ಕಟೀಲು ಬ್ರಹ್ಮಕಲಶೋತ್ಸವ : ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ , ಪ್ಲಾಸ್ಟಿಕ್‌ ಮುಕ್ತ ಬ್ರಹ್ಮಕಲಶೋತ್ಸವವನ್ನಾಗಿಸಲು ಪ್ರಯತ್ನ -Vishwanews24

ಮಂಗಳೂರು: ನಗರದ ಹೊರವಲಯದಲ್ಲಿರುವ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಜ. 22ರಿಂದ ಫೆಬ್ರವರಿ 3ರ ವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ದೇವಸ್ಥಾನ ಸಮಿತಿ ಮತ್ತು ಆಡಳಿತ ಮಂಡಳಿ ಮುಂದಾಗಿದೆ.

ಬ್ರಹ್ಮಕಲಶೋತ್ಸವದ ನಿಟ್ಟಿನಲ್ಲಿ, ಈಗಾಗಲೇ ಕ್ಷೇತ್ರದಲ್ಲಿ ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ ಹಾಕಲು ಯೋಜನೆಯನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ದೇವಳದ ಅರ್ಚಕ ಹರಿನಾರಾಯಣದಾಸ ಆಸ್ರಣ್ಣ ಅವರು, ದೇವಸ್ಥಾನದಲ್ಲಿ ಈಗಾಗಲೇ ಪ್ರಸಾದ ಪಂಜಕಜ್ಜಾಯಕ್ಕೆ ಹಾಗೂ ಪ್ರಸಾದ ವಿತರಣೆ ಬಟ್ಟೆಯ ಚೀಲ ಹಾಗೂ ಕುಂಕುಮ ಪ್ರಸಾದಕ್ಕೂ ಕಾಗದದ ಲಕೋಟೆಯನ್ನು ಬಳಸಲಾಗುತ್ತಿದೆ. ಭೋಜನ ಶಾಲೆಗೆ 2,000 ಊಟದ ಬಟ್ಟಲು ಉಪಯೋಗಿಸುವ ನಿಟ್ಟಿನಲ್ಲಿ ಅತ್ಯಾಧುನಿಕವಾದ ತಟ್ಟೆ, ಬಟ್ಟಲು ತೊಳೆಯುವ ಯಂತ್ರವನ್ನು ತರಿಸಲಾಗುವುದು. ಒಟ್ಟಿನಲ್ಲಿ ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ ಹಾಕಲಾಗುವುದು ಎಂದು ತಿಳಿಸಿದ್ದಾರೆ.

ದೇವಸ್ಥಾನ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯಿಂದ ಪ್ರಚಾರಾರ್ಥವಾಗಿ ಮುದ್ರಿಸಿರುವ ಎಲ್ಲ ಬ್ಯಾನರ್‌ಗಳೂ ಬಟ್ಟೆಯದ್ದಾಗಿದ್ದು, ಇದು ಬಟ್ಟೆಯ ಬ್ಯಾನರ್‌, ಪ್ಲಾಸ್ಟಿಕ್‌ ಬಳಸದಿರೋಣ ಎಂಬ ಸ್ಲೋಗನ್‌ನ್ನು ಕೂಡ ಹಾಕಲಾಗಿದೆ. ಫ್ಲೆಕ್ಸ್‌ ಬ್ಯಾನರ್‌ ಬದಲು ಬಟ್ಟೆಯ ಬ್ಯಾನರನ್ನೇ ಬಳಸಿ ಎಂದು ಭಕ್ತರನ್ನು ಕೂಡ ವಿನಂತಿಸಲಾಗಿದೆ. ಊಟ ಹಾಗೂ ಉಪಾಹಾರಕ್ಕೆ ಸ್ಟೀಲ್‌ ಬಟ್ಟಲನ್ನು ಬಳಸಲು ನಿರ್ಧರಿಸಲಾಗಿದ್ದು, ನೀರು ಹಾಗೂ ಕಾಫಿ, ಚಾ, ಪಾನೀಯಗಳಿಗೂ ಸ್ಟೀಲ್‌ ಹಾಗೂ ಕಾಗದದ ಲೋಟೆಗಳನ್ನೇ ಬಳಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ದಾನಿಗಳೂ ಮುಂದೆ ಬಂದಿದ್ದು, ಹತ್ತು ಸಾವಿರಕ್ಕೂ ಮಿಕ್ಕಿದ ಬಟ್ಟಲುಗಳನ್ನು ಅಷ್ಟೇ ಸಂಖ್ಯೆಯ ಲೋಟಗಳನ್ನು ವ್ಯವಸ್ಥೆಗೊಳಿಸಲಾಗುತ್ತಿದೆ.

ಕ್ಷೇತ್ರದಲ್ಲಿ ಪ್ಲಾಸ್ಟಿಕ್‌ ಚೀಲಗಳನ್ನು ಬಳಸದೆ ಬಟ್ಟೆಯ ಚೀಲಗಳನ್ನೇ ಬಳಸಲು ಮುತುವರ್ಜಿ ವಹಿಸಲಾಗಿದೆ. ಪಂಚಕಜ್ಜಾಯಕ್ಕೂ ಪ್ಲಾಸ್ಟಿಕ್‌ ಲಕೋಟೆಯ ಬದಲು ಕಾಗದದ ಲಕೋಟೆಗಳನ್ನು ಬಳಸಲು ದೇವಸ್ಥಾನ ಮುಂದಾಗಿದೆ. ಸದ್ಯ ತೀರ್ಥದ ಬಾಟಲಿ ಹಾಗೂ ತ್ರಿಮಧುರ ಪ್ರಸಾದವನ್ನು ಉತ್ತಮ ದರ್ಜೆಯ ಪ್ಲಾಸ್ಟಿಕ್‌ ಬಾಟಲಿಯಲ್ಲಿ ಕೊಡಲಾಗುತ್ತಿದ್ದು, ಪರ್ಯಾಯ ವ್ಯವಸ್ಥೆಗೆ ಚಿಂತನೆ ನಡೆದಿದೆ. ಇನ್ನು ಅಲಂಕಾರಕ್ಕಾಗಿ ಹಾಕಲಾಗುವ ಬಂಟಿಂಗ್ಸ್‌ ಬಟ್ಟೆಯದ್ದೇ ಆಗಿರುವಂತೆ ಸಮಿತಿ ಸೂಚಿಸಿದೆ.

ಒಟ್ಟಾರೆ, ಸಾಧ್ಯವಾದಷ್ಟು ಪ್ಲಾಸ್ಟಿಕ್‌ ಮುಕ್ತ ಬ್ರಹ್ಮಕಲಶೋತ್ಸವವನ್ನಾಗಿಸಲು ಪ್ರಯತ್ನ ಸಾಗಿದೆ. ದ್ವಾರ ಮುಂತಾದ ಅಲಂಕಾರಿಕ ವಸ್ತುಗಳಲ್ಲೂ ಪ್ಲಾಸ್ಟಿಕ್‌ ರಹಿತ ವಸ್ತುಗಳನ್ನು ಬಳಸುವಂತೆ ಭಕ್ತರನ್ನು ವಿನಂತಿಸಲಾಗಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago