Featured

ಕಟೀಲು : ತೆಂಗಿನಕಾಯಿ ಕೀಳಲು ಮರವೇರಿದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು – vishwanews24

ಕಟೀಲು : ತೆಂಗಿನಕಾಯಿ ಕೀಳಲು ಮರವೇರಿದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು

ಕಟೀಲು: ತೆಂಗಿನಕಾಯಿ ಕೀಳಲು ಏರಿದ ವ್ಯಕ್ತಿಯೊಬ್ಬರು ಮರದಲ್ಲೇ ಮೃತಪಟ್ಟ ಘಟನೆ ಕಟೀಲು ಜಲಕದ ಕಟ್ಟೆ ಸಮೀಪ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಜಯರಾಮ ಶೆಟ್ಟಿ(75) ಎಂದು ಗುರುತಿಸಲಾಗಿದೆ.

ಸುರತ್ಕಲ್‌ನ ಮುಕ್ಕದಲ್ಲಿ ವಾಸವಾಗಿರುವ ಜಯರಾಮ ಶೆಟ್ಟಿಯವರು ಬುಧವಾರ ಕಟೀಲು ಸಮೀಪದ ತಮ್ಮ ಜಮೀನಿನಲ್ಲಿರುವ ತೆಂಗಿನಮರಕ್ಕೆ ಯಂತ್ರದ ಸಹಾಯದಿಂದ ಏರಿದ್ದಾರೆ. ಈ ಸಂದರ್ಭ ತೆಂಗಿನ ಮರದಲ್ಲಿ ಹೃದಯಾಘಾತಕ್ಕೀಡಾಗಿದ್ದಾರೆ. ಆದರೆ ಈ ಸಂದರ್ಭ ಯಾರೂ ಇಲ್ಲದ ಕಾರಣ ಗಮನಕ್ಕೆ ಬಂದಿಲ್ಲ, ಸಂಜೆ ತೆಂಗಿನ ಮರದಲ್ಲಿ ವ್ಯಕ್ತಿ ನೇತಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕದಳ ಮತ್ತು ಬಜ್ಪೆ ಪೋಲಿಸರಿಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದವರ ಸಹಾಯದಿಂದ ಜಯರಾಮ ಶೆಟ್ಟಿಯವರ ಮೃತ ದೇಹವನ್ನು ಕೆಳಗೆ ಇಳಿಸಲಾಗಿದೆ.

ಜಯರಾಮ ಶೆಟ್ಟಿಯವರ ಪತ್ನಿ ಮತ್ತು ಮಕ್ಕಳು ಬೆಂಗಳೂರಿನಲ್ಲಿ ವಾಸವಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

2 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

3 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

23 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago