Featured

ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲ್ಪಾ ಶೆಟ್ಟಿ ಭೇಟಿ -Vishwanews24

ಖಾಸಗಿ ಕಾರ್ಯಕ್ರಮದ ನಿಮಿತ್ತ ಮಂಗಳೂರಿಗೆ ಆಗಮಿಸಿದ್ದ ಶಿಲ್ಪಾ ಶೆಟ್ಟಿ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿದರು. ದೇವಸ್ಥಾನದ ಪ್ರಧಾನ ಅರ್ಚಕ ಅನಂತ ಪದ್ಮನಾಭ ಆಸ್ರಣ್ಣ ಅವರು ಶಿಲ್ಪಾ ಶೆಟ್ಟಿ ಅವರಿಗೆ ದೇವರ ಶೇಷವಸ್ತ್ರ ನೀಡಿ ಗೌರವಿಸಿದರು. ಜೊತೆಗೆ ಮುಂದಿನ ವರ್ಷ ಜನವರಿಯಲ್ಲಿ ನಡೆಯುವ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಬರುವಂತೆ ಕೋರಿ, ಆಮಂತ್ರಣ ಪತ್ರಿಕೆಯನ್ನು ನೀಡಿದರು.

ಆಮಂತ್ರಣ ಹಾಗೂ ವಿಶೇಷ ಗೌರವವನ್ನು ಸ್ವೀಕರಿಸಿದ ಶಿಲ್ಪಾ ಶೆಟ್ಟಿ ಅವರು, ಬ್ರಹ್ಮಕಲಶೋತ್ಸವಕ್ಕೆ ಬರುವುದಾಗಿ ತಿಳಿಸಿದ್ದಾರೆ.

ತಾಯ್ನುಡಿ ತುಳುವಿನಲ್ಲಿಯೇ ಮಾತು ಆರಂಭಿಸಿ, ಮಂಗಳೂರಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನು ಇದಕ್ಕೂ ಮುನ್ನ ನಗರದ ಟಿಎಂಎ ಪೈ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಎಂಸಿ ಆಸ್ಪತ್ರೆಯ ಮಾತೃತ್ವ ಮತ್ತು ಮಕ್ಕಳ ಆರೈಕೆಯ ನೂತನ ಘಟಕಕ್ಕೆ ಅವರು ಚಾಲನೆ ನೀಡಿದರು. ದ.ಕ. ಜಿಲ್ಲೆಯು ಇತಿಹಾಸ ಪ್ರಸಿದ್ಧ ಜಿಲ್ಲೆಯಾಗಿದೆ. ಇಲ್ಲಿಗೆ ಬರಲು ನನಗೆ ಹೆಮ್ಮೆಯಾಗುತ್ತಿದೆ ಎಂದು ಶಿಲ್ಪ ಶೆಟ್ಟಿ ಹೇಳಿದ್ದಾರೆ.

ಮಾತೃತ್ವ ಮಹಿಳೆಯರ ಜೀವನದ ಒಂದು ಪ್ರಮುಖ ಘಟ್ಟವಾಗಿದೆ. ಈ ವೇಳೆ ಉತ್ತಮ ವೈದ್ಯಕೀಯ ನೆರವು ಸಲಹೆ ಅಗತ್ಯ. ಅದಕ್ಕಾಗಿ ಕೆಎಂಸಿ ಆಸ್ಪತ್ರೆಯ ಈ ಘಟಕ ಸಹಕಾರಿಯಾಗಲಿದೆ ಎಂದವರು ಹೇಳಿದರು.

ಕಾರ್ಯಕ್ರಮದಲ್ಲಿ ಮಣಿಪಾಲ್ ವಿದ್ಯಾಸಂಸ್ಥೆ ಉಪ ಕುಲಪತಿ ಡಾ.ಎಚ್ ಎಸ್ ಬಲ್ಲಾಳ್, ಕೆಎಂಸಿ ಆಸ್ಪತ್ರೆಯ ರೀಜನಲ್ ಚೀಫ್ ಆಪರೇಟಿಂಗ್ ಆಫಿಸರ್ ಸಾಘಿರ್ ಸಿದ್ದಿಕಿ, ಮಣಿಪಾಲ್ ಹೆಲ್ತ್ ಎಂಟರ್ ಪ್ರೈಸಸ್ ಮುಖ್ಯಸ್ಥರಾದ ದಿಲಿಪ್ ಜೋಸೆ ಮತ್ತಿತರರು ಉಪಸ್ಥಿತರಿದ್ದರು.

 

 

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

17 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

17 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

17 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

17 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

18 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

18 hours ago