Featured

ಕಟೀಲು ವಾಹನ ಪಾರ್ಕಿಂಗ್ ಶುಲ್ಕ : ತಾತ್ಕಾಲಿಕ ತಡೆ – Vishwanews24

ಕಟೀಲು ವಾಹನ ಪಾರ್ಕಿಂಗ್ ಶುಲ್ಕ : ತಾತ್ಕಾಲಿಕ ತಡೆ

ಕಟೀಲು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇನ್ನು ಮುಂದೆ ದೇವಳದ ರಥಬೀದಿಯಲ್ಲಿ ಮತ್ತು ಬಸ್‌ಸ್ಟ್ಯಾಂಡ್‌ನಲ್ಲಿ ವಾಹನ ಪಾರ್ಕಿಂಗ್ ಮಾಡಿದರೆ ಹಣ ನೀಡಬೇಕಾಗುತ್ತದೆ ಎಂದು ದೇವಳದ ಆಡಳಿತ ಮಂಡಳಿ ತಿಳಿಸಿದೆ.

ರಾಜ್ಯ ಉಚ್ಛ ನ್ಯಾಯಾಲಯದ ಆದೇಶದಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಆಯುಕ್ತರ ಸುತ್ತೋಲೆ ಮೇರೆಗೆ ದೇವಳದ ರಥಬೀದಿ ಮತ್ತು ಬಸ್ಸು ನಿಲ್ದಾಣದಲ್ಲಿ ವಾಹನ ನಿಲುಗಡೆ ವ್ಯವಸ್ಥೆಯನ್ನು ಹಣ ನೀಡಿ ನಿಲುಗಡೆ ಮಾಡುವಂತೆ ಪರಿವರ್ತಿಸಲಾಗಿದೆ.

ಆಡಳಿತ ಮಂಡಳಿ ದರದ ಕುರಿತು ಬ್ಯಾನರ್ ಅಳವಡಿಸಿದ್ದು ದ್ವಿಚಕ್ರ ವಾಹನ 10 ರೂ, ತ್ರಿಚಕ್ರ ವಾಹನ 20ರೂ, ಲಘುವಾಹನ 30ರೂ ಹಾಗೂ ಘನ ವಾಹನಕ್ಕೆ 50 ರೂ ನಿಗದಿಪಡಿಸಲಾಗಿದೆ.

ಇದನ್ನೂ ಓದಿ : ಪ್ರವೀಣ್ ನೆಟ್ಟಾರು ನಿವಾಸಕ್ಕೆ ಕುಮಾರಸ್ವಾಮಿ ಭೇಟಿ , 5 ಲಕ್ಷ ರೂ.ಚೆಕ್ ವಿತರಿಸಿದ ಮಾಜಿ ಸಿ ಎಂ. Vishwanews24

ವಾಹನ ಪಾರ್ಕಿಂಗ್ ಶುಲ್ಕ ದರ ನಿಗದಿಪಡಿಸಿರುವುದರಿಂದ ದೇವಳಕ್ಕೆ ಬರುವ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಈ ಆದೇಶವನ್ನು ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಆಡಳಿತ ಮಂಡಳಿ ದೇವಳದ ಆಡಳಿತ ಮಂಡಳಿ ಪೇ ಪಾರ್ಕಿಂಗ್ ಬಗ್ಗೆ ಸರ್ಕಾರದ ಧಾರ್ಮಿಕ ಇಲಾಖೆಯಿಂದ ಆದೇಶ ಬಂದಿದ್ದು ಈ ಬಗ್ಗೆ ಬ್ಯಾನರ್ ಅಳವಡಿಸಲಾಗಿದೆ. ಈವರೆಗೆ ಪೇ ಪಾರ್ಕಿಂಗ್ ಆರಂಭಿಸಿಲ್ಲವೆಂದು ತಿಳಿಸಿದೆ.

ಈ ನಡುವೆ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಶಿಫಾರಸ್ಸು ಮೇರೆಗೆ ತಕ್ಷಣದಿಂದ ಪಾರ್ಕಿಂಗ್ ಶುಲ್ಕ ಸಂಗಹ್ರಹವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು ತಾಂತ್ರಿಕ ಪ್ರಕ್ರಿಯೆಗಳ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ದೇವಳದ ಮೂಲಗಳು ತಿಳಿಸಿವೆ.

ಇದನ್ನೂ ಓದಿ : ಮುಂದಿನ ದಿನಗಳಲ್ಲಿ ಹತ್ಯೆಯಾದ ಫಾಝಿಲ್ ಮತ್ತು ಮಸೂದ್ ಮನೆಗೆ ಭೇಟಿ : ಸಿಎಂ ಬೊಮ್ಮಾಯಿ – Vishwanews24 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

8 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

9 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

9 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

9 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago