Featured

ಕಟೀಲು ಮೇಳ ಪ್ರಕರಣ : ವಿವಾದ ಸೌಹಾರ್ದ ಪರಿಹಾರ ಆವಶ್ಯ, ಅಗತ್ಯ ಬಿದ್ದರೆ ಸರಕಾರ ಮಧ್ಯ ಪ್ರವೇಶ : ಕೋಟ ಶ್ರೀನಿವಾಸ ಪೂಜಾರಿ -Vishwanews24

ಮಂಗಳೂರು: ಕಟೀಲು ಮೇಳದ ಪ್ರಕರಣ ಸಂಬಂಧಿಸಿ ಎರಡು ತಂಡಗಳ ನಡುವೆ ಸಮನ್ವಯ ಸಾಧಿಸಿ ಸೌಹಾರ್ದದಿಂದ ಇತ್ಯರ್ಥವಾಗುವ ಆವಶ್ಯಕತೆಯಿದೆ. ಅಗತ್ಯ ಬಿದ್ದರೆ ಸರಕಾರ ಮಧ್ಯ ಪ್ರವೇಶಿಸುತ್ತದೆ ಎಂದು ಸಚಿವ ಕೋಟ ಹೇಳಿದ್ದಾರೆ.

ಮೇಳಕ್ಕೆ ಸಂಬಂಧಪಟ್ಟ ಪ್ರಕರಣ ನ್ಯಾಯಾಲಯದಲ್ಲಿದೆ. ಈ ಬಗ್ಗೆ ನಡೆಯುತ್ತಿರುವ ಚರ್ಚೆ, ಮಾಧ್ಯಮ ವರದಿಗಳು ಮತ್ತು ಕಲಾಸಕ್ತರು ವ್ಯಕ್ತಪಡಿಸುತ್ತಿರುವ ಅಭಿಪ್ರಾಯಗಳನ್ನು ಗಮನದಲ್ಲಿರಿಸಿಕೊಂಡು ಜಿಲ್ಲಾ ಉಸ್ತುವಾರಿ ಸಚಿವನಾಗಿ ಪೂರ್ಣ ವರದಿಯನ್ನು ನೀಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದೆ; ಅವರು ಸಲ್ಲಿಸಿದ್ದಾರೆ. ಅದನ್ನು ಸರಕಾರ ಕೂಲಂಕಷವಾಗಿ ಪರಿಶೀಲಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತದೆ. ಈ ಸಮಸ್ಯೆ ಸೌಹಾರ್ದಯುತವಾಗಿ ಪರಿಹಾರ ಕಾಣಬೇಕು ಎಂಬುದು ನನ್ನ ಇಚ್ಛೆ ಎಂದರು.

ಸರಕಾರ ಎಲ್ಲ ವಿದ್ಯಮಾನಗಳನ್ನು ಗಮನಿಸುತ್ತಿದೆ. ಆಗಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದರ ಜತೆಗೆ ಮುಂದೆ ಇಂತಹ ಸಮಸ್ಯೆಗಳು ಬಾರದಂತೆ ಕ್ರಮ ಕೈಗೊಳ್ಳಬೇಕಿದೆ. ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸದೆ ಸಮಸ್ಯೆ ಪರಿಹರಿಸುವುದಕ್ಕೆ ಪ್ರಯತ್ನಿಸುವುದು ಹೆಚ್ಚು ಸೂಕ್ತ ಎಂದರು.

ಸಾಮೂಹಿಕ ವಿವಾಹಕ್ಕೆ ಸಿದ್ಧತೆ
“ಎ’ ಗ್ರೇಡ್‌ ಮುಜರಾಯಿ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ಏರ್ಪಡಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಸಚಿವ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ವರನಿಗೆ ಪ್ರೋತ್ಸಾಹ ಧನವಾಗಿ 5 ಸಾವಿರ ರೂ., ವಧುವಿಗೆ 10 ಸಾವಿರ ಮತ್ತು 40 ಸಾವಿರ ರೂ. ಬೆಲೆ ಬಾಳುವ ಚಿನ್ನದ ತಾಳಿ, ಅಂದಾಜು 8 ಗ್ರಾಂ ತೂಕದ ಎರಡು ಚಿನ್ನದ ಗುಂಡು ನೀಡಲಾಗುತ್ತದೆ. ಇದನ್ನು ದೇವಾಲಯದ ನಿಧಿಯಿಂದ ಭರಿಸಲಾಗುವುದು. ಸಾಮೂಹಿಕ ವಿವಾಹಕ್ಕಾಗಿ 2020ರ ಎ. 26 ಮತ್ತು ಮೇ 24 ಇವುಗಳಲ್ಲಿ ಒಂದು ದಿನಾಂಕವನ್ನು ನಿಗದಿಪಡಿಸಬೇಕು ಎಂದು ಸೂಚಿಸಿದರು.

ಸಾಮೂಹಿಕ ವಿವಾಹಕ್ಕೆ 30 ದಿನ ಮುಂಚಿತವಾಗಿ ನೋಂದಾಯಿಸಿಕೊಳ್ಳಬೇಕು. ವಿವಾಹ ನಡೆಯುವ ಸ್ಥಳದಲ್ಲೇ ಅಧಿಕಾರಿಗಳು ಇದ್ದು ವಿವಾಹ ನೋಂದಣಿ ಮಾಡಿಸಬೇಕು. ಪ್ರೋತ್ಸಾಹ ಧನವನ್ನು ವಧೂವರರ ಬ್ಯಾಂಕ್‌ ಖಾತೆಗಳಿಗೆ ಜಮೆ ಮಾಡಲಾಗುವುದು. ಜಿಲ್ಲಾಧಿಕಾರಿಗಳು ಮೇಲುಸ್ತುವಾರಿ ವಹಿಸಿಕೊಂಡು ಕಾರ್ಯಕ್ರಮ ಅನುಷ್ಠಾನಿಸಬೇಕು ಎಂದರು.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago