Featured

ಕಟೀಲು ಮೇಳದ ಟ್ರಸ್ಟ್ ವಿರುದ್ದ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು : ಕಟೀಲು ಯಕ್ಷಗಾನ ಮೇಳದಕ್ಕೆ ಸಂಬಂಧಿಸಿದ ಯಕ್ಷ ಧರ್ಮಭೋದಿನಿ ಚಾರಿಟೇಬಲ್ ಟ್ರಸ್ಟ್ ವಿರುದ್ದ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇಳಕ್ಕೆ ಸಂಬಂಧಿಸಿದ ಯಕ್ಷ ಧರ್ಮಭೋದಿನಿ ಚಾರಿಟೇಬಲ್ ಟ್ರಸ್ಟ್ ನ ವ್ಯವಹಾರಗಳ ಸಮರ್ಪಕವಾಗಿಲ್ಲ ಎಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿಗಳು ಎರಡು ತಿಂಗಳ ಹಿಂದೆ ಸರಕಾರಕ್ಕೆ ಸಲ್ಲಿಸಿದ್ದ ವರದಿ ಹಿನ್ನಲೆಯಲ್ಲಿ ಟ್ರಸ್ಟ್ ನ ವಿರುದ್ದ ಪೊಲೀಸ್ ತನಿಖೆಗೆ ಮಂಗಳೂರಿನ 3 ನೇ ನ್ಯಾಯಾಧೀಶರ ಮತ್ತು ಜೆ.ಎಂ.ಎಫ್ . ಸಿ ನ್ಯಾಯಾಲಯ ಸೂಚಿಸಿದೆ.

ಕಟೀಲು ಮೆಳದ ಮಾಜಿ ಕಲಾವಿದ ಮಾಧವ ಬಂಗೇರ ಧಾರ್ಮಿಕ ದತ್ತಿ ಇಲಾಖೆ ಗಮನಕ್ಕೆ ತಾರದೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧಾರ್ಮಿಕ ದತ್ತಿಗಳ ನಿಯಮ ಉಲ್ಲಂಘಿಸಿ, ವಂಚನೆ ಮಾಡಿ ಹಣ ಮಾಡುವ ಉದ್ದೇಶದಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಧರ್ಮ ಭೋದಿನಿ ಚಾರಿಟೇಬಲ್ ಟ್ರಸ್ಟ್ ರಚಿಸಲಾಗಿದೆ ಎಂದು ಬಜ್ಪೆ ಠಾಣೆಗೆ ದೂರು ನೀಡಿದ್ದರು.ಆದರೆ ಪೊಲೀಸರು ದೂರು ದಾಖಲಿಸಲು ನಿರಾಕರಿಸಿದ ಹಿನ್ನಲೆಯಲ್ಲಿ ಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನಲೆಯಲ್ಲಿ ಟ್ರಸ್ಟ್ ನ ವಿರುದ್ದ ಪೊಲೀಸ್ ತನಿಖೆಗೆ ಮಂಗಳೂರಿನ 3 ನೇ ನ್ಯಾಯಾಧೀಶರ ಮತ್ತು ಜೆ.ಎಂ.ಎಫ್ . ಸಿ ನ್ಯಾಯಾಲಯ ಸೂಚಿಸಿದೆ.

ಅಂತೆಯೇ ಬಜ್ಪೆ ಠಾಣೆಯ ಪೊಲೀಸರು ಕಟೀಲು ಟ್ರಸ್ಟ್ ನ ಅಧ್ಯಕ್ಷರ ಸಹಿತ ಆಡಳಿತ ಮಂಡಳಿ ವಿರುದ್ದ ಸೆ.22 ಶನಿವಾರ ಕೇಸು ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ೧೦ ಜನರನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದೆ. ಅಧ್ಯಕ್ಷ ರಾಘವ ಆಚಾರ್ಯ ಹಾಗೂ ಕಾರ್ಯದರ್ಶಿ ಶಿವಾಜಿ ಶೆಟ್ಟಿ, ಟ್ರಸ್ಟಿಗಳಾದ ಶ್ರೀನಿವಾಸ್ ಭಟ್ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ, ರವಿರಾಜ್ ಆಚಾರ್ಯ, ಭುಜಂಗ ಶೆಟ್ಟಿ, ಸುಣ್ಣಂಬಳ ವಿಶ್ವೇಶ್ವರ ಭಟ್, ಉದಯನಂದ ಶೆಟ್ಟಿ, ಮತ್ತು ರಾಮಣ್ಣ ಶೆಟ್ಟಿ ಸೇರಿದಂತೆ ಹತ್ತು ಮಂದಿಯನ್ನು ಪ್ರಕರಣದಲ್ಲಿ ಆರೋಪಿಗಳನ್ನಾಗಿ ಹೆಸರಿಸಲಾಗಿದೆ.

ನ್ಯಾಯಾಲದ ಆದೇಶದಂತೆ ಆರೋಪಿಗಳ ವಿರುದ್ದ 406,417,418,420,109 ಮತ್ತು 120 ಬಿ ಸೆಕ್ಷನ್ ಗಳಡಿ ಕೇಸು ದಾಖಲಿಸಿಕೊಳ್ಳಲಾಗಿದೆ. ಬಜ್ಪೆ ಪೊಲೀಸರು ಎಫ್. ಐ.ಆರ್ ಪ್ರತಿಯನ್ನು ಸೋಮವಾರ ನ್ಯಾಯಾಲಯಕ್ಕೆ ಸಲ್ಲಿಸಲಿದ್ದು, ಪೊಲೀಸರು ತನಿಖೆ ನಡೆಸಿ ಡಿಸೆಂಬರ್ 27 ರ ಒಳಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕಾಗಿದೆ.

Vishwa News 24

Recent Posts

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

7 minutes ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

16 minutes ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

24 minutes ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

31 minutes ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

54 minutes ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ – vishwanews24

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…

1 hour ago