ಕಟೀಲು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇನ್ನು ಮುಂದೆ ದೇವಳದ ರಥಬೀದಿಯಲ್ಲಿ ಮತ್ತು ಬಸ್ಸ್ಟ್ಯಾಂಡ್ನಲ್ಲಿ ವಾಹನ ಪಾರ್ಕಿಂಗ್ ಮಾಡಿದರೆ ಹಣ ನೀಡಬೇಕಾಗುತ್ತದೆ ಎಂದು ದೇವಳದ ಆಡಳಿತ ಮಂಡಳಿ ತಿಳಿಸಿದೆ.
ರಾಜ್ಯ ಉಚ್ಛ ನ್ಯಾಯಾಲಯದ ಆದೇಶದಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಆಯುಕ್ತರ ಸುತ್ತೋಲೆ ಮೇರೆಗೆ ದೇವಳದ ರಥಬೀದಿ ಮತ್ತು ಬಸ್ಸು ನಿಲ್ದಾಣದಲ್ಲಿ ವಾಹನ ನಿಲುಗಡೆ ವ್ಯವಸ್ಥೆಯನ್ನು ಹಣ ನೀಡಿ ನಿಲುಗಡೆ ಮಾಡುವಂತೆ ಪರಿವರ್ತಿಸಲಾಗಿದೆ.
ಆಡಳಿತ ಮಂಡಳಿ ದರದ ಕುರಿತು ಬ್ಯಾನರ್ ಅಳವಡಿಸಿದ್ದು ದ್ವಿಚಕ್ರ ವಾಹನ 10 ರೂ, ತ್ರಿಚಕ್ರ ವಾಹನ 20ರೂ, ಲಘುವಾಹನ 30ರೂ ಹಾಗೂ ಘನ ವಾಹನಕ್ಕೆ 50 ರೂ ನಿಗದಿಪಡಿಸಲಾಗಿದೆ.
ಇದನ್ನೂ ಓದಿ : ಪ್ರವೀಣ್ ನೆಟ್ಟಾರು ನಿವಾಸಕ್ಕೆ ಕುಮಾರಸ್ವಾಮಿ ಭೇಟಿ , 5 ಲಕ್ಷ ರೂ.ಚೆಕ್ ವಿತರಿಸಿದ ಮಾಜಿ ಸಿ ಎಂ. Vishwanews24
ವಾಹನ ಪಾರ್ಕಿಂಗ್ ಶುಲ್ಕ ದರ ನಿಗದಿಪಡಿಸಿರುವುದರಿಂದ ದೇವಳಕ್ಕೆ ಬರುವ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಈ ಆದೇಶವನ್ನು ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಆಡಳಿತ ಮಂಡಳಿ ದೇವಳದ ಆಡಳಿತ ಮಂಡಳಿ ಪೇ ಪಾರ್ಕಿಂಗ್ ಬಗ್ಗೆ ಸರ್ಕಾರದ ಧಾರ್ಮಿಕ ಇಲಾಖೆಯಿಂದ ಆದೇಶ ಬಂದಿದ್ದು ಈ ಬಗ್ಗೆ ಬ್ಯಾನರ್ ಅಳವಡಿಸಲಾಗಿದೆ. ಈವರೆಗೆ ಪೇ ಪಾರ್ಕಿಂಗ್ ಆರಂಭಿಸಿಲ್ಲವೆಂದು ತಿಳಿಸಿದೆ.
ಈ ನಡುವೆ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಶಿಫಾರಸ್ಸು ಮೇರೆಗೆ ತಕ್ಷಣದಿಂದ ಪಾರ್ಕಿಂಗ್ ಶುಲ್ಕ ಸಂಗಹ್ರಹವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು ತಾಂತ್ರಿಕ ಪ್ರಕ್ರಿಯೆಗಳ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ದೇವಳದ ಮೂಲಗಳು ತಿಳಿಸಿವೆ.
ಇದನ್ನೂ ಓದಿ : ಮುಂದಿನ ದಿನಗಳಲ್ಲಿ ಹತ್ಯೆಯಾದ ಫಾಝಿಲ್ ಮತ್ತು ಮಸೂದ್ ಮನೆಗೆ ಭೇಟಿ : ಸಿಎಂ ಬೊಮ್ಮಾಯಿ – Vishwanews24
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…