ಕಟೀಲು ಬ್ರಹ್ಮಕಲಶೋತ್ಸವ : ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ , ಪ್ಲಾಸ್ಟಿಕ್‌ ಮುಕ್ತ ಬ್ರಹ್ಮಕಲಶೋತ್ಸವವನ್ನಾಗಿಸಲು ಪ್ರಯತ್ನ -Vishwanews24

ಮಂಗಳೂರು: ನಗರದ ಹೊರವಲಯದಲ್ಲಿರುವ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಜ. 22ರಿಂದ ಫೆಬ್ರವರಿ 3ರ ವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ದೇವಸ್ಥಾನ ಸಮಿತಿ ಮತ್ತು ಆಡಳಿತ ಮಂಡಳಿ ಮುಂದಾಗಿದೆ.

ಬ್ರಹ್ಮಕಲಶೋತ್ಸವದ ನಿಟ್ಟಿನಲ್ಲಿ, ಈಗಾಗಲೇ ಕ್ಷೇತ್ರದಲ್ಲಿ ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ ಹಾಕಲು ಯೋಜನೆಯನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ದೇವಳದ ಅರ್ಚಕ ಹರಿನಾರಾಯಣದಾಸ ಆಸ್ರಣ್ಣ ಅವರು, ದೇವಸ್ಥಾನದಲ್ಲಿ ಈಗಾಗಲೇ ಪ್ರಸಾದ ಪಂಜಕಜ್ಜಾಯಕ್ಕೆ ಹಾಗೂ ಪ್ರಸಾದ ವಿತರಣೆ ಬಟ್ಟೆಯ ಚೀಲ ಹಾಗೂ ಕುಂಕುಮ ಪ್ರಸಾದಕ್ಕೂ ಕಾಗದದ ಲಕೋಟೆಯನ್ನು ಬಳಸಲಾಗುತ್ತಿದೆ. ಭೋಜನ ಶಾಲೆಗೆ 2,000 ಊಟದ ಬಟ್ಟಲು ಉಪಯೋಗಿಸುವ ನಿಟ್ಟಿನಲ್ಲಿ ಅತ್ಯಾಧುನಿಕವಾದ ತಟ್ಟೆ, ಬಟ್ಟಲು ತೊಳೆಯುವ ಯಂತ್ರವನ್ನು ತರಿಸಲಾಗುವುದು. ಒಟ್ಟಿನಲ್ಲಿ ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ ಹಾಕಲಾಗುವುದು ಎಂದು ತಿಳಿಸಿದ್ದಾರೆ.

ದೇವಸ್ಥಾನ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯಿಂದ ಪ್ರಚಾರಾರ್ಥವಾಗಿ ಮುದ್ರಿಸಿರುವ ಎಲ್ಲ ಬ್ಯಾನರ್‌ಗಳೂ ಬಟ್ಟೆಯದ್ದಾಗಿದ್ದು, ಇದು ಬಟ್ಟೆಯ ಬ್ಯಾನರ್‌, ಪ್ಲಾಸ್ಟಿಕ್‌ ಬಳಸದಿರೋಣ ಎಂಬ ಸ್ಲೋಗನ್‌ನ್ನು ಕೂಡ ಹಾಕಲಾಗಿದೆ. ಫ್ಲೆಕ್ಸ್‌ ಬ್ಯಾನರ್‌ ಬದಲು ಬಟ್ಟೆಯ ಬ್ಯಾನರನ್ನೇ ಬಳಸಿ ಎಂದು ಭಕ್ತರನ್ನು ಕೂಡ ವಿನಂತಿಸಲಾಗಿದೆ. ಊಟ ಹಾಗೂ ಉಪಾಹಾರಕ್ಕೆ ಸ್ಟೀಲ್‌ ಬಟ್ಟಲನ್ನು ಬಳಸಲು ನಿರ್ಧರಿಸಲಾಗಿದ್ದು, ನೀರು ಹಾಗೂ ಕಾಫಿ, ಚಾ, ಪಾನೀಯಗಳಿಗೂ ಸ್ಟೀಲ್‌ ಹಾಗೂ ಕಾಗದದ ಲೋಟೆಗಳನ್ನೇ ಬಳಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ದಾನಿಗಳೂ ಮುಂದೆ ಬಂದಿದ್ದು, ಹತ್ತು ಸಾವಿರಕ್ಕೂ ಮಿಕ್ಕಿದ ಬಟ್ಟಲುಗಳನ್ನು ಅಷ್ಟೇ ಸಂಖ್ಯೆಯ ಲೋಟಗಳನ್ನು ವ್ಯವಸ್ಥೆಗೊಳಿಸಲಾಗುತ್ತಿದೆ.

ಕ್ಷೇತ್ರದಲ್ಲಿ ಪ್ಲಾಸ್ಟಿಕ್‌ ಚೀಲಗಳನ್ನು ಬಳಸದೆ ಬಟ್ಟೆಯ ಚೀಲಗಳನ್ನೇ ಬಳಸಲು ಮುತುವರ್ಜಿ ವಹಿಸಲಾಗಿದೆ. ಪಂಚಕಜ್ಜಾಯಕ್ಕೂ ಪ್ಲಾಸ್ಟಿಕ್‌ ಲಕೋಟೆಯ ಬದಲು ಕಾಗದದ ಲಕೋಟೆಗಳನ್ನು ಬಳಸಲು ದೇವಸ್ಥಾನ ಮುಂದಾಗಿದೆ. ಸದ್ಯ ತೀರ್ಥದ ಬಾಟಲಿ ಹಾಗೂ ತ್ರಿಮಧುರ ಪ್ರಸಾದವನ್ನು ಉತ್ತಮ ದರ್ಜೆಯ ಪ್ಲಾಸ್ಟಿಕ್‌ ಬಾಟಲಿಯಲ್ಲಿ ಕೊಡಲಾಗುತ್ತಿದ್ದು, ಪರ್ಯಾಯ ವ್ಯವಸ್ಥೆಗೆ ಚಿಂತನೆ ನಡೆದಿದೆ. ಇನ್ನು ಅಲಂಕಾರಕ್ಕಾಗಿ ಹಾಕಲಾಗುವ ಬಂಟಿಂಗ್ಸ್‌ ಬಟ್ಟೆಯದ್ದೇ ಆಗಿರುವಂತೆ ಸಮಿತಿ ಸೂಚಿಸಿದೆ.

ಒಟ್ಟಾರೆ, ಸಾಧ್ಯವಾದಷ್ಟು ಪ್ಲಾಸ್ಟಿಕ್‌ ಮುಕ್ತ ಬ್ರಹ್ಮಕಲಶೋತ್ಸವವನ್ನಾಗಿಸಲು ಪ್ರಯತ್ನ ಸಾಗಿದೆ. ದ್ವಾರ ಮುಂತಾದ ಅಲಂಕಾರಿಕ ವಸ್ತುಗಳಲ್ಲೂ ಪ್ಲಾಸ್ಟಿಕ್‌ ರಹಿತ ವಸ್ತುಗಳನ್ನು ಬಳಸುವಂತೆ ಭಕ್ತರನ್ನು ವಿನಂತಿಸಲಾಗಿದೆ.

Vishwa News 24

Recent Posts

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 hour ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 hour ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 hours ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

3 hours ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

3 hours ago