆಗೆ ಸಂಚರಿಸುವ ಘನ ವಾಹನಗಳು/ ಟ್ರಕ್ಗಳು ಮೂಡುಬೆಳ್ಳೆ-ದೆಂದೂರುಕಟ್ಟೆ-ಅಲೆವೂರು ಮಾರ್ಗವಾಗಿ ಉಡುಪಿಯನ್ನು ಸೇರಿಕೊಳ್ಳಬೇಕು.
ಶಿರ್ವದಿಂದ ಉಡುಪಿ ಕಡೆಗೆ ಸಂಚರಿಸುವ ದ್ವಿಚಕ್ರ, ತ್ರಿಚಕ್ರ ಮತ್ತು ಲಘು ವಾಹನಗಳು ಉಡುಪಿ-ಮಂಗಳೂರು ಸರ್ವೀಸ್ ರಸ್ತೆಯಲ್ಲಿ ಸಾಗಿ ಮುಂದೆ ರಾಷ್ಟ್ರೀಯ ಹೆದ್ದಾರಿಯ ಮಂಗಳೂರು-ಉಡುಪಿ ರಸ್ತೆ ಸೇರಲು ತೆರೆಯುವ ಮೀಡಿಯನ್ನಲ್ಲಿ ಹೆದ್ದಾರಿ ಪ್ರವೇಶಿಸಿ, ಉಡುಪಿಗೆ ತೆರಳಬೇಕು.
ಮಟ್ಟು ಕಡೆಯಿಂದ ಉಡುಪಿ ಕಡೆಗೆ ಸಾಗುವ ಲಘು ವಾಹನಗಳು ಕಟಪಾಡಿ ಹಳೇ ರಸ್ತೆ ಮೂಲಕ ಫಾರೆಸ್ಟ್ ಗೇಟ್ ಬಳಿ ತಲುಪಿ ಮಂಗಳೂರು-ಉಡುಪಿ ಹೆದ್ದಾರಿಯನ್ನು ಸೇರಿ ಉಡುಪಿ ಕಡೆಗೆ ತೆರಳಬೇಕು.
ಮಟ್ಟು ಕಡೆಯಿಂದ ಮಂಗಳೂರು ಕಡೆಗೆ ಸಾಗುವ ಲಘು ವಾಹನಗಳು ಕಟಪಾಡಿ ಹಳೇ ರಸ್ತೆ ಮೂಲಕವಾಗಿ ಫಾರೆಸ್ಟ್ ಗೇಟ್ ಬಳಿ ತಲುಪಿ ಇಲ್ಲಿ ತೆರೆದಿರುವ ಮೀಡಿಯನ್ ಮೂಲಕ ಉಡುಪಿ-ಮಂಗಳೂರು ಹೆದ್ದಾರಿ ಸರ್ವೀಸ್ ರಸ್ತೆಯನ್ನು ಸೇರಿ ಮಂಗಳೂರು ಕಡೆಗೆ ತೆರಳಬೇಕು.
ಮಂಗಳೂರು ವಿಮಾನ ನಿಲ್ದಾಣಕ್ಕೆ ತುರ್ತು ಹೋಗುವ ವಾಹನಗಳು ಕಟಪಾಡಿ ಮಾರ್ಗವನ್ನು ಹೊರತುಪಡಿಸಿ ಬೇರೆ ರಸ್ತೆ/ ಮಾರ್ಗದಲ್ಲಿ ಸಾಗುವುದಕ್ಕೆ ಪ್ರಾಶಸ್ತö್ಯ ನೀಡುವುದು. ಕಾಮಗಾರಿ ನಡೆಯುವ ಸ್ಥಳದಿಂದ ಮಂಗಳೂರು ರಸ್ತೆ, ಉಡುಪಿ ರಸ್ತೆ, ಮಟ್ಟು ರಸ್ತೆ ಹಾಗೂ ಶಿರ್ವಾ ರಸ್ತೆಯಲ್ಲಿ 100 ಮೀ. ದೂರದವರೆಗೆ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…