Featured

ಕಟೀಲು ಮೇಳದಿಂದ ಕಾಲಮಿತಿ ಯಕ್ಷಗಾನ: ಸಂಜೆ 5.30ರಿಂದ ರಾತ್ರಿ 10.30ವರೆಗೆ ಯಕ್ಷಗಾನ ಸೇವೆ – Vishwanews24

ಕಟೀಲು ಮೇಳದಿಂದ ಕಾಲಮಿತಿ ಯಕ್ಷಗಾನ: ಸಂಜೆ 5.30ರಿಂದ ರಾತ್ರಿ 10.30ವರೆಗೆ ಯಕ್ಷಗಾನ ಸೇವೆ

ಕಟೀಲು: ಪುರಾಣ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದಾದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಿಂದ ನಡೆಸಲ್ಪಡುವ 6 ಯಕ್ಷಗಾನ ಮೇಳಗಳ ಪ್ರದರ್ಶನವನ್ನು ಮುಂದಿನ ತಿರುಗಾಟದಿಂದ ಕಾಲಮಿತಿಗೆ ಬದಲಾಯಿಸುವ ನಿರ್ಣಯವನ್ನು ಆಡಳಿತ ಮಂಡಳಿ ಕೈಗೊಂಡಿದೆ.

ರಾತ್ರಿ ಗಂಟೆ 10.30 ರಿಂದ 50 ಡೆಸಿಬಲ್‌ಗಿಂತ ಹೆಚ್ಚಿಗೆ ಧ್ವನಿವರ್ಧಕವನ್ನು ಬಳಸಬಾರದು ಎಂದು ಸರಕಾರದಿಂದ ಈಗಾಗಲೇ ದೇವಸ್ಥಾನಗಳಿಗೆ ಸೂಚನೆ ಬಂದಿದೆ. ಈ ನಿಟ್ಟಿನಲ್ಲಿ ಯಕ್ಷಗಾನ ಪ್ರದರ್ಶನದ ಸಮಯವನ್ನು ಬದಲಾಯಿಸುವುದು ಅನಿವಾರ‍್ಯವಾಗಿತ್ತು. ಪ್ರತೀ ವರ್ಷ ಮೇಳಗಳು ಆರು ತಿಂಗಳು ತಿರುಗಾಟ ನಡೆಸುತ್ತದೆ, ವರ್ಷಕ್ಕೆ ಸುಮಾರು 1,000 ಅಧಿಕ ಪ್ರದರ್ಶನ ನೀಡುತ್ತಿದ್ದು, ರಾತ್ರಿ 8.30ಕ್ಕೆ ಪೂರ್ವರಂಗ ಆರಂಭವಾದರೆ ರಾತ್ರಿ 10.30ಕ್ಕೆ ಪ್ರಸಂಗ ಪೀಠಿಕೆ ಆರಂಭವಾಗುತ್ತದೆ ಬೆಳಗ್ಗಿನ ಜಾವ ಸುಮಾರು 5.30ಕ್ಕೆ ಯಕ್ಷಗಾನ ಮುಗಿಯುತ್ತಿತ್ತು.

ಮುಂದಿನ ದಿನಗಳಲ್ಲಿ ಸಂಜೆ 5.30ರಿಂದ ರಾತ್ರಿ 10.30ವರೆಗೆ ಯಕ್ಷಗಾನ ಸೇವೆ ನಡೆಯಲಿದೆ ಎಂದು ಕಟೀಲು ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನುವಂಶಿಕ ಮೊಕ್ತೇಸರ ಕೊಡೆತ್ತೂರು ಗುತ್ತು ಸನತ್ ಕುಮಾರ ಶೆಟ್ಟಿ, ಆನುವಂಶಿಕ ಮೊಕ್ತೇಸರ ಮತ್ತು ಅರ್ಚಕರಾದ ವಾಸುದೇವ ಆಸ್ರಣ್ಣ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು,

ದೇವರ ಎದುರು ಕಾಲಮಿತಿ ಯಕ್ಷಗಾನ ಬಗ್ಗೆ ಹೂಪ್ರಶ್ನೆ ಇಟ್ಟಾಗ ದೇವರ ಒಪ್ಪಿಗೆ ಬಂದಿದೆ. ಹಾಗಾಗಿ ಕಾಲಮಿತಿ ಯಕ್ಷಗಾನ ಮಾಡುವ ಬಗ್ಗೆ ಮಂಗಳವಾರ ಆಡಳಿತ ಮಂಡಳಿ ನಿರ್ಧಾರ ಮಾಡಿದ್ದು, ಸಂಜೆ 5 ಗಂಟೆಯಿಂದ ರಾತ್ರಿ 10.30ರ ತನಕ ಯಕ್ಷಗಾನ ನಡೆಸುವ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗಿದೆ. ಇನ್ನು ಯಕ್ಷಗಾನ ಪ್ರದರ್ಶನದ ಸ್ವರೂಪ ಚಿಂತನೆಗಳ ಸ್ಪಷ್ಟ ರೂಪ ಮುಂದಿನ ದಿನಗಳಲ್ಲಿ ನಡೆಯುವ ಸಭೆಗಳಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

1 day ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

1 day ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

1 day ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

1 day ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

1 day ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

1 day ago