ಕಟೀಲು: ತೆಂಗಿನಕಾಯಿ ಕೀಳಲು ಏರಿದ ವ್ಯಕ್ತಿಯೊಬ್ಬರು ಮರದಲ್ಲೇ ಮೃತಪಟ್ಟ ಘಟನೆ ಕಟೀಲು ಜಲಕದ ಕಟ್ಟೆ ಸಮೀಪ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಜಯರಾಮ ಶೆಟ್ಟಿ(75) ಎಂದು ಗುರುತಿಸಲಾಗಿದೆ.
ಸುರತ್ಕಲ್ನ ಮುಕ್ಕದಲ್ಲಿ ವಾಸವಾಗಿರುವ ಜಯರಾಮ ಶೆಟ್ಟಿಯವರು ಬುಧವಾರ ಕಟೀಲು ಸಮೀಪದ ತಮ್ಮ ಜಮೀನಿನಲ್ಲಿರುವ ತೆಂಗಿನಮರಕ್ಕೆ ಯಂತ್ರದ ಸಹಾಯದಿಂದ ಏರಿದ್ದಾರೆ. ಈ ಸಂದರ್ಭ ತೆಂಗಿನ ಮರದಲ್ಲಿ ಹೃದಯಾಘಾತಕ್ಕೀಡಾಗಿದ್ದಾರೆ. ಆದರೆ ಈ ಸಂದರ್ಭ ಯಾರೂ ಇಲ್ಲದ ಕಾರಣ ಗಮನಕ್ಕೆ ಬಂದಿಲ್ಲ, ಸಂಜೆ ತೆಂಗಿನ ಮರದಲ್ಲಿ ವ್ಯಕ್ತಿ ನೇತಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕದಳ ಮತ್ತು ಬಜ್ಪೆ ಪೋಲಿಸರಿಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದವರ ಸಹಾಯದಿಂದ ಜಯರಾಮ ಶೆಟ್ಟಿಯವರ ಮೃತ ದೇಹವನ್ನು ಕೆಳಗೆ ಇಳಿಸಲಾಗಿದೆ.
ಜಯರಾಮ ಶೆಟ್ಟಿಯವರ ಪತ್ನಿ ಮತ್ತು ಮಕ್ಕಳು ಬೆಂಗಳೂರಿನಲ್ಲಿ ವಾಸವಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…