ಕಟೀಲು ಬ್ರಹ್ಮಕಲಶೋತ್ಸವ : ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ , ಪ್ಲಾಸ್ಟಿಕ್‌ ಮುಕ್ತ ಬ್ರಹ್ಮಕಲಶೋತ್ಸವವನ್ನಾಗಿಸಲು ಪ್ರಯತ್ನ -Vishwanews24

ಮಂಗಳೂರು: ನಗರದ ಹೊರವಲಯದಲ್ಲಿರುವ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಜ. 22ರಿಂದ ಫೆಬ್ರವರಿ 3ರ ವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ದೇವಸ್ಥಾನ ಸಮಿತಿ ಮತ್ತು ಆಡಳಿತ ಮಂಡಳಿ ಮುಂದಾಗಿದೆ.

ಬ್ರಹ್ಮಕಲಶೋತ್ಸವದ ನಿಟ್ಟಿನಲ್ಲಿ, ಈಗಾಗಲೇ ಕ್ಷೇತ್ರದಲ್ಲಿ ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ ಹಾಕಲು ಯೋಜನೆಯನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ದೇವಳದ ಅರ್ಚಕ ಹರಿನಾರಾಯಣದಾಸ ಆಸ್ರಣ್ಣ ಅವರು, ದೇವಸ್ಥಾನದಲ್ಲಿ ಈಗಾಗಲೇ ಪ್ರಸಾದ ಪಂಜಕಜ್ಜಾಯಕ್ಕೆ ಹಾಗೂ ಪ್ರಸಾದ ವಿತರಣೆ ಬಟ್ಟೆಯ ಚೀಲ ಹಾಗೂ ಕುಂಕುಮ ಪ್ರಸಾದಕ್ಕೂ ಕಾಗದದ ಲಕೋಟೆಯನ್ನು ಬಳಸಲಾಗುತ್ತಿದೆ. ಭೋಜನ ಶಾಲೆಗೆ 2,000 ಊಟದ ಬಟ್ಟಲು ಉಪಯೋಗಿಸುವ ನಿಟ್ಟಿನಲ್ಲಿ ಅತ್ಯಾಧುನಿಕವಾದ ತಟ್ಟೆ, ಬಟ್ಟಲು ತೊಳೆಯುವ ಯಂತ್ರವನ್ನು ತರಿಸಲಾಗುವುದು. ಒಟ್ಟಿನಲ್ಲಿ ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ ಹಾಕಲಾಗುವುದು ಎಂದು ತಿಳಿಸಿದ್ದಾರೆ.

ದೇವಸ್ಥಾನ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯಿಂದ ಪ್ರಚಾರಾರ್ಥವಾಗಿ ಮುದ್ರಿಸಿರುವ ಎಲ್ಲ ಬ್ಯಾನರ್‌ಗಳೂ ಬಟ್ಟೆಯದ್ದಾಗಿದ್ದು, ಇದು ಬಟ್ಟೆಯ ಬ್ಯಾನರ್‌, ಪ್ಲಾಸ್ಟಿಕ್‌ ಬಳಸದಿರೋಣ ಎಂಬ ಸ್ಲೋಗನ್‌ನ್ನು ಕೂಡ ಹಾಕಲಾಗಿದೆ. ಫ್ಲೆಕ್ಸ್‌ ಬ್ಯಾನರ್‌ ಬದಲು ಬಟ್ಟೆಯ ಬ್ಯಾನರನ್ನೇ ಬಳಸಿ ಎಂದು ಭಕ್ತರನ್ನು ಕೂಡ ವಿನಂತಿಸಲಾಗಿದೆ. ಊಟ ಹಾಗೂ ಉಪಾಹಾರಕ್ಕೆ ಸ್ಟೀಲ್‌ ಬಟ್ಟಲನ್ನು ಬಳಸಲು ನಿರ್ಧರಿಸಲಾಗಿದ್ದು, ನೀರು ಹಾಗೂ ಕಾಫಿ, ಚಾ, ಪಾನೀಯಗಳಿಗೂ ಸ್ಟೀಲ್‌ ಹಾಗೂ ಕಾಗದದ ಲೋಟೆಗಳನ್ನೇ ಬಳಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ದಾನಿಗಳೂ ಮುಂದೆ ಬಂದಿದ್ದು, ಹತ್ತು ಸಾವಿರಕ್ಕೂ ಮಿಕ್ಕಿದ ಬಟ್ಟಲುಗಳನ್ನು ಅಷ್ಟೇ ಸಂಖ್ಯೆಯ ಲೋಟಗಳನ್ನು ವ್ಯವಸ್ಥೆಗೊಳಿಸಲಾಗುತ್ತಿದೆ.

ಕ್ಷೇತ್ರದಲ್ಲಿ ಪ್ಲಾಸ್ಟಿಕ್‌ ಚೀಲಗಳನ್ನು ಬಳಸದೆ ಬಟ್ಟೆಯ ಚೀಲಗಳನ್ನೇ ಬಳಸಲು ಮುತುವರ್ಜಿ ವಹಿಸಲಾಗಿದೆ. ಪಂಚಕಜ್ಜಾಯಕ್ಕೂ ಪ್ಲಾಸ್ಟಿಕ್‌ ಲಕೋಟೆಯ ಬದಲು ಕಾಗದದ ಲಕೋಟೆಗಳನ್ನು ಬಳಸಲು ದೇವಸ್ಥಾನ ಮುಂದಾಗಿದೆ. ಸದ್ಯ ತೀರ್ಥದ ಬಾಟಲಿ ಹಾಗೂ ತ್ರಿಮಧುರ ಪ್ರಸಾದವನ್ನು ಉತ್ತಮ ದರ್ಜೆಯ ಪ್ಲಾಸ್ಟಿಕ್‌ ಬಾಟಲಿಯಲ್ಲಿ ಕೊಡಲಾಗುತ್ತಿದ್ದು, ಪರ್ಯಾಯ ವ್ಯವಸ್ಥೆಗೆ ಚಿಂತನೆ ನಡೆದಿದೆ. ಇನ್ನು ಅಲಂಕಾರಕ್ಕಾಗಿ ಹಾಕಲಾಗುವ ಬಂಟಿಂಗ್ಸ್‌ ಬಟ್ಟೆಯದ್ದೇ ಆಗಿರುವಂತೆ ಸಮಿತಿ ಸೂಚಿಸಿದೆ.

ಒಟ್ಟಾರೆ, ಸಾಧ್ಯವಾದಷ್ಟು ಪ್ಲಾಸ್ಟಿಕ್‌ ಮುಕ್ತ ಬ್ರಹ್ಮಕಲಶೋತ್ಸವವನ್ನಾಗಿಸಲು ಪ್ರಯತ್ನ ಸಾಗಿದೆ. ದ್ವಾರ ಮುಂತಾದ ಅಲಂಕಾರಿಕ ವಸ್ತುಗಳಲ್ಲೂ ಪ್ಲಾಸ್ಟಿಕ್‌ ರಹಿತ ವಸ್ತುಗಳನ್ನು ಬಳಸುವಂತೆ ಭಕ್ತರನ್ನು ವಿನಂತಿಸಲಾಗಿದೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

4 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

4 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

5 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

5 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

6 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

6 hours ago