ಕಟೀಲು: ಕಟೀಲು ದೇವಸ್ಥಾನದ ಮುಂದೆ ಎಂಆರ್ಪಿಎಲ್ ಕಂಪನಿಗೆ ಸೇರಿದ ಬಸ್ ಏಕಾಏಕಿ ಹೊತ್ತಿ ಉರಿದಿದ್ದು ಬಸ್ಸಿನಲ್ಲಿದ್ದ ಮೂವರು ಪವಾಡ ಸದೃಶ ಪಾರಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಸುರತ್ಕಲ್ ಸಮೀಪದ ಓಎಂಪಿಎಲ್ ಗೆ ಸಿಬಂದಿಗಳನ್ನು ಕರೆದೊಯ್ಯುವ ಬಸ್ಸು ಮಧ್ಯಾಹ್ನ 2.45ರ ಸುಮಾರಿಗೆ ಕಟೀಲು ದೇವಸ್ಥಾನದ ಎದುರು ರಾಜ್ಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದು ಶಾರ್ಟ್ ಸರ್ಕ್ಯೂಟ್ ನಿಂದ ಏಕಾಏಕಿ ಹೊತ್ತಿ ಉರಿದಿದೆ.
ಏನಾಯಿತು ಎಂದು ತಿಳಿಯುವಷ್ಟರಲ್ಲಿ ಸ್ಥಳೀಯರು ಭಯಭೀತರಾಗಿದ್ದು ಕೂಡಲೇ ಸ್ಥಳೀಯವಾಗಿ ನೀರು ಸರಬರಾಜು ಮಾಡುವ ಮೂರು ಕಾವೇರಿ ವಿಶ್ವನಾಥ ಎಂಬುವವರ ನೀರಿನ ಟ್ಯಾಂಕರ್ ಮೂಲಕ ನೀರು ಹಾಯಿಸಿ ಬೆಂಕಿ ನಂದಿಸಲಾಗಿದೆ.
ಕಟೀಲು ರೂಟ್ ನಲ್ಲಿ ಚಲಿಸುವ ಓಎಂಪಿಎಲ್ ಕಂಪನಿಯ ಈ ಬಸ್ ಕಡೆಯ ನೌಕರನ್ನು ಬಿಟ್ಟು ವಾಪಸ್ಸಾಗುವ ಈ ಘಟನೆ ಸಂಭವಿಸಿದ್ದು, ಬಸ್ಸಿನಲ್ಲಿ ಡ್ರೈವರ್ ಸೇರಿ ಮೂರು ಜನ ಇದ್ದಾರೆಂದು ತಿಳಿದು ಬಂದಿದ್ದು ,ಬೆಂಕಿ ತಗಲಿದ ಕೂಡಲೇ ಬಸ್ಸಿನಲ್ಲಿದ್ದ ಚಾಲಕ ಹಾಗೂ ಇನ್ನಿಬ್ಬರು ಬಸ್ಸಿನಿಂದ ಜಿಗಿದು ಪವಾಡ ಸದೃಶ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…
ಉಡುಪಿ: ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! ಉಡುಪಿ: ಮಾಜಿ ಸಚಿವ ಮತ್ತು ಬಿಜೆಪಿ…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…