Featured

ಕಟೀಲು ಮೇಳ ಪ್ರಕರಣ : ವಿವಾದ ಸೌಹಾರ್ದ ಪರಿಹಾರ ಆವಶ್ಯ, ಅಗತ್ಯ ಬಿದ್ದರೆ ಸರಕಾರ ಮಧ್ಯ ಪ್ರವೇಶ : ಕೋಟ ಶ್ರೀನಿವಾಸ ಪೂಜಾರಿ -Vishwanews24

ಮಂಗಳೂರು: ಕಟೀಲು ಮೇಳದ ಪ್ರಕರಣ ಸಂಬಂಧಿಸಿ ಎರಡು ತಂಡಗಳ ನಡುವೆ ಸಮನ್ವಯ ಸಾಧಿಸಿ ಸೌಹಾರ್ದದಿಂದ ಇತ್ಯರ್ಥವಾಗುವ ಆವಶ್ಯಕತೆಯಿದೆ. ಅಗತ್ಯ ಬಿದ್ದರೆ ಸರಕಾರ ಮಧ್ಯ ಪ್ರವೇಶಿಸುತ್ತದೆ ಎಂದು ಸಚಿವ ಕೋಟ ಹೇಳಿದ್ದಾರೆ.

ಮೇಳಕ್ಕೆ ಸಂಬಂಧಪಟ್ಟ ಪ್ರಕರಣ ನ್ಯಾಯಾಲಯದಲ್ಲಿದೆ. ಈ ಬಗ್ಗೆ ನಡೆಯುತ್ತಿರುವ ಚರ್ಚೆ, ಮಾಧ್ಯಮ ವರದಿಗಳು ಮತ್ತು ಕಲಾಸಕ್ತರು ವ್ಯಕ್ತಪಡಿಸುತ್ತಿರುವ ಅಭಿಪ್ರಾಯಗಳನ್ನು ಗಮನದಲ್ಲಿರಿಸಿಕೊಂಡು ಜಿಲ್ಲಾ ಉಸ್ತುವಾರಿ ಸಚಿವನಾಗಿ ಪೂರ್ಣ ವರದಿಯನ್ನು ನೀಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದೆ; ಅವರು ಸಲ್ಲಿಸಿದ್ದಾರೆ. ಅದನ್ನು ಸರಕಾರ ಕೂಲಂಕಷವಾಗಿ ಪರಿಶೀಲಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತದೆ. ಈ ಸಮಸ್ಯೆ ಸೌಹಾರ್ದಯುತವಾಗಿ ಪರಿಹಾರ ಕಾಣಬೇಕು ಎಂಬುದು ನನ್ನ ಇಚ್ಛೆ ಎಂದರು.

ಸರಕಾರ ಎಲ್ಲ ವಿದ್ಯಮಾನಗಳನ್ನು ಗಮನಿಸುತ್ತಿದೆ. ಆಗಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದರ ಜತೆಗೆ ಮುಂದೆ ಇಂತಹ ಸಮಸ್ಯೆಗಳು ಬಾರದಂತೆ ಕ್ರಮ ಕೈಗೊಳ್ಳಬೇಕಿದೆ. ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸದೆ ಸಮಸ್ಯೆ ಪರಿಹರಿಸುವುದಕ್ಕೆ ಪ್ರಯತ್ನಿಸುವುದು ಹೆಚ್ಚು ಸೂಕ್ತ ಎಂದರು.

ಸಾಮೂಹಿಕ ವಿವಾಹಕ್ಕೆ ಸಿದ್ಧತೆ
“ಎ’ ಗ್ರೇಡ್‌ ಮುಜರಾಯಿ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ಏರ್ಪಡಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಸಚಿವ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ವರನಿಗೆ ಪ್ರೋತ್ಸಾಹ ಧನವಾಗಿ 5 ಸಾವಿರ ರೂ., ವಧುವಿಗೆ 10 ಸಾವಿರ ಮತ್ತು 40 ಸಾವಿರ ರೂ. ಬೆಲೆ ಬಾಳುವ ಚಿನ್ನದ ತಾಳಿ, ಅಂದಾಜು 8 ಗ್ರಾಂ ತೂಕದ ಎರಡು ಚಿನ್ನದ ಗುಂಡು ನೀಡಲಾಗುತ್ತದೆ. ಇದನ್ನು ದೇವಾಲಯದ ನಿಧಿಯಿಂದ ಭರಿಸಲಾಗುವುದು. ಸಾಮೂಹಿಕ ವಿವಾಹಕ್ಕಾಗಿ 2020ರ ಎ. 26 ಮತ್ತು ಮೇ 24 ಇವುಗಳಲ್ಲಿ ಒಂದು ದಿನಾಂಕವನ್ನು ನಿಗದಿಪಡಿಸಬೇಕು ಎಂದು ಸೂಚಿಸಿದರು.

ಸಾಮೂಹಿಕ ವಿವಾಹಕ್ಕೆ 30 ದಿನ ಮುಂಚಿತವಾಗಿ ನೋಂದಾಯಿಸಿಕೊಳ್ಳಬೇಕು. ವಿವಾಹ ನಡೆಯುವ ಸ್ಥಳದಲ್ಲೇ ಅಧಿಕಾರಿಗಳು ಇದ್ದು ವಿವಾಹ ನೋಂದಣಿ ಮಾಡಿಸಬೇಕು. ಪ್ರೋತ್ಸಾಹ ಧನವನ್ನು ವಧೂವರರ ಬ್ಯಾಂಕ್‌ ಖಾತೆಗಳಿಗೆ ಜಮೆ ಮಾಡಲಾಗುವುದು. ಜಿಲ್ಲಾಧಿಕಾರಿಗಳು ಮೇಲುಸ್ತುವಾರಿ ವಹಿಸಿಕೊಂಡು ಕಾರ್ಯಕ್ರಮ ಅನುಷ್ಠಾನಿಸಬೇಕು ಎಂದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

3 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

3 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

4 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

5 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

5 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

5 hours ago