Featured

ಕಟೀಲು: ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ; ಹಿಂಬದಿ ಸವಾರ 9ನೇ ತರಗತಿ ವಿದ್ಯಾರ್ಥಿ ಸಾವು – VIshwanews24

ಕಟೀಲು: ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ; ಹಿಂಬದಿ ಸವಾರ 9ನೇ ತರಗತಿ ವಿದ್ಯಾರ್ಥಿ ಸಾವು

ಕಟೀಲು: ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಹಿಂಬದಿ ಸವಾರ ಬಾಲಕ ಮೃತಪಟ್ಟ ಘಟನೆ ಕಟೀಲು ಸಮೀಪದ ಉಲ್ಲಂಜೆಯಲ್ಲಿ ನಡೆದಿದೆ.

ಕಿಲ್ಲಂಜೆ ಶಾಲಾ ಸಮೀಪದ ನಿವಾಸಿ ಚರಣ್ (14) ಮೃತ ಬಾಲಕ. ಕಟೀಲು ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ. ಸೋಮವಾರ ಸಂಜೆ ಶಾಲೆಯಿಂದ ಮನೆಗೆ ಬರುತ್ತಿದ್ದಾಗ ಕಿನ್ನಿಗೋಳಿ ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನವನ್ನು ಚರಣ್ ನಿಲ್ಲಿಸಿ ಲಿಫ್ಟ್ ಕೇಳಿದ್ದಾನೆ.

ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡುತ್ತಿದ್ದಾಗ ಕಿನ್ನಿಗೋಳಿಯಿಂದ ಕಟೀಲು ಕಡೆಗೆ ಬರುತ್ತಿದ್ದ ಬಸ್‌ ಉಲ್ಲಂಜೆ ಜುಮಾದಿ ಗುಡ್ಡೆ ಬಳಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ದ್ವಿಚಕ್ರ ವಾಹನದ ಹಿಂಬದಿ ಕುಳಿತಿದ್ದ ಚರಣ್‌ ರಸ್ತೆಗೆ ಎಸೆಯಲ್ಪಟ್ಟು ಬಸ್ಸಿನಡಿಗೆ ಬಿದ್ದು ಮೃತಪಟ್ಟಿದ್ದಾನೆ. ಸವಾರ ಎಡ ಬದಿ ಬದಿಗೆ ಎಸೆಯಲ್ಪಟ್ಟ ಕಾರಣ ಬದುಕುಳಿದಿದ್ದಾರೆ. ಇಲ್ಲಿ ಸುಮಾರು ಒಂದು ಗಂಟೆ ಸಂಚಾರದಲ್ಲಿ ವ್ಯತ್ಯಯವಾಗಿದೆ.

ಮೃತ ಬಾಲಕನ ತಂದೆ ಗಣೇಶ್‌ ಕಿನ್ನಿಗೋಳಿಯ ಮಿಲ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದಾರೆ.ಬಾಲಕ ತಂದೆ, ತಾಯಿ, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾನೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago