Featured

ಕಟೀಲು ಯಕ್ಷಗಾನ  ಮೇಳಗಳಿಗೆ 33 ಹೊಸ ಕಲಾವಿದರ ಸೇರ್ಪಡೆ – vishwanews24

ಕಟೀಲು ಯಕ್ಷಗಾನ  ಮೇಳಗಳಿಗೆ 33 ಹೊಸ ಕಲಾವಿದರ ಸೇರ್ಪಡೆ

ಕಟೀಲು: ಕಟೀಲು ಶ್ರೀ ದುರ್ಗಾ ಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಏಳು ಮೇಳಗಳ ತಿರುಗಾಟ ನವೆಂಬರ್ 16ರಂದು ಆರಂಭವಾಗಲಿದ್ದು, ಈ ನಿಟ್ಟಿನಲ್ಲಿ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ.

ಕಟೀಲು ಕ್ಷೇತ್ರದ ಆರು ಮೇಳಗಳಲ್ಲಿ 200ಕ್ಕೂ ಹೆಚ್ಚು ಕಲಾವಿದರು ಮತ್ತು 150ಕ್ಕೂ ಹೆಚ್ಚು ಸಹಾಯಕರು ಇದ್ದಾರೆ. ಇದೀಗ ಏಳನೇ ಮೇಳ ಹೊಸದಾಗಿ ಆರಂಭವಾಗುತ್ತಿರುವುದರಿಂದ ಹೊಸ ಹಿಮ್ಮೇಳ ಮತ್ತು ಮುಮ್ಮೇಳ ಕಲಾವಿದರನ್ನು ಸೇರಿಸಿಕೊಳ್ಳಲಾಗುತ್ತಿದೆ.

ಹೊಸ ಮೇಳದ ಆರಂಭದ ಹಿನ್ನೆಲೆಯಲ್ಲಿ ಮೂವತ್ತ ಮೂರರಷ್ಟು ಹೊಸ ಕಲಾವಿದರು ಈಗಾಗಲೇ ಸೇರ್ಪಡೆಗೊಂಡಿದ್ದಾರೆ. ಆದರೆ, ಇವರೆಲ್ಲರೂ ಹೊಸ ಮೇಳಕ್ಕೆ ಸೇರ್ಪಡೆಯಾದವರಲ್ಲ. ಈಗಾಗಲೇ ಇರುವ ಕಲಾವಿದರಲ್ಲಿ ಕೆಲವರು ಈ ಬಾರಿ ತಿರುಗಾಟಕ್ಕೆ ಬರುತ್ತಿಲ್ಲ. ಕೆಲವರಿಗೆ ಅನಾರೋಗ್ಯ, ಇನ್ನು ಕೆಲವರು ಬೇರೆ ಮೇಳ ಸೇರುವ ಕಾರಣ ನೀಡಿದ್ದಾರೆ. ಇದೀಗ ಸೇರ್ಪಡೆಯಾಗಿರುವ ಮೂವತ್ತರಷ್ಟು ಕಲಾವಿದರನ್ನು ಸೇರಿಸಿಕೊಂಡು ಒಂದಿಷ್ಟು ಬದಲಾವಣೆಗಳ ಮೂಲಕ ಹೊಸ ಮೇಳ ರೂಪುಗೊಳ್ಳಲಿದೆ ಎಂದು ತಿಳಿದುಬಂದಿದೆ.

ಹೊಸದಾಗಿ ಬಂದವರಲ್ಲಿ ಕೆಲವರು ಹವ್ಯಾಸಿಗಳಾಗಿ ಸಾಮರ್ಥಯ ಪ್ರದರ್ಶಿಸಿದವರು ಇದ್ದಾರೆ. ಕಟೀಲು ಮೇಳ ಬಿಟ್ಟು ಬೇರೆ ಮೇಳಕ್ಕೆ ಹೋಗಿ ವಾಪಸಾಗುವವರೂ ಇದ್ದಾರೆ. ಬೇರೆ ಮೇಳದಲ್ಲಿದ್ದು ಮೊದಲ ಬಾರಿ ಕಟೀಲು ಮೇಳದ ಸೇವೆಗೆ ಬಂದವರೂ ಇದ್ದಾರೆ.

ಹೊಸದಾಗಿ ಸೇರ್ಪಡೆ ಆದ ಕಲಾವಿದರು
ಹಿಮ್ಮೇಳ: ಬೆಳುವಾಯಿ ದೇವಾನಂದ ಭಟ್, ಅವಿನಾಶ್ ಬೈಪಡಿತ್ತಾಯ, ಹಿರಣ್ಮಯ ಹಿರಿಯಡ್ಕ, ಮೋಹನ ಶೆಟ್ಟಿಗಾರ್, ಗೋಪಾಲಕೃಷ್ಣ ಕಬಕ, ಸ್ತ್ರೀಪಾತ್ರ: ಅಕ್ಷಯ ಮಾರ್ನಾಡು, ಬೋಳಂತೂರು ಜಯರಾಮ ಶೆಟ್ಟಿ. ಹಾಸ್ಯ: ಮಿಜಾರು ತಿಮ್ಮಪ್ಪ, ಮುಮ್ಮೇಳ: ಸಂತೋಷ್ ಮಾನ್ಯ, ಭಾಸ್ಕರ ಎಕ್ಕಾರು, ಜೀವನ್ ಶೆಟ್ಟಿಗಾರ್‌ಕಿನ್ನಿಗೋಳಿ, ಕರುಣಾಕರ ಶೆಟ್ಟಿ ಬೆಳ್ತಂಗಡಿ, ಭುವನ್ ಶೆಟ್ಟಿ, ಹರೀಶ್ ಆಚಾರ್ಯ ಪಕ್ಷಿಕೆರೆ, ರಾಜೇಶ್ ಶೆಟ್ಟಿ ಮಾಳ, ಉತ್ತಮ್ ಪಡ್ಡು, ಸತೀಶ್ ದೈಗೋಳಿ, ಮಧುಸೂದನ್ ಪಚ್ಚನಾಡಿ, ದುರ್ಗಾಪ್ರಸಾದ್ ದೇವಾಡಿಗ, ಶ್ರೇಯಸ್ ರಾವ್, ಕೀರ್ತನ್ ನಾಯಕ್, ಮೋಹಿತ್‌, ರೋಹಿತ್, ಜನಾರ್ದನ ಬೆಳಾಲ್, ನಾರಾಯಣ ಸುವರ್ಣ, ಮುರಳೀಧರ ಪೆರ್ಲ, ಪ್ರಕಾಶ್ ನೀರ್ಚಾಲ್, ಸಂಗಮ್ ಶೆಟ್ಟಿಗಾರ್, ಕಾರ್ತಿಕ್ ಕಣಿಯೂರು, ಶ್ರೀಕುಮಾರ್ ಪೆರ್ಲ.

Vishwa News 24

Recent Posts

ಮಂಗಳೂರು : ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ – vishwanews24

ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…

18 minutes ago

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

3 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

3 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

3 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

3 days ago