Featured

ಕಟಪಾಡಿ ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಚರ್ಚ್‌‌ನ ಅಮೃತ ಮಹೋತ್ಸವ ; ಅದ್ದೂರಿ ಮೆರವಣಿಗೆಯಲ್ಲಿ ಹೊರೆ ಕಾಣಿಕೆ ಸಮರ್ಪಣೆ – vishwanews24

ಕಟಪಾಡಿ ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಚರ್ಚ್‌‌ನ ಅಮೃತ ಮಹೋತ್ಸವ ; ಅದ್ದೂರಿ ಮೆರವಣಿಗೆಯಲ್ಲಿ ಹೊರೆ ಕಾಣಿಕೆ ಸಮರ್ಪಣೆ

ಉಡುಪಿ: ಕಟಪಾಡಿ ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಚರ್ಚ್ ಇದರ ಅಮೃತಮಹೋತ್ಸವ ಆಚರಣೆಯ ಪ್ರಯುಕ್ತ ಪೂರ್ವಭಾವಿಯಾಗಿ ಶುಕ್ರವಾರ ಸಂಜೆ ಸರ್ವಧರ್ಮಿಯರ ಸಹಭಾಗಿತ್ವದಲ್ಲಿ ಹೊರೆಕಾಣಿಕೆ ಮೆರವಣಿಗೆ ಜರುಗಿತು.

ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಬಳಿಯಿಂದ ಹೊರಟು ಕಟಪಾಡಿ ಚರ್ಚ್ ವರೆಗೆ ನಡೆದ ಅದ್ದೂರಿ ಮೆರವಣಿಗೆ ಯಲ್ಲಿ ಹಸಿರು ಹೊರೆ ಕಾಣಿಕೆಯನ್ನು ಬ್ಯಾಂಡ್, ಚಂಡೆ ವಾದ್ಯಗಳೊಂದಿಗೆ ಶೋಭಾಯಾತ್ರೆಯಲ್ಲಿ ತರಲಾಯಿತು.

ಹಸಿರು ಹೊರೆಕಾಣಿಕೆ ಮೆರವಣಿಗೆಗೆ ಸಮಾಜಸೇವಕ ರವಿ ಕಟಪಾಡಿ ಚಾಲನೆ ನೀಡಿ ಮಾತನಾಡಿ ಸಮಾಜ ಸೇವೆಯನ್ನು ಮಾಡಿಕೊಂಡು ಬಂದಿರುವ ತನಗೆ ನನ್ನ ಊರಿನಲ್ಲಿ ಈ ಅವಕಾಶ ನೀಡಿರುವುದು ನನ್ನ ಭಾಗ್ಯ. ಇರುವ ಒಂದು ಜೀವನವನ್ನು ಸಮಾಜದಲ್ಲಿನ ನೊಂದವರ ಕಣ್ಣೀರು ಒರೆಸುವ ಕೆಲಸ ಮಾಡುವಾಗ ಸಿಗುವ ಸಂತೃಪ್ತಿಗೆ ಬೆಲೆ ಕಟ್ಟಲಾಗದು. ನಾವೆಲ್ಲರೂ ಒಂದೇ ತಾಯಿಯ ಮಕ್ಕಳು ಎಂಬ ಭಾವನೆಯೊಂದಿಗೆ ಬದುಕಿದಾಗ ಜೀವನ ಸಾರ್ಥಕವಾಗುತ್ತದೆ ಎಂದರು.

ಹೊರೆಕಾಣಿಕೆ ಮೆರವಣಿಗೆಯಲ್ಲಿ ಉಡುಪಿ ವಲಯದ ವಿವಿಧ ಚರ್ಚುಗಳು, ಕಟಪಾಡಿ ವಿಶ್ವನಾಥ ಕ್ಷೇತ್ರ, ಲಯನ್ಸ್ ಕ್ಲಬ್, ಮಣಿಪುರ ಸಿಎಸ್ಐ ಚರ್ಚು, ಕಟಪಾಡಿ ಚರ್ಚಿನ ವಿವಿಧ ವಾಳೆಗಳು, ನವೋದಯ ಸ್ವಸಹಾಯ ಸಂಘದ ಸದಸ್ಯರು ಹಸಿರು ಹೊರೆಕಾಣಿಕೆಯನ್ನು ಸಮರ್ಪಿಸಿದರು. ಹೊರೆಕಾಣಿಕೆ ಸಮರ್ಪಿಸಿದ ಚರ್ಚುಗಳು ಹಾಗೂ ಸಂಘಟನೆಯ ಸದಸ್ಯರನ್ನು ಚರ್ಚಿನಲ್ಲಿ ಗೌರವಿಸಲಾಯಿತು.

ಈ ವೇಳೆ ಉಡುಪಿ ವಲಯ ಪ್ರಧಾನ ಧರ್ಮಗುರು ವಂ|ಚಾರ್ಲ್ಸ್ ಮಿನೇಜಸ್, ಕಟಪಾಡಿ ಚರ್ಚಿನ ಧರ್ಮಗುರು ವಂ|ರಾಜೇಶ್ ಪಸನ್ನಾ, ಕಟಪಾಡಿ ಹೋಲಿಕ್ರಾಸ್ ಸ್ಟೂಡೆಂಟ್ ಹೋಮ್ ಇದರ ನಿರ್ದೇಶಕರಾದ ವಂ|ರೋನ್ಸನ್ ಡಿಸೋಜಾ, ಮೂಡುಬೆಳ್ಳೆ ಚರ್ಚಿನ ವಂ|ಜೋರ್ಜ್ ಡಿಸೋಜಾ, ಕುಂತಲನಗರ ಚರ್ಚಿನ ವಂ|ವಿಲ್ಸನ್, ಉಡುಪಿ ಚರ್ಚಿನ ವಂ|ರೋಯ್ ಲೋಬೊ, ಕಟಪಾಡಿ ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷ ಬ್ರಾಯನ್ ಕೊರೆಯಾ, ಕಾರ್ಯದರ್ಶಿ ತೆರೆಸಾ ಲೋಬೊ, 20 ಆಯೋಗಗಳ ಸಂಚಾಲಕರಾಗಿ ಲುವಿಸ್ ಡಿಸಿಲ್ವಾ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

19 minutes ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

51 minutes ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

1 hour ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

1 hour ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

1 hour ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

2 hours ago