ಮಂಗಳೂರು: ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ 36ನೆಯ ಅಧಿಪತಿಗಳಾದ ಜಗದ್ಗುರು ಶ್ರೀಭಾರತೀ ತೀರ್ಥ ಮಹಾಸ್ವಾಮಿಗಳವರ ಸನ್ಯಾಸ ಸ್ವೀಕಾರ ಸುವರ್ಣಮಹೋತ್ಸವದ ಸ್ಮರಣಾರ್ಥ ಕಟೀಲು ಶ್ರೀದುರ್ಗಾ ಪರಮೇಶ್ವರಿ ಕ್ಷೇತ್ರಕ್ಕೆ ಶೃಂಗೇರಿ ಶಾರದಾಪೀಠದ ವತಿಯಿಂದ 40 ಲಕ್ಷ ರೂಪಾಯಿ ಮೌಲ್ಯದ ಸ್ವರ್ಣಪಾದುಕೆ ಹಾಗೂ ಒಡ್ಯಾಣವನ್ನು ಸಮರ್ಪಿಸಲಾಗಿದೆ.
ಶ್ರೀಭಾರತೀ ತೀರ್ಥ ಮಹಾಸ್ವಾಮಿಗಳವರು 1974 ರಲ್ಲಿ ಸನ್ಯಾಸ ಸ್ವೀಕರಿಸಿದ್ದು, 2024 ಕ್ಕೆ 50 ವರ್ಷಗಳಾಗುತ್ತಿವೆ. ಶೃಂಗೇರಿಯಲ್ಲಿ ಉಭಯ ಜಗದ್ಗುರುಗಳು ಈ ಪಾದುಕೆ ಹಾಗೂ ಒಡ್ಯಾಣವನ್ನು ಕಟೀಲು ದೇವಳದ ಆನುವಂಶಿಕ ಅರ್ಚಕ ಶ್ರೀಹರಿನಾರಾಯಣದಾಸ ಅಸ್ರಣ್ಣ ಅವರಿಗೆ ಹಸ್ತಾಂತರಿಸಿದರು. ಇದನ್ನು ಜೂ.19 ರಂದು ಶ್ರೀದೇವಿಗೆ ತೊಡಿಸಿ ಅಲಂಕಾರ ಮಾಡಲಾಯಿತು. ಈ ಸೇವೆಯನ್ನು ಶೃಂಗೇರಿ ಶ್ರೀಮಠದ ಶಿಷ್ಯರಾದ ಆಂಧ್ರಪ್ರದೇಶದ ಶ್ರೀಪೋಲಿಸೆಟ್ಟಿ ಶ್ಯಾಮ್ ಸುಂದರ್ ಅವರು ನೀಡಿರುತ್ತಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…