ಕಟೀಲು: ತೆಂಗಿನಕಾಯಿ ಕೀಳಲು ಏರಿದ ವ್ಯಕ್ತಿಯೊಬ್ಬರು ಮರದಲ್ಲೇ ಮೃತಪಟ್ಟ ಘಟನೆ ಕಟೀಲು ಜಲಕದ ಕಟ್ಟೆ ಸಮೀಪ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಜಯರಾಮ ಶೆಟ್ಟಿ(75) ಎಂದು ಗುರುತಿಸಲಾಗಿದೆ.
ಸುರತ್ಕಲ್ನ ಮುಕ್ಕದಲ್ಲಿ ವಾಸವಾಗಿರುವ ಜಯರಾಮ ಶೆಟ್ಟಿಯವರು ಬುಧವಾರ ಕಟೀಲು ಸಮೀಪದ ತಮ್ಮ ಜಮೀನಿನಲ್ಲಿರುವ ತೆಂಗಿನಮರಕ್ಕೆ ಯಂತ್ರದ ಸಹಾಯದಿಂದ ಏರಿದ್ದಾರೆ. ಈ ಸಂದರ್ಭ ತೆಂಗಿನ ಮರದಲ್ಲಿ ಹೃದಯಾಘಾತಕ್ಕೀಡಾಗಿದ್ದಾರೆ. ಆದರೆ ಈ ಸಂದರ್ಭ ಯಾರೂ ಇಲ್ಲದ ಕಾರಣ ಗಮನಕ್ಕೆ ಬಂದಿಲ್ಲ, ಸಂಜೆ ತೆಂಗಿನ ಮರದಲ್ಲಿ ವ್ಯಕ್ತಿ ನೇತಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕದಳ ಮತ್ತು ಬಜ್ಪೆ ಪೋಲಿಸರಿಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದವರ ಸಹಾಯದಿಂದ ಜಯರಾಮ ಶೆಟ್ಟಿಯವರ ಮೃತ ದೇಹವನ್ನು ಕೆಳಗೆ ಇಳಿಸಲಾಗಿದೆ.
ಜಯರಾಮ ಶೆಟ್ಟಿಯವರ ಪತ್ನಿ ಮತ್ತು ಮಕ್ಕಳು ಬೆಂಗಳೂರಿನಲ್ಲಿ ವಾಸವಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…