Featured

ಕಟಪಾಡಿ ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಚರ್ಚ್‌‌ನ ಅಮೃತ ಮಹೋತ್ಸವ ; ಅದ್ದೂರಿ ಮೆರವಣಿಗೆಯಲ್ಲಿ ಹೊರೆ ಕಾಣಿಕೆ ಸಮರ್ಪಣೆ – vishwanews24

ಕಟಪಾಡಿ ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಚರ್ಚ್‌‌ನ ಅಮೃತ ಮಹೋತ್ಸವ ; ಅದ್ದೂರಿ ಮೆರವಣಿಗೆಯಲ್ಲಿ ಹೊರೆ ಕಾಣಿಕೆ ಸಮರ್ಪಣೆ

ಉಡುಪಿ: ಕಟಪಾಡಿ ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಚರ್ಚ್ ಇದರ ಅಮೃತಮಹೋತ್ಸವ ಆಚರಣೆಯ ಪ್ರಯುಕ್ತ ಪೂರ್ವಭಾವಿಯಾಗಿ ಶುಕ್ರವಾರ ಸಂಜೆ ಸರ್ವಧರ್ಮಿಯರ ಸಹಭಾಗಿತ್ವದಲ್ಲಿ ಹೊರೆಕಾಣಿಕೆ ಮೆರವಣಿಗೆ ಜರುಗಿತು.

ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಬಳಿಯಿಂದ ಹೊರಟು ಕಟಪಾಡಿ ಚರ್ಚ್ ವರೆಗೆ ನಡೆದ ಅದ್ದೂರಿ ಮೆರವಣಿಗೆ ಯಲ್ಲಿ ಹಸಿರು ಹೊರೆ ಕಾಣಿಕೆಯನ್ನು ಬ್ಯಾಂಡ್, ಚಂಡೆ ವಾದ್ಯಗಳೊಂದಿಗೆ ಶೋಭಾಯಾತ್ರೆಯಲ್ಲಿ ತರಲಾಯಿತು.

ಹಸಿರು ಹೊರೆಕಾಣಿಕೆ ಮೆರವಣಿಗೆಗೆ ಸಮಾಜಸೇವಕ ರವಿ ಕಟಪಾಡಿ ಚಾಲನೆ ನೀಡಿ ಮಾತನಾಡಿ ಸಮಾಜ ಸೇವೆಯನ್ನು ಮಾಡಿಕೊಂಡು ಬಂದಿರುವ ತನಗೆ ನನ್ನ ಊರಿನಲ್ಲಿ ಈ ಅವಕಾಶ ನೀಡಿರುವುದು ನನ್ನ ಭಾಗ್ಯ. ಇರುವ ಒಂದು ಜೀವನವನ್ನು ಸಮಾಜದಲ್ಲಿನ ನೊಂದವರ ಕಣ್ಣೀರು ಒರೆಸುವ ಕೆಲಸ ಮಾಡುವಾಗ ಸಿಗುವ ಸಂತೃಪ್ತಿಗೆ ಬೆಲೆ ಕಟ್ಟಲಾಗದು. ನಾವೆಲ್ಲರೂ ಒಂದೇ ತಾಯಿಯ ಮಕ್ಕಳು ಎಂಬ ಭಾವನೆಯೊಂದಿಗೆ ಬದುಕಿದಾಗ ಜೀವನ ಸಾರ್ಥಕವಾಗುತ್ತದೆ ಎಂದರು.

ಹೊರೆಕಾಣಿಕೆ ಮೆರವಣಿಗೆಯಲ್ಲಿ ಉಡುಪಿ ವಲಯದ ವಿವಿಧ ಚರ್ಚುಗಳು, ಕಟಪಾಡಿ ವಿಶ್ವನಾಥ ಕ್ಷೇತ್ರ, ಲಯನ್ಸ್ ಕ್ಲಬ್, ಮಣಿಪುರ ಸಿಎಸ್ಐ ಚರ್ಚು, ಕಟಪಾಡಿ ಚರ್ಚಿನ ವಿವಿಧ ವಾಳೆಗಳು, ನವೋದಯ ಸ್ವಸಹಾಯ ಸಂಘದ ಸದಸ್ಯರು ಹಸಿರು ಹೊರೆಕಾಣಿಕೆಯನ್ನು ಸಮರ್ಪಿಸಿದರು. ಹೊರೆಕಾಣಿಕೆ ಸಮರ್ಪಿಸಿದ ಚರ್ಚುಗಳು ಹಾಗೂ ಸಂಘಟನೆಯ ಸದಸ್ಯರನ್ನು ಚರ್ಚಿನಲ್ಲಿ ಗೌರವಿಸಲಾಯಿತು.

ಈ ವೇಳೆ ಉಡುಪಿ ವಲಯ ಪ್ರಧಾನ ಧರ್ಮಗುರು ವಂ|ಚಾರ್ಲ್ಸ್ ಮಿನೇಜಸ್, ಕಟಪಾಡಿ ಚರ್ಚಿನ ಧರ್ಮಗುರು ವಂ|ರಾಜೇಶ್ ಪಸನ್ನಾ, ಕಟಪಾಡಿ ಹೋಲಿಕ್ರಾಸ್ ಸ್ಟೂಡೆಂಟ್ ಹೋಮ್ ಇದರ ನಿರ್ದೇಶಕರಾದ ವಂ|ರೋನ್ಸನ್ ಡಿಸೋಜಾ, ಮೂಡುಬೆಳ್ಳೆ ಚರ್ಚಿನ ವಂ|ಜೋರ್ಜ್ ಡಿಸೋಜಾ, ಕುಂತಲನಗರ ಚರ್ಚಿನ ವಂ|ವಿಲ್ಸನ್, ಉಡುಪಿ ಚರ್ಚಿನ ವಂ|ರೋಯ್ ಲೋಬೊ, ಕಟಪಾಡಿ ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷ ಬ್ರಾಯನ್ ಕೊರೆಯಾ, ಕಾರ್ಯದರ್ಶಿ ತೆರೆಸಾ ಲೋಬೊ, 20 ಆಯೋಗಗಳ ಸಂಚಾಲಕರಾಗಿ ಲುವಿಸ್ ಡಿಸಿಲ್ವಾ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

8 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

8 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

8 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

9 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

10 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

10 hours ago