Featured

ಕಟೀಲು ಮೇಳದ ಟ್ರಸ್ಟ್ ವಿರುದ್ದ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು : ಕಟೀಲು ಯಕ್ಷಗಾನ ಮೇಳದಕ್ಕೆ ಸಂಬಂಧಿಸಿದ ಯಕ್ಷ ಧರ್ಮಭೋದಿನಿ ಚಾರಿಟೇಬಲ್ ಟ್ರಸ್ಟ್ ವಿರುದ್ದ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇಳಕ್ಕೆ ಸಂಬಂಧಿಸಿದ ಯಕ್ಷ ಧರ್ಮಭೋದಿನಿ ಚಾರಿಟೇಬಲ್ ಟ್ರಸ್ಟ್ ನ ವ್ಯವಹಾರಗಳ ಸಮರ್ಪಕವಾಗಿಲ್ಲ ಎಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿಗಳು ಎರಡು ತಿಂಗಳ ಹಿಂದೆ ಸರಕಾರಕ್ಕೆ ಸಲ್ಲಿಸಿದ್ದ ವರದಿ ಹಿನ್ನಲೆಯಲ್ಲಿ ಟ್ರಸ್ಟ್ ನ ವಿರುದ್ದ ಪೊಲೀಸ್ ತನಿಖೆಗೆ ಮಂಗಳೂರಿನ 3 ನೇ ನ್ಯಾಯಾಧೀಶರ ಮತ್ತು ಜೆ.ಎಂ.ಎಫ್ . ಸಿ ನ್ಯಾಯಾಲಯ ಸೂಚಿಸಿದೆ.

ಕಟೀಲು ಮೆಳದ ಮಾಜಿ ಕಲಾವಿದ ಮಾಧವ ಬಂಗೇರ ಧಾರ್ಮಿಕ ದತ್ತಿ ಇಲಾಖೆ ಗಮನಕ್ಕೆ ತಾರದೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧಾರ್ಮಿಕ ದತ್ತಿಗಳ ನಿಯಮ ಉಲ್ಲಂಘಿಸಿ, ವಂಚನೆ ಮಾಡಿ ಹಣ ಮಾಡುವ ಉದ್ದೇಶದಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಧರ್ಮ ಭೋದಿನಿ ಚಾರಿಟೇಬಲ್ ಟ್ರಸ್ಟ್ ರಚಿಸಲಾಗಿದೆ ಎಂದು ಬಜ್ಪೆ ಠಾಣೆಗೆ ದೂರು ನೀಡಿದ್ದರು.ಆದರೆ ಪೊಲೀಸರು ದೂರು ದಾಖಲಿಸಲು ನಿರಾಕರಿಸಿದ ಹಿನ್ನಲೆಯಲ್ಲಿ ಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನಲೆಯಲ್ಲಿ ಟ್ರಸ್ಟ್ ನ ವಿರುದ್ದ ಪೊಲೀಸ್ ತನಿಖೆಗೆ ಮಂಗಳೂರಿನ 3 ನೇ ನ್ಯಾಯಾಧೀಶರ ಮತ್ತು ಜೆ.ಎಂ.ಎಫ್ . ಸಿ ನ್ಯಾಯಾಲಯ ಸೂಚಿಸಿದೆ.

ಅಂತೆಯೇ ಬಜ್ಪೆ ಠಾಣೆಯ ಪೊಲೀಸರು ಕಟೀಲು ಟ್ರಸ್ಟ್ ನ ಅಧ್ಯಕ್ಷರ ಸಹಿತ ಆಡಳಿತ ಮಂಡಳಿ ವಿರುದ್ದ ಸೆ.22 ಶನಿವಾರ ಕೇಸು ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ೧೦ ಜನರನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದೆ. ಅಧ್ಯಕ್ಷ ರಾಘವ ಆಚಾರ್ಯ ಹಾಗೂ ಕಾರ್ಯದರ್ಶಿ ಶಿವಾಜಿ ಶೆಟ್ಟಿ, ಟ್ರಸ್ಟಿಗಳಾದ ಶ್ರೀನಿವಾಸ್ ಭಟ್ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ, ರವಿರಾಜ್ ಆಚಾರ್ಯ, ಭುಜಂಗ ಶೆಟ್ಟಿ, ಸುಣ್ಣಂಬಳ ವಿಶ್ವೇಶ್ವರ ಭಟ್, ಉದಯನಂದ ಶೆಟ್ಟಿ, ಮತ್ತು ರಾಮಣ್ಣ ಶೆಟ್ಟಿ ಸೇರಿದಂತೆ ಹತ್ತು ಮಂದಿಯನ್ನು ಪ್ರಕರಣದಲ್ಲಿ ಆರೋಪಿಗಳನ್ನಾಗಿ ಹೆಸರಿಸಲಾಗಿದೆ.

ನ್ಯಾಯಾಲದ ಆದೇಶದಂತೆ ಆರೋಪಿಗಳ ವಿರುದ್ದ 406,417,418,420,109 ಮತ್ತು 120 ಬಿ ಸೆಕ್ಷನ್ ಗಳಡಿ ಕೇಸು ದಾಖಲಿಸಿಕೊಳ್ಳಲಾಗಿದೆ. ಬಜ್ಪೆ ಪೊಲೀಸರು ಎಫ್. ಐ.ಆರ್ ಪ್ರತಿಯನ್ನು ಸೋಮವಾರ ನ್ಯಾಯಾಲಯಕ್ಕೆ ಸಲ್ಲಿಸಲಿದ್ದು, ಪೊಲೀಸರು ತನಿಖೆ ನಡೆಸಿ ಡಿಸೆಂಬರ್ 27 ರ ಒಳಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕಾಗಿದೆ.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

2 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

3 hours ago