ಕಟಪಾಡಿ: ಸಮಾಜ ಸಂಘಟಕ, ನಿವೃತ್ತ ಪ್ರೊ. ವಿ.ಕೆ. ಉದ್ಯಾವರ (66) ಹೃದಯಾಘಾತದಿಂದ ಮಾ. 20 ರ ಗುರುವಾರ ನಿಧನ ಹೊಂದಿದರು.
ಉಡುಪಿ ಬೋರ್ಡ್ ಹೈಸ್ಕೂಲ್, ಗ್ರೀನ್ ಪಾರ್ಕ್ ಕಾಲೇಜ್, ಕಾಪು ವಿದ್ಯಾನಿಕೇತನ, ತ್ರಿಷಾ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಆಡಳಿತಾಧಿಕಾರಿಯಾಗಿ, ಪ್ರಾಂಶುಪಾಲರಾಗಿ ಸೇವೆಯನ್ನು ಸಲ್ಲಿಸಿದ್ದರು.
ಮೂಲತಃ ಉದ್ಯಾವರ ಅಂಕುದ್ರು ನಿವಾಸಿ, ಪ್ರಸ್ತುತ ಮಣಿಪಾಲದಲ್ಲಿ ವಾಸ್ತವ್ಯ ಹೊಂದಿದ್ದರು.
ಉದ್ಯಾವರ ಯುವಕ ಮಂಡಲ, ಉದ್ಯಾವರ ಸಾರ್ವಜನಿಕ ಗಣೇಶೋತ್ಸವ ಸಹಿತ ಹತ್ತು ಹಲವು ಸಂಘಟನೆಗಳನ್ನು ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಮಾಜಿ ಶಾಸಕ ಯು.ಆರ್. ಸಭಾಪತಿ ಅವರ ಆಪ್ತರಾಗಿದ್ದು, ಉತ್ತಮ ಮಾರ್ಗದರ್ಶಕರಾಗಿದ್ದು, ನಾಟಕ ರಂಗ ನಿರ್ದೇಶಕರಾಗಿ, ಕಲಾವಿದರಾಗಿ, ಸರಳತೆ, ಸಜ್ಜನಿಕೆಯಿಂದ ಜನಾನುರಾಗಿಯಾಗಿದ್ದರು. ಕಾಲೇಜು ವಿದ್ಯಾರ್ಥಿಗಳಿಗೆ ರಾಷ್ಟ್ರಭಕ್ತಿ, ಕೃಷಿ ಪ್ರೇಮ, ಸಹಿತ ಹಲವು ಸಮಾಜಮುಖಿ ಕಾರ್ಯಕ್ರಮವನ್ನು ನಡೆಸುವ ಮೂಲಕ ಜನಮನ್ನಣೆ ಗಳಿಸಿದ್ದರು.
ಸಾಮಾಜಿಕ ಕಾರ್ಯಕರ್ತ, ಉತ್ತಮ ವಾಗ್ಮಿ, ಸಮಾಜಮುಖಿ ಚಿಂತಕರಾಗಿದ್ದ ಮೃತರು ಪತ್ನಿ, ಓರ್ವ ಪುತ್ರ, ಪುತ್ರಿ, ಅಪಾರ ಸಂಖ್ಯೆಯ ವಿದ್ಯಾರ್ಥಿ ಬಳಗ, ಬಂಧು- ಮಿತ್ರರನ್ನು ಅಗಲಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…